ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದರು ವಾಜಪೇಯಿ
Team Udayavani, Aug 18, 2018, 11:26 AM IST
ವಾಡಿ: ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಭಾರತೀಯ ಜನತಾ ಪಕ್ಷದ ದೊಡ್ಡ ಶಕ್ತಿಯಾಗಿದ್ದರು. ಅವರ ಅಗಲಿಕೆಯಿಂದ ಕಪ್ಪು ಛಾಯೆ ಆವರಿಸಿದಂತಾಗಿದೆ ಎಂದು ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ ಎಂದು ಹೇಳಿದರು.
ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಿಜೆಪಿ ನಗರ ಶಕ್ತಿ ಕೇಂದ್ರದ ವತಿಯಿಂದ ಏರ್ಪಡಿಸಲಾಗಿದ್ದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ರಾಜಕೀಯ ಅನ್ಯಾಯದ ಧೋರಣೆಗಳ ವಿರುದ್ಧ ಚುರುಕಿನಿಂದ ಚಾಟಿ ಬೀಸುತ್ತಿದ್ದರು. ಪಕ್ಷ ಬೇಧ ಮರೆತು ರಾಜಕಾರಣಿಗಳ ಪ್ರಬುದ್ಧ ವಾದಗಳನ್ನು ಮೆಚ್ಚುತ್ತಿದ್ದರು. ಸ್ವರಚಿತ ಕವನಗಳ ಮೂಲಕ ರಾಜಕೀಯ ಪ್ರಶಂಸೆ ಮತ್ತು ಟೀಕೆಗಳನ್ನು ಮಾಡುತ್ತಿದ್ದರು. ಸಾಹಿತ್ಯ ಪ್ರೇಮ ಮೈಗೂಡಿಸಿಕೊಂಡಿದ್ದ ಅಟಲ್ಜಿ, ದೇಶದ ಜನರ ಕಷ್ಟಗಳನ್ನು ಕಾವ್ಯದ ರೂಪದಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನ ಸೆಳೆಯುತ್ತಿದ್ದರು ಎಂದರು.
ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ವಾಜಪೇಯಿ ಬರೆದ ಕವಿತೆ ವಾಚಿಸಿದರು. ವೀರಶೈವ ಸಮಾಜದ ಅಧ್ಯಕ್ಷ, ಭಾಜಪ ಹಿರಿಯ ಮುಖಂಡ ಸಿದ್ದಣ್ಣ ಕಲಶೆಟ್ಟಿ ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಪುರಸಭೆ ಸದಸ್ಯರು ಹಾಗೂ ಮುಖಂಡರು ಇದ್ದರು.
ಪುರಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸದ್ದಕ್ಕೆ ಆಕ್ರೋಶ: ಪುರಸಭೆ ಕಚೇರಿಯಲ್ಲಿ ವಾಜಪೇಯಿ ಭಾವಚಿತ್ರ ಇಟ್ಟು ಶ್ರದ್ಧಾಂಜಲಿ
ಸಲ್ಲಿಸಿಲ್ಲ ಎಂದು ಆರೋಪಿಸಿ, ಮಾಜಿ ಶಾಸಕ ವಾಲ್ಮೀಕಿ ನಾಯಕ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಪಿಎಸ್ಐ ವಿಜಯಕುಮಾರ ಭಾವಗಿ ಅವರು ಸ್ಥಳಕ್ಕೆ ಆಗಮಿಸಿದಾಗ ಸರಕಾರಿ ರಜೆಯಿರುವ ಕಾರಣಕ್ಕೆ ಶುಕ್ರವಾರ ಶೋಕಾಚರಣೆ, ಶನಿವಾರ ಶ್ರದ್ಧಾಂಜಲಿ ಸಲ್ಲಿಸುವುದಾಗಿ ಮುಖ್ಯಾಧಿಕಾರಿ ತಿಳಿಸಿದ ನಂತರ ಪರಿಸ್ಥಿತಿ ತಿಳಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ