ಅಸ್ಸಾಂ ಎನ್ಆರ್ಸಿ: ವಿಸ್ತೃತ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶ
Team Udayavani, Aug 16, 2018, 4:14 PM IST
ಹೊಸದಿಲ್ಲಿ : ಅಸ್ಸಾಂ ಎನ್ಆರ್ಸಿ ಕರಡು ಪಟ್ಟಿಗೆ ಸೇರ್ಪಡೆಯಾಗದ ಜಿಲ್ಲಾವಾರು ಜನರ ಶೇಕಡಾವಾರು ವಿವರಗಳನ್ನು ನೀಡುವಂತೆ ಸುಪ್ರಿಂ ಕೋರ್ಟ್ ಅಸ್ಸಾಂ ಎನ್ಆರ್ಸಿ ಸಂಚಾಲಕ ಪ್ರತೀಕ್ ಹಜೇಲಾ ಅವರಿಗೆ ಆದೇಶಿಸಿದ್ದು ಮುಂದಿನ ವಿಚಾರಣೆಯನ್ನು ಆ.28ಕ್ಕೆ ನಿಗದಿಸಿದೆ.
ಅಸ್ಸಾಂ ಕರಡು ಎನ್ಆರ್ಸಿಯ ಪ್ರತಿಗಳು ಜನರಿಗೆ ಸುಲಭದಲ್ಲಿ ದೊರಕುವಂತಾಗಲು ಅವುಗಳ ಪ್ರತಿಗಳನ್ನು ಎಲ್ಲ ಪಂಚಾಯತ್ ಕಾರ್ಯಾಲಯಗಳಲ್ಲಿ ಸಿಗುವಂತೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಹಜೇಲಾ ಅವರಿಗೆ ಆದೇಶಿಸಿದೆ.
ಇದೇ ರೀತಿ ಕ್ಲೇಮು ಮತ್ತು ಆಕ್ಷೇಪ ಸಲ್ಲಿಸುವ ಅರ್ಜಿ ನಮೂನೆಗಳನ್ನು ಆಗಸ್ಟ್ 20ರೊಳಗೆ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕೆಂದು ಸೂಚಿಸಿರುವ ಸುಪ್ರೀಂ ಕೋರ್ಟ್, ಇವುಗಳನ್ನು ಆಗಸ್ಟ್ 30ರಿಂದ ಸ್ವೀಕರಿಸುವ ಕೆಲಸವನ್ನು ಆರಂಭಿಸುವಂತೆ ಸೂಚಿಸಿದೆ.
ಅಸ್ಸಾಂ ಎನ್ಆರ್ಸಿ ಕುರಿತಂತೆ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್, ಆಲ್ ಅಸ್ಸಾಂ, ಮೈನಾರಿಟಿ ಸ್ಟೂಡೆಂಟ್ಸ್ ಯೂನಿಯನ್ ಸೇರಿದಂತೆ ಎಲ್ಲ ಹಿತಾಸಕ್ತಿದಾರರ ಅಭಿಪ್ರಾಯಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ.
ಈ ಹಿಂದೆ ಅಸ್ಸಾಂ ಎನ್ಆರ್ಸಿ ಕುರಿತಂತೆ ತಮ್ಮ ಅಧಿಕಾರ ವ್ಯಾಪ್ತಿ ಮೀರಿದ ಸಾರ್ವಜನಿಕ ಹೇಳಿಕೆ ನೀಡಿದ ಕಾರಣಕ್ಕೆ ಸುಪ್ರೀಂ ಕೋರ್ಟ್ ಎನ್ಆರ್ಸಿ ಸಂಚಾಲಕ ಹಜೇಲಾ ಅವನ್ನು ತರಾಟೆಗೆ ತೆಗೆದುಕೊಂಡಿತ್ತು. “ನಿಮ್ಮ ಕೆಲಸ ಎನ್ಆರ್ಸಿ ಕರಡು ಸಿದ್ಧಪಡಿಸುವುದೇ ಹೊರತು ಮಾಧ್ಯಮಕ್ಕೆ ಮಾಹಿತಿ ನೀಡುವುದಲ್ಲ; ಮಾಧ್ಯಮಕ್ಕೆ ಮಾಹಿತಿ ನೀಡಲು ನೀವು ಯಾರು?’ ಎಂದು ಜಸ್ಟಿಸ್ ರಂಜನ್ ಗೊಗೋಯಿ ನೇತೃತ್ವದ ಪೀಠ ಪ್ರಶ್ನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ