ಭಾಸ್ಕರ ಶೆಟ್ಟಿ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ
Team Udayavani, Aug 17, 2018, 9:57 AM IST
ಉಡುಪಿ: ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ವಿಚಾರಣೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಗುರುವಾರ ಸಾಕ್ಷಿಧಾರರಿಗೆ ವ್ಯಕ್ತಿ ಯೋರ್ವ ಬೆದರಿಕೆ ಹಾಕಿದ್ದಾನೆ.
ಸಾಕ್ಷಿಧಾರರಾದ ಅರುಣ್ ಮತ್ತು ಸತೀಶ್ ಸಾಕ್ಷಿ ಹೇಳಿ ಹೊರಬಂದು ಹೊಟೇಲ್ನಲ್ಲಿದ್ದಾಗ ಅರುಣ್ ಅವರ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿ ಹಿಂದಿಯಲ್ಲಿ ಮಾತನಾಡಿ, “ಸಾಕ್ಷಿ ಹೇಳಿದರೆ ತಾಯಿಯನ್ನು ಕೊಲ್ಲುತ್ತೇನೆ’ ಎಂದು ಬೆದರಿಕೆ ಒಡ್ಡಿದ್ದಾನೆ.
ಈ ಬಗ್ಗೆ ಅರುಣ್ ನ್ಯಾಯಾಲಯಕ್ಕೆ ತಿಳಿಸಿ ರಕ್ಷಣೆ ಒದಗಿಸುವಂತೆ ಕೋರಿದರು. ಮನವಿ ಪುರಸ್ಕರಿಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ವೆಂಕಟೇಶ ನಾಯ್ಕ ಅವರು ಅರುಣ್ ಮತ್ತು ಸತೀಶ್ ಅವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಪೊಲೀಸರಿಗೆ ಆದೇಶಿಸಿದರು. ಅದರಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಪೊಲೀಸರು ಸಾಕ್ಷಿಧಾರರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ