ಅಂತಿಮ ಯಾತ್ರೆಗೆ ಜನಸಾಗರ; ಸ್ಮೃತಿ ಸ್ಥಳದಲ್ಲಿ ಮರೆಯಾದ ಭಾರತ ರತ್ನ
Team Udayavani, Aug 17, 2018, 2:31 PM IST
ಹೊಸದಿಲ್ಲಿ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಯಾತ್ರೆಗೆ ಜನಸಾಗರವೇ ಹರಿದು ಬಂದಿತು. ಅಂತ್ಯಕ್ರಿಯೆ ನಡೆದ ಸ್ಮೃತಿ ಸ್ಥಳದಲ್ಲಿ ಲಕ್ಷಾಂತರ ಜನರು, ಜಾತಿ ಮತ, ಧರ್ಮ, ಪಕ್ಷ ಭೇದ ಮರೆತು ಅಗಲಿದ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದರು.
ಶುಕ್ರವಾರ ಮಧ್ಯಾಹ್ನ ದೀನ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಯಿಂದ ಪಾರ್ಥೀವ ಶರೀರದ ಅಂತಿಮ ಮೆರವಣಿಗೆ ಹೊರಟಾಗ ಜನ ಸಂದಣಿ ಕಿಕ್ಕಿರಿದು ಸೇರಿ ವಾಜಪೇಯಿ ಅಮರ್ ರಹೇ ಎಂಬ ಘೋಷಣೆಗಳನ್ನು ಮೊಳಗಿಸಿದರು.. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಗಣ್ಯಾತೀಗಣ್ಯರು ಮೆರವಣಿಗೆ ಜೊತೆಯಲ್ಲಿ ಕಾಲ್ನಡಿಗೆಯಲ್ಲೇ ಸಾಗಿದರು.
ಬೆಳಗ್ಗೆ ಕೃಷ್ಣ ಮೆನನ್ ಮಾರ್ಗ್ನಲ್ಲಿರುವ ಅಟಲ್ ಜೀ ಅವರ ನಿವಾಸದಿಂದ ಪಾರ್ಥಿವ ಶರೀರವನ್ನು ಪುಷ್ಪಾಲಂಕೃತ ಸೇನಾ ವಾಹನದಲ್ಲಿ ಮಿಲಿಟರಿ ಬ್ಯಾಂಡ್ ಮತ್ತು ಪಥಸಂಚಲನದೊಂದಿಗೆ ಬಿಜೆಪಿ ಕಚೇರಿಗೆ ತಂದು ಮಧ್ಯಾಹ್ನ 2 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಅಮಿತ್ ಶಾ ಸೇರಿದಂತೆ ಹಲವು ಸಚಿವರು, ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು.ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.
ಪಾರ್ಥೀವ ಶರೀರದ ಮೆರವಣಿಗೆ ವೇಳೆ ರಸ್ತೆಯ ಇಕ್ಕೆಲದಲ್ಲಿ ನಿಂತಿರುವ ಸಾವಿರಾರು ಮಂದಿ ಅಂತಿಮ ನಮನ ಸಲ್ಲಿಸಿದರು. ಹಲವರು ಹೂಗಳನ್ನ ಹಾಕಿ ಗೌರವ ನಮನ ಸಲ್ಲಿಸಿದರು.
ಅಂತಿಮ ಕ್ರಿಯೆ ನಡೆಯುವ ಸ್ಥಳದಲ್ಲಿ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದ್ದು , ಸೇನಾಪಡೆಗಳ ತುಕಡಿಗಳು, 20 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.
ಅಂತ್ಯಕ್ರಿಯೆ ವೇಳೆ ಪಾಕ್ ಸಚಿವ, ಭೂತಾನ್ ದೊರೆ ಸೇರಿ ನೆರೆ ರಾಷ್ಟ್ರಗಳ ಗಣ್ಯರೂ ಉಪಸ್ಥಿತರಿದ್ದು ಅಂತಿಮ ನಮನ ಸಲ್ಲಿಸಿದರು.
ದೆಹಲಿಯಲ್ಲಿ ಅಘೋಷಿತ ಬಂದ್ ವಾತಾವರಣವಿದ್ದು, ರಾತ್ರಿಯ ವರೆಗೆ ಪ್ರಮುಖ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಿ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಬ್ರಾಹ್ಮಣ ಸಂಪ್ರದಾಯದಂತೆ ವಾಜಪೇಯಿ ಅವರ ಅಂತಿಮ ಕ್ರಿಯೆ ನಡೆಯಿತು. ಸಾಕು ಮಗಳು ನಮಿತಾ ಭಟ್ಟಾಚಾರ್ಯ ಅವರು ಅಂತಿಮ ವಿಧಿ ವಿಧಾನ ನಡೆಸಿದರು.
ಚಿತಾಭಸ್ಮ ಪುಣ್ಯ ನದಿಗಳಲ್ಲಿ ಲೀನ
ಚಿತಾಭಸ್ಮವನ್ನು ಗಂಗಾ ಸೇರಿದಂತೆ ಪವಿತ್ರ ನದಿಗಳಲ್ಲಿ ಲೀನ ಮಾಡಲಾಗುತ್ತಿದೆ. ಉತ್ತರ ಪ್ರದೇಶ ಸರಕಾರ ವಾಜಪೇಯಿ ಅವರಿಗೆ ಗೌರವ ನೀಡಲು ಚಿತಾಭಸ್ಮವನ್ನು ಪುಣ್ಯ ನದಿಗಳಲ್ಲಿ ಲೀನ ಮಾಡಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !