ತರಹೇವಾರಿ ಸಜ್ಜಾ, ಮನೆಗೆ ರಕ್ಷಣೆ, ಜತೆಗೆ ಆಕರ್ಷಣೆ


Team Udayavani, Aug 18, 2018, 2:50 PM IST

18-agust-14.jpg

ಮಳೆಗಾಲ ಶುರುವಾದಗಲೇ ಕಿಟಕಿ ಬಾಗಿಲಗಳ ರಕ್ಷಣೆಗಾಗಿ ಇರುವ ಸಜ್ಜಾಗಳು ನಮಗೆ ನೆನಪಾಗುತ್ತವೆ. ಒಂದು ವೇಳೆ ಮೊದಲೇ ಅಳವಡಿಸಿಕೊಂಡಿದ್ದರೆ ಅವು ಸರಿಯಾಗಿ ಕಾರ್ಯನಿರ್ವಹಿಸುತ್ತವೆಯೇ? ಅಂತ ನೋಡುವುದಕ್ಕೆ ಹೋಗುವುದೂ ಆವಾಗಲೇ. ಮಳೆ ಜೋರಾಗಿ ಬೀಳುತ್ತಿದ್ದರೂ ಒಂದು ಹನಿ ನೀರೂ ಮನೆಯೊಳಗೆ ಪ್ರವೇಶಿಸದಿದ್ದರೆ ನಮ್ಮ ಮನೆಯ ಸಜ್ಜಾಗಳನ್ನು ಚೆನ್ನಾಗಿ ವಿನ್ಯಾಸ ಮಾಡಲಾಗಿದೆ ಎಂದು ಅಂದುಕೊಳ್ಳಬಹುದು. ಮಳೆ ಬೀಳಲು ಶುರುಮಾಡಿದೊಡನೆ ಮನೆಯ ಕಿಟಕಿಬಾಗಿಲುಗಳನ್ನು ಮುಚ್ಚಿ ಭದ್ರ ಪಡಿಸುವ ಅಗತ್ಯ ಇದ್ದರೆ ಇವುಗಳ ಮೇಲಿರುವ ಸಜ್ಜಾಗಳ ವಿನ್ಯಾಸವನ್ನು ಒಮ್ಮೆ ಪರಿಶೀಲಿಸಬೇಕಾಗುತ್ತದೆ.

ಸಾಮಾನ್ಯವಾಗಿ ಮಳೆ ನೇರವಾಗಿ ಕೆಳಗೆ ಬೀಳುತ್ತಿದ್ದರೆ, ಅದು ಕಿಟಕಿಯ ಮೂಲಕ ಒಳಗೆ ಪ್ರವೇಶಿಸುವ ಸಾಧ್ಯತೆ ಕಡಿಮೆ ಇರುತ್ತದೆ. ಆದರೆ, ಬಿರುಗಾಳಿ ಜತೆಗೆ ಬಿರುಸಿನಿಂದ ಬೀಳುವ ಮಳೆಗೆ ನಾವು ನೀಡುವ ಒಂದೆರಡು ಅಡಿ ಅಗಲದ ಸಜ್ಜಾಗಳು ಹೆಚ್ಚಿನ ರಕ್ಷಣೆ ನೀಡಲಾರವು. ಆದುದರಿಂದ, ನಾವು ನಮ್ಮ ಮನೆಯ ಸಜ್ಜಾಗಳನ್ನು ವಿನ್ಯಾಸ ಮಾಡುವಾಗ ಬಹಳ ಎಚ್ಚರಿಕೆ ವಹಿಸಬೇಕು.

ಕಿಟಕಿಗಳ ಅಗಲ ಮತ್ತು ಎತ್ತರ ಹೆಚ್ಚಾದಷ್ಟೂ ಮಳೆ ಒಳನುಸುಳುವ ಸಾಧ್ಯತೆ ಹೆಚ್ಚಿರುತ್ತದೆ. ಇಂಥ ವಿನ್ಯಾಸ ಇರುವ ಮನೆಗೆ ಮಳೆ ಬೀಳುವ ದಿಕ್ಕು ಹಾಗೂ ಅವುಗಳ ಕೋನ ನೋಡಿಕೊಂಡು ಸಜ್ಜಾ ಹಾಗೂ ಕಿಟಕಿಗಳ ಅಕ್ಕ ಪಕ್ಕ ನೀಡುವ ಫೀನ್‌- ಹಲಗೆಗಳನ್ನು ವಿನ್ಯಾಸ ಮಾಡಬೇಕಾಗುತ್ತದೆ. ಸಜ್ಜಾಗಳನ್ನು ಅಳವಡಿಸುವ ಮುಂಚೆ ಅನುಭವಿಗಳಿಂದ ಈ ಕುರಿತು ಮಾರ್ಗದರ್ಶನ ಪಡೆಯುವುದು ಉತ್ತಮ.

ವೈವಿಧ್ಯಮಯ ಸಜ್ಜಾಗಳು
ಮನೆಯನ್ನು ಅಲಂಕರಿಸಲು ಬಳಸಬಹುದಾದ ಬಹು ಉಪಯೋಗಿ ಸ್ಥಳ ಎಂದರೆ ಅದು ಕಿಟಕಿ ಹಾಗೂ ಬಾಗಿಲೇ ಆಗಿರುತ್ತದೆ. ಕಿಟಕಿ ಬಾಗಿಲುಗಳನ್ನು ಸುಂದರಗೊಳಿಸಲು ಅವಕ್ಕೆ ಅಳವಡಿಸಬಹುದಾದ ಸಜ್ಜಾಗಳನ್ನು ವಿವಿಧ ರೀತಿಯಲ್ಲಿ ವಿನ್ಯಾಸಗೊಳಿಸಿ, ಮನೆಯ ಅಂದವನ್ನೂ ಹೆಚ್ಚಿಸಬಹುದು. ಮಾಮೂಲಿ ಚಪ್ಪಟೆ ಸಜ್ಜಾಗಳಿಂದ ಹಿಡಿದು ಸ್ಲೋಪಿಂಗ್‌ – ಇಳಿಜಾರು, ಆರ್ಚ್‌- ಕಮಾನು, ಕಾರ್ಬೆಲ್‌ – ಮೆಟ್ಟಿಲು ಮೆಟ್ಟಿಲು ಮುಂತಾದ ವಿನ್ಯಾಸಗಳ ಮಾದರಿಯ ಪಟ್ಟಿ ದೊಡ್ಡದೇ ಇದೆ. ಜತೆಗೆ ಇತ್ತೀಚಿನ ದಿನಗಳಲ್ಲಿ ಗಾಜಿನ ಸಜ್ಜಾಗಳೂ ಜನಪ್ರಿಯವಾಗಿವೆ. ಟಫ‌ನ್ಡ್  – ಗಟ್ಟಿಗೊಳಿಸಿದ ಗಾಜು ಸುಲಭದಲ್ಲಿ ಒಡೆಯದ ಕಾರಣ ಎಲ್ಲೆಲ್ಲಿ ಬೆಳಕು ಕಡಿಮೆ ಆಗಬಾರದು. ಆದರೆ, ಮಳೆಯ ಭರಾಟೆ ತಗ್ಗಬೇಕು ಎಂದಿರುತ್ತದೋ ಅಲ್ಲೆಲ್ಲ ಗಾಜಿನ ಸಜ್ಜಾಗಳನ್ನು ಧಾರಾಳವಾಗಿ ಬಳಸಬಹುದು.

ಜನಪ್ರಿಯ ವಿನ್ಯಾಸಗಳು
ಕೆಲವೊಮ್ಮೆ ಗಾಳಿಗೆಂದು ದೊಡ್ಡದಾದ ಕಿಟಕಿಗಳನ್ನು ಇಟ್ಟ ಬಳಿಕ ಬೆಳಕು ಹೆಚ್ಚಾಯಿತು ಇಲ್ಲವೇ ಮಳೆಯಿಂದ ರಕ್ಷಣೆ ಪಡೆಯುವುದು ಅನಿವಾರ್ಯ ಎಂದಾದರೆ ಮರದ ಇಲ್ಲವೇ ಉಕ್ಕಿನ ಸಣ್ಣ ಪಟ್ಟಿಗಳನ್ನು ಅಲಂಕಾರಿಕ ಎನ್ನುವ ರೀತಿಯಲ್ಲಿ ಕೆಳಗೆ ಇಳಿಬಿಡಬಹುದು. ಈ ಹಿಂದೆ ದೊಡ್ಡ ಬಂಗಲೆಗಳ ಕಿಟಕಿಗಳ ಮುಂದಿನ ಸಜ್ಜಾಗಳಿಗೆ ಈ ಮಾದರಿಯ ವಿನ್ಯಾಸ ಮಾಡುವುದು ಜನಪ್ರಿಯವಾಗಿತ್ತು.ಇತ್ತೀಚಿನ ದಿನಗಳಲ್ಲಿ ಅದೇ ರೀತಿಯ ಮತ್ತೆ ಬಳಕೆಗೆ ಬಂದಿದೆ. ಅದೀಗ ತುಸುಮಟ್ಟಿಗೆ ಜನಪ್ರಿಯವೂ ಆಗಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.