ಕಂಡು ಕೇಳರಿಯದ ಭಾರೀ ಮಳೆ: ಗ್ರಾಮೀಣ ಜನತೆ ತತ್ತರ 


Team Udayavani, Aug 17, 2018, 10:46 AM IST

17-agust-4.jpg

ಉಪ್ಪಿನಂಗಡಿ : ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಈ ವರ್ಷ ಮೂರು ದಿನಗಳ ಅವಧಿಯಲ್ಲಿ ಎರಡನೇ ಬಾರಿ ಸಂಗಮಗೊಂಡು ಉಕ್ಕಿ ಹರಿಯುತ್ತಿದ್ದು, ಸಂಜೆ 4 ಗಂಟೆ ಸುಮಾರಿಗೆ ನದಿ ನೀರು ದೇವಸ್ಥಾನದ ಒಳ ಪ್ರಾಂಗಣವನ್ನು ಪ್ರವೇಶಿಸಿದ ಬಳಿಕ ನದಿಗಳು ಶಾಂತಗೊಳ್ಳುವಂತೆ ಪ್ರಾರ್ಥಿಸಿ, ಸಂಗಮ ಪೂಜೆಯನ್ನು ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್‌ ಉಪಾಧ್ಯಾಯ, ಸಹ ಅರ್ಚಕರಾದ ಶಂಕರ್‌ ಭಟ್‌, ಮಧುಸೂದನ ಭಟ್‌ ಪೂಜಾ ಕೈಂಕರ್ಯವನ್ನು ನೆರವೇರಿಸಿದ ಬಳಿಕ ಸಾವಿರಾರು ಭಕ್ತರು ಸಂಗಮ ತೀರ್ಥ ಸ್ನಾನ ಮಾಡಿ ಪುನೀತರಾದರು.

ಅಕಾಲಿಕ ತೆರೆದ ಗರ್ಭಗುಡಿ
ಮಧ್ಯಾಹ್ನ ಪೂಜೆಯ ಬಳಿಕ ಮುಚ್ಚುವ ದೇಗುಲದ ಗರ್ಭಗುಡಿಯ ಬಾಗಿಲು ಮತ್ತೆ ತೆರೆಯುವುದು ಸಂಜೆಯೇ. ಆದರೆ, ನದಿಗಳು ಉಕ್ಕೇರಿ ಬಂದ ಹಿನ್ನೆಲೆಯಲ್ಲಿ ಗಂಗಾಪೂಜೆ ನೆರವೇರಿಸುವ ಸಲುವಾಗಿ ಅಕಾಲಿಕವಾಗಿ ಗರ್ಭಗುಡಿಯ ಬಾಗಿಲು ತೆರೆಯುವ ಅನಿವಾರ್ಯತೆ ಮೂಡಿತು. ತಂತ್ರಿಗಳ ಸಲಹೆ ಪಡೆದು, ಭಕ್ತರ ಹಿತಕ್ಕಾಗಿ ಅಕಾಲಿಕವಾಗಿ ಗರ್ಭಗುಡಿ ಬಾಗಿಲು ತೆರೆಯಬಹುದು ಎಂಬ ನಿರ್ದೇಶನದ ಮೇರೆಗೆ ಬಾಗಿಲು ತೆರೆದು, ಗಂಗಾಪೂಜೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಧಾಕೃಷ್ಣ ನಾಯಕ್‌, ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ಡಾ|ರಾಜಾರಾಮ ಕೆ.ಬಿ. ಉಪಸ್ಥಿತರಿದ್ದರು. ಸಂಗಮ ವೀಕ್ಷಿಸುವ ಕುತೂಹಲ ಹಾಗೂ ಪುಣ್ಯಸ್ನಾನ ಮಾಡುವ ಹಂಬಲದೊಂದಿಗೆ ಸಹಸ್ರಾರು ಜನ ಉಪ್ಪಿನಂಗಡಿಗೆ ಆಗಮಿಸಿದ್ದರು. ಎದೆಯ ಮಟ್ಟ ನೀರಿನಲ್ಲಿ ನಿಂತು ಪುಣ್ಯಸ್ನಾನ ಮಾಡಿದರು.

ಉಪ ವಿಭಾಗಾಧಿಕಾರಿ ಭೇಟಿ
ನದಿಗಳು ಉಕ್ಕಿ ನೆರೆ ಭೀತಿ ಮೂಡುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣ ಮೂರ್ತಿ, ಮುಳುಗಡೆಯಾದ ಪ್ರದೇಶಗಳಿಂದ ಜನರನ್ನು ತೆರವುಗೊಳಿಸಲು ಬೋಟ್‌ ಗಳನ್ನು ಕಳುಹಿಸಿಕೊಟ್ಟರು. ಇಲಾಖೆ ಅಧಿಕಾರಿಗಳು, ಜನ ಪ್ರತಿನಿಧಿಗಳನ್ನು ತುರ್ತು ಸಭೆಗೆ ಆಹ್ವಾನಿಸಿ, ಪರಿಹಾರ ಕ್ರಮಗಳ ಕುರಿತು ಸೂಕ್ತ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.