ಅಂಡಾರು: ಆಯರೆಬೆಟ್ಟು ಮುಳುಗು ಸೇತುವೆ ಕುಸಿತ


Team Udayavani, Aug 17, 2018, 6:00 AM IST

1608ajke01.jpg

ಅಜೆಕಾರು: ವರಂಗ ಗ್ರಾ. ಪಂ. ವ್ಯಾಪ್ತಿಯ ಅಂಡಾರು ಗ್ರಾಮದ ಆಯರ ಬೆಟ್ಟು ಪರಿಸರದ ಮಳುಗು ಸೇತುವೆ ಭಾರೀ ಮಳೆಗೆ ಕುಸಿತಗೊಂಡಿದ್ದು ಸ್ಥಳೀಯರಿಗೆ ಸಂಪರ್ಕ ಕಡಿತದ ಭೀತಿ ಎದುರಾಗಿದೆ.

ಸುಮಾರು 2 ದಶಕಗಳ ಹಿಂದೆ ನಿರ್ಮಾಣ ವಾದ ಈ ಮುಳುಗು ಸೇತುವೆಯು ಸ್ಥಳೀಯರಿಗೆ ಮಳೆಗಾಲದಲ್ಲಿ ಸಂಚರಿಸಲು ಏಕೈಕ ರಸ್ತೆಯಾಗಿದೆ. ಘಟ್ಟ ಪ್ರದೇಶದಲ್ಲಿ ಸುರಿದ ಭಾರೀ ಮಳೆಗೆ ಪ್ರವಾಹ ಬಂದು ಮುಳುಗು ಸೇತುವೆ ಕುಸಿತಗೊಂಡಿದೆ. ಈ ಭಾಗದಲ್ಲಿ ಇನ್ನೂ ಒಂದೆರಡು ತಿಂಗಳು ಭಾರೀ ಮಳೆಯಾಗುವುದರಿಂದ ಮುಳುಗು ಸೇತುವೆ ಸಂಪೂರ್ಣ ಕೊಚ್ಚಿ ಹೋಗುವ ಆತಂಕ ಸ್ಥಳಿಯರದ್ದು. ಆಯರಬೆಟ್ಟು, ಪೈತಾಳ ದರ್ಖಾಸು, ಪರಿಶಿಷ್ಟ ಪಂಗಡ ಕಾಲನಿ, ಪಕ್ಕಿಬೈಲು ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಮುಳುಗು ಸೇತುವೆ ಕುಸಿತದಿಂದ ಸಮಸ್ಯೆ ಎದುರಾಗಿದೆ.

ಸುಮಾರು 80 ಮನೆಗಳು ಈ ಪರಿಸರ ದಲ್ಲಿದ್ದು ಮಲೆಕುಡಿಯ ಸಮುದಾಯದ ಜನತೆಯೇ ಬಹುತೇಕರಾಗಿದ್ದಾರೆ.ಅಂಡಾರು ಪೇಟೆಯಿಂದ ಪೈತಾಳ ಭಾಗವನ್ನು ಸಂಪರ್ಕಿಸುವ ಏಕೈಕ ರಸ್ತೆ ಇದಾಗಿದ್ದು ಸಂಪೂರ್ಣ ಕುಸಿತಗೊಂಡಲ್ಲಿ ಈ ಭಾಗದ ಜನತೆ ಸಂಪರ್ಕ ಕಳೆದು ಕೊಳ್ಳಲಿದ್ದಾರೆ.

ಸಂಪೂರ್ಣ ಕುಸಿತದ ಮೊದಲು ಶಾಶ್ವತವಾದ ಸೇತುವೆ ನಿರ್ಮಾಣಕ್ಕೆ ಜನಪ್ರತಿನಿಧಿಗಳು ಹಾಗೂ ಇಲಾಖಾ ಅಧಿಕಾರಿಗಳು ಸ್ಪಂದಿಸಬೇಕಾಗಿದೆ ಎಂಬುದು ಸ್ಥಳೀಯರ ಮನವಿಯಾಗಿದೆ. ಈ ಬಗ್ಗೆ  ಹೊಸ ಸೇತುವೆ ನಿರ್ಮಾಣದ ಬಗ್ಗೆ ಈಗಾಗಲೇ ಗ್ರಾಮ ಪಂಚಾಯತ್‌, ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳಿಗೆ  ಸ್ಥಳೀಯರು ಮನವಿ ಸಲ್ಲಿಸಿದ್ದಾರೆ.

ಹಲವು ವರ್ಷಗಳಿಂದ ಮನವಿ
ಮುಳುಗು ಸೇತುವೆಗೆ ಮುಕ್ತಿಗೊಳಿಸಿ ವಿಶಾಲ ಸೇತುವೆ ನಿರ್ಮಿಸುವಂತೆ ಕಳೆದ 5- 6 ವರ್ಷಗಳಿಂದ ಸ್ಥಳೀಯರು 
ಜನಪ್ರತಿನಿಧಿಗಳಿಗೆ, ಇಲಾಖಾ ಅಧಿಕಾರಿಗಳಿಗೆ ಮನವಿ ಮಾಡುತ್ತಾ ಬಂದಿದ್ದರೂ ಸೇತುವೆ ನಿಮಾಣಗೊಂಡಿಲ್ಲ. 2 ವರ್ಷಗಳ ಹಿಂದೆ ಮೋರಿ ಅಳವಡಿಸಿ ಮುಳುಗು ಸೇತುವೆಯ ಎತ್ತರ ಏರಿಸುವ ಯೋಜನೆ ರೂಪಿಸಲಾಗಿತ್ತು ಆದರೆ ಇದು ತಾತ್ಕಾಲಿಕ ವ್ಯವಸ್ಥೆಯಾಗಿರುದನ್ನು ಮನಗಂಡ ಸ್ಥಳೀಯರು ವಿಶಾಲ ಸೇತುವೆಗೆ ಬೇಡಿಕೆ ಇಟ್ಟಿದ್ದರು.

ಹಲವು ಅವಘಡ
ಮಳೆಗಾಲ ಪ್ರಾರಂಭಗೊಂಡ ಕೂಡಲೇ ಈ ಪ್ರದೇಶದಲ್ಲಿ ಪ್ರತಿ ನಿತ್ಯ ನೆರೆ ಬಂದು ಮುಳುಗು ಸೇತುವೆ ಮುಳುಗುವುದರಿಂದ ಅವಘಡ ನಿರಂತರವಾಗುತ್ತಿದೆ. ಕಳೆದ ಒಂದು ವಾರದ ಅವಧಿಯಲ್ಲಿ 2 ಅವಘಡಗಳು ನಡೆದಿವೆ.

ಸ್ಥಳೀಯ ವಿದ್ಯಾರ್ಥಿನಿಯೋರ್ವಳು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ತಡೆಗೋಡೆ ಇಲ್ಲದೆ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗುತ್ತಿದ್ದಾಗ ರಿûಾಚಾಲಕರೋರ್ವರು ಗಮನಿಸಿ ರಕ್ಷಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಸೇತುವೆಯ ಮೇಲೆ ರಾತ್ರಿ ವೇಳೆ ನೀರು ಹರಿಯುತ್ತಿರುವುದು ಗಮನಕ್ಕೆ ಬಾರದೆ ಬೈಕ್‌ ಸವಾರರು ಬೈಕ್‌ ಸಹಿತ ಕೊಚ್ಚಿಕೊಂಡು ಹೋಗಿದ್ದರು ಸಹ ಅಪಾಯದಿಂದ ಪಾರಾಗಿದ್ದರು.

ಶಾಶ್ವತ ಸೇತುವೆ ನಿರ್ಮಾಣಕ್ಕೆ 
ಅಂದಾಜುಪಟ್ಟಿ 

ಈಗಾಗಲೇ ಸ್ಥಳ ಪರಿಶೀಲನೆ ನಡೆಸಲಾಗಿದ್ದು ಅತ್ಯವಶ್ಯಕವಾಗಿರುವ ಆಯರಬೆಟ್ಟು ಮುಳುಗು ಸೇತುವೆಯನ್ನು ತೆರವುಗೊಳಿಸಿ ಶಾಶ್ವತ  ಸೇತುವೆ ನಿರ್ಮಾಣಕ್ಕೆ ಸುಮಾರು 40ಲಕ್ಷ ರೂ ವೆಚ್ಚ ತಗಲಬಹುದು. ಈ ಬಗ್ಗೆ  ಅಂದಾಜು ಪಟ್ಟಿ ತಯಾರಿಸಿ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು.
– ಸದಾನಂದ ನಾಯಕ್‌
ಸಹಾಯಕ ಇಂಜಿನಿಯರ್‌ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗ ಕಾರ್ಕಳ

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.