ಇಂದಿರಾ ಕ್ಯಾಂಟೀನ್ಗೆ ಒಂದು ವರ್ಷದ ಸಂಭ್ರಮ
Team Udayavani, Aug 16, 2018, 12:58 PM IST
ಬೆಂಗಳೂರು: ನಗರದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುತ್ತಿರುವ ಇಂದಿರಾ ಕ್ಯಾಂಟೀನ್ ಯೋಜನೆ ಅನುಷ್ಠಾನಗೊಂಡು ವರ್ಷ ಕಳೆದಿದ್ದು, ಒಂದು ವರ್ಷದಲ್ಲಿ ಆರು ಕೋಟಿ ಜನರಿಗೆ ಆಹಾರ ಪೂರಕೆ ಮಾಡಿದ ಕೀರ್ತಿಗೆ ಕ್ಯಾಂಟೀನ್ಗಳಿಗೆ ಸೇರಿದೆ.
ರಾಜ್ಯ ಸರ್ಕಾರದ 2017-18ನೇ ಸಾಲಿನ ಬಜೆಟ್ನಲ್ಲಿ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಘೋಷಣೆ ಮಾಡಲಾಗಿತ್ತು. ಅದರಂತೆ ಪಾಲಿಕೆಯ ವ್ಯಾಪ್ತಿಯಲ್ಲಿ ಸದ್ಯ ಒಟ್ಟು 171 ಇಂದಿರಾ ಕ್ಯಾಂಟೀನಗಳು ಹಾಗೂ 17 ಸಂಚಾರಿ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿದ್ದು, ನಿತ್ಯ ಸುಮಾರು 2 ಲಕ್ಷ ಮಂದಿಗೆ ಆಹಾರ ಪೂರೈಸುತ್ತಿವೆ.
ಇದರೊಂದಿಗೆ ಜನರನ್ನು ತನ್ನತ್ತ ಸೆಳೆಯುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ಗಳ ಮೆನು ಸಹ ಬದಲಾವಣೆ ಮಾಡಲಾಗಿದೆ. ಜತೆಗೆ ಕೆಲವು ಕ್ಯಾಂಟೀನ್ಗಳಲ್ಲಿ ಪ್ರಾಯೋಗಿಕವಾಗಿ ಮುದ್ದೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾಫಿ-ಟೀ ಸಹ ನೀಡಲು ಯೋಜನೆ ರೂಪಿಸಲಾಗಿದೆ.
ಇಂದಿರಾ ಕ್ಯಾಂಟೀನ್ ಸಾಗಿ ಬಂದ ಹಾದಿ: ಮುಖ್ಯಮಂತ್ರಿಗಳು 2017-18ನೇ ಬಜೆಟ್ನಲ್ಲಿ ಇಂದಿರಾ ಕ್ಯಾಂಟೀನ್ ಘೋಷಿಸಿದ್ದರು. ಅದರಂತೆ 2018ರ ಆ.16ರಂದು 101 ಕ್ಯಾಂಟೀನ್ಗಳಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಿದ್ದರು. ಆ ನಂತರದಲ್ಲಿ ಗಾಂಧಿ ಜಯಂತಿ 50 ಕ್ಯಾಂಟೀನ್ಗಳು ಹಾಗೂ ಜನವರಿ ವೇಳೆ 23 ಕ್ಯಾಂಟೀನ್ಗಳು ಸಾರ್ವಜನಿಕರಿಗೆ ಲಭ್ಯವಾಗಿದ್ದವು.
ಆದರೆ, ಪಾಲಿಕೆಯ 17 ವಾರ್ಡ್ಗಳಲ್ಲಿ ಕ್ಯಾಂಟೀನ್ಗಳನ್ನು ನಿರ್ಮಿಸಲು ಜಾಗ ದೊರೆಯದ ಹಿನ್ನೆಲೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾದನ ಸಂಚಾರಿ ಮೊಬೈಲ್ ಕ್ಯಾಂಟೀನ್ಗಳನ್ನು ಪಾಲಿಕೆಯಿಂದ ಪರಿಚಯಿಸಲಾಗಿತ್ತು. ಅದರಂತೆ ಜನವರಿ 26ರಂದು 24 ಮೊಬೈಲ್ ಇಂದಿರಾ ಕ್ಯಾಂಟೀನ್ಗಳಿಗೆ ಚಾಲನೆ ನೀಡಲಾಗಿತ್ತಾದರೂ, ಸದ್ಯ 17 ಸಂಚಾರಿ ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿವೆ.
ಸೈನಿಕರಿಂದ ಕ್ಯಾಂಟೀನ್ಗಳಲ್ಲಿ ಶಿಸ್ತು: ಇಂದಿರಾ ಕ್ಯಾಂಟೀನ್ ಯೋಜನೆಗಳು ಜಾರಿಗೊಳಿಸಿದ ಬಳಿಕ ಕೆಲವೊಂದು ವಾರ್ಡ್ಗಳಲ್ಲಿ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಗಳು ನಡೆದಿದ್ದವು. ಜತೆಗೆ ಕ್ಯಾಂಟೀನ್ ಸಿಬ್ಬಂದಿ ಆಹಾರ ಸಮರ್ಪಕವಾಗಿ ಪೂರೈಕೆ ಮಾಡುತ್ತಿಲ್ಲವೆಂಬ ದೂರುಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ಪಾಲಿಕೆಯ ಪ್ರತಿಯೊಂದು ಕ್ಯಾಂಟೀನ್ಗೂ ಮಾರ್ಷಲ್ ನೇಮಿಸುವ ಮೂಲಕ ಶಿಸ್ತು ತರಲಾಗಿತ್ತು.
ಯಾವುದೇ ಆಹಾರ ಸರಬರಾಜು ಹಾಗೂ ವಿತರಣೆ ಅನುಭವವಿಲ್ಲದಿದ್ದರೂ ಯಶಸ್ವಿಯಾಗಿ ಒಂದು ವರ್ಷ ಕ್ಯಾಂಟೀನ್ಗಳನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳನ್ನು ತರಲಾಗುವುದು.
-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತರು
2017ರ ಆ.16 ರಿಂದ ಇಲ್ಲಿವರೆಗೆ
-6 ಕೋಟಿ ಮಂದಿ ಊಟ, ತಿಂಡಿ ಸೇವಿಸಿದವರು
-2.15 ಲಕ್ಷ ಮಂದಿ ಪ್ರತಿ ದಿನ ಊಟ, ತಿಂಡಿ ಸೇವಿಸಿದವರು-
-1,200 ಸರಾಸರಿ ಜನ ಒಂದು ಕ್ಯಾಂಟೀನ್ನಲ್ಲಿ ಊಟ, ತಿಂಡಿ ಮಾಡಿದವರು-
-20 ಕೇಂದ್ರೀಕೃತ ಅಡುಗೆ ಮನೆಗಳು
-24 ಮೊಬೈಲ್ ಕ್ಯಾಂಟೀನ್ಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ