ನೆರೆ ಸಂತ್ರಸ್ತರಿಗೆ ಹರಿದು ಬಂದ ನೆರವಿನ ಮಹಾಪೂರ


Team Udayavani, Aug 19, 2018, 10:13 AM IST

hekp-1.jpg

ಕೊಲ್ಲೂರು: ಕೇರಳದ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 1 ಕೋಟಿ ರೂ. ಹಾಗೂ ಕೊಡಗಿನಲ್ಲಿ ಸಂತ್ರಸ್ತರಿಗೆ 25 ಲಕ್ಷ ರೂ. ಒದಗಿಸುವ ಬಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಶನಿವಾರ ದೇಗುಲದಲ್ಲಿ ಜರಗಿದ ವಿಶೇಷ ಸಭೆ ನಿರ್ಣಯ ಕೈಗೊಂಡಿತು.

ಈ ಸಂದರ್ಭ ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಅವರು ನೆರೆ ಸಂತ್ರಸ್ತರಿಗೆ ಧನಸಹಾಯ ಮಾಡಲು ಕೈಗೊಂಡ ನಿರ್ಣಯವನ್ನು ಧಾರ್ಮಿಕ ಧತ್ತಿ ಆಯುಕ್ತರಿಗೆ ಮನವಿ ಸಲ್ಲಿಸುವುದಾಗಿ ಹೇಳಿದರು. ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಎಂ. ಶೆಟ್ಟಿ , ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸದಸ್ಯರಾದ ನರಸಿಂಹ ಹಳಗೇರಿ, ವಂಡಬಳ್ಳಿ ಜಯರಾಮ ಶೆಟ್ಟಿ, ಕೆ. ರಮೇಶ ಗಾಣಿಗ, ರಾಜೇಶ ಕಾರಂತ, ಅಭಿಲಾಶ್‌, ಅಧೀಕ್ಷಕ ರಾಮಕೃಷ್ಣ ಅಡಿಗ, ಎಂಜಿನಿಯರ್‌ ಉಪಸ್ಥಿತರಿದ್ದರು. ವಿಶೇಷ ಪೂಜೆ : ನೆರೆ ಹಾವಳಿ ಕಡಿಮೆಯಾಗಲೆಂದು ಶ್ರೀದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಮಂಗಳೂರಿನಿಂದ ಕೇರಳಕ್ಕೆ ಪರಿಹಾರ ಸಾಮಗ್ರಿ ರವಾನೆ
ಮಂಗಳೂರು,: ಕೇರಳದ ನೆರೆ ಸಂತ್ರಸ್ತರ ನೆರವಿಗೆ ಎನ್‌ಜಿಒ, ಸಾರ್ವಜನಿಕರ ಮೂಲಕ ಪಡೆದುಕೊಂಡ ಪರಿಹಾರ ಸಾಮಗ್ರಿಗಳನ್ನು ಕೋಸ್ಟ್‌ಗಾರ್ಡ್‌ ಮಂಗಳೂರು ಕೇಂದ್ರ ಕಚೇರಿಯಿಂದ 3 ವಿಮಾನಗಳ ಮೂಲಕ ಶನಿವಾರ ಕಲ್ಲಿಕೋಟೆ ಮತ್ತು ಕೊಚ್ಚಿಗೆ ಸಾಗಿಸಲಾಗಿದೆ. ನೆರೆ ಸಂತ್ರಸ್ತರಿಗೆ ತತ್‌ಕ್ಷಣಕ್ಕೆ ಬೇಕಾಗುವಂತಹ ಆವಶ್ಯಕ ವಸ್ತುಗಳು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಇಂಡಿಯನ್‌ ಕೋಸ್ಟ್‌ಗಾರ್ಡ್‌ನ ಮಂಗಳೂರು ಕೇಂದ್ರ ಕಚೇರಿಗೆ ಶನಿವಾರದಂದು ಬಂದಿದ್ದವು. 
ಅವುಗಳಲ್ಲಿ ತತ್‌ಕ್ಷಣಕ್ಕೆ ಬೇಕಾಗುವಂತಹ ಔಷಧ, ಮಕ್ಕಳ ಆಹಾರಗಳನ್ನು ವಿಮಾನ ಮೂಲಕ ಸಾಗಿಸಲಾಗಿದೆ. ರವಿವಾರ ಮತ್ತಷ್ಟು ಪರಿಹಾರ ಸಾಮಗ್ರಿಗಳು ರವಾನೆಯಾಗಲಿವೆ. ಸಾಮಗ್ರಿ ಗಳನ್ನು ಸಾರ್ವಜನಿಕರು ವ್ಯವಸ್ಥಿತವಾಗಿ ಪ್ಯಾಕ್‌ ಮಾಡಿ, ವಸ್ತು ನಮೂದಿಸಿ ಕೋಸ್ಟ್‌ಗಾರ್ಡ್‌ ಮಂಗಳೂರು ಕೇಂದ್ರ ಕಚೇರಿಗೆ ತಲುಪಿಸಬಹುದು. ಔಷಧಗಳನ್ನು ಬಜಪೆ ಹಳೆ ವಿಮಾನ ನಿಲ್ದಾಣಕ್ಕೂ ತಲುಪಿಸಬಹುದು. ಹೆಚ್ಚಿನ ಮಾಹಿತಿಗಾಗಿ 0824 2405269, 2405278 ದೂರವಾಣಿ ಸಂಪರ್ಕಿಸಬಹುದಾಗಿದೆ.

ಆ. 19, 20: ನೆರವು ಸಂಗ್ರಹ
ಮಂಗಳೂರು: ಕೊಡಗಿನ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಲು ದ.ಕ. ಜಿಲ್ಲೆಯ ಕೊಡವ ವಿದ್ಯಾರ್ಥಿ ಸಂಘಟನೆಯಿಂದ ಅಗತ್ಯ ಸಾಮಗ್ರಿಗಳ ಸಂಗ್ರಹ ಆ. 19 ಮತ್ತು 20ರಂದು ಎಸ್‌ಡಿಎಂ ಕಾಲೇಜು ಆವರಣದಲ್ಲಿ ನಡೆಯಲಿದೆ. ಈ ಕುರಿತು ಶನಿವಾರ ಮಾಹಿತಿ ನೀಡಿದ ಸಂಘಟನೆಯ ಸಲಹೆಗಾರ ನ್ಯಾಯವಾದಿ ಎಸ್‌.ಪಿ. ಚಂಗಪ್ಪ, 19ರಂದು ಬೆಳಗ್ಗೆ ಶರವು ಮಹಾಗಣಪತಿ ದೇಗುಲದಲ್ಲಿ ಪ್ರಾರ್ಥಿಸಿ ಅಗತ್ಯ ವಸ್ತುಗಳ ಸಂಗ್ರಹ ಕಾರ್ಯ ನಡೆಯಲಿದೆ ಎಂದರು. ಸಂಘಟನೆಯ ಅಧ್ಯಕ್ಷ ಕೆ.ಜಿ. ಬೋಪಣ್ಣ, ಉಪಾಧ್ಯಕ್ಷೆ ಶಿಫಾಲಿ ಚಂಗಪ್ಪ, ಖಜಾಂಚಿ ಕುಶ ನಂಜಪ್ಪ, ಉಪ ಕಾರ್ಯದರ್ಶಿ ನೇಹಾ ನೀಲಮ್ಮ, ಸಲಹೆಗಾರ ಬಿ.ಬಿ. ಅಜಿತ್‌ ಬೋಪಯ್ಯ ಉಪಸ್ಥಿತರಿದ್ದರು.

ರೆಡ್‌ಕ್ರಾಸ್‌ನಿಂದ ಸಹಾಯ
ಮಂಗಳೂರು: ಕೇರಳ ಪ್ರವಾಹ ಸಂತ್ರಸ್ತರಿಗೆ ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆಯ ದ.ಕ. ಜಿಲ್ಲಾ ಶಾಖೆಯ ವತಿಯಿಂದ ಅಗತ್ಯ ವಸ್ತುಗಳ ಸಹಾಯಹಸ್ತವನ್ನು ನೀಡಲಾಯಿತು.
ಸಾಮಗ್ರಿಗಳನ್ನು ಸೇವಾ ಭಾರತಿ ಸಂಘ ನಿಕೇತನದ ಮೂಲಕ ಕಳುಹಿಸಿಕೊಡಲಾಯಿತು. ಸುಳ್ಯ ತಾಲೂಕಿಗೂ ಅಗತ್ಯ ಸಾಮಗ್ರಿಗಳನ್ನು ಜಿಲ್ಲಾ ಶಾಖೆಯ ವತಿಯಿಂದ ವಿತರಣೆ ಮಾಡಲಾಗಿದೆ. ಜಿಲ್ಲಾ ಶಾಖೆಯ ಚೇರ್‌ಮನ್‌ ಶಾಂತಾರಾಮ ಶೆಟ್ಟಿ ಸಾಮಗ್ರಿ ಹಸ್ತಾಂತರಿಸಿದರು. ಸುನಿಲ್‌ ಆಚಾರ್ಯ, ಭರತ್‌ರಾಜ್‌ ಉಪಸ್ಥಿತರಿದ್ದರು. ರೆಡ್‌ಕ್ರಾಸ್‌ ಸಂಸ್ಥೆಯ ಸಂಯೋಜಕ ಪ್ರವೀಣ್‌ಕುಮಾರ್‌ ಉಸ್ತುವಾರಿ ವಹಿಸಿದ್ದರು. ಜಿಲ್ಲಾಡಳಿತ ದ. ಸಹಯೋಗದಲ್ಲಿ ಈ ಸೇವೆ ಮಾಡಲಾಗುತ್ತಿದೆ.

ಕೆಎಂಎಫ್‌ನಿಂದ 96,000 ಲೀ. ಹಾಲು
ಮಂಗಳೂರು: ಕೇರಳ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಕೆಎಂ ಎಫ್‌ 96,000 ಲೀ. ತೃಪ್ತಿ ಹಾಲನ್ನು ಉಚಿತವಾಗಿ ನೀಡಲು ಯೋಜನೆ ರೂಪಿಸಿದೆ. 17,000 ಲೀ. ತೃಪ್ತಿ ಹಾಲಿನ ಪ್ರಥಮ 2 ವಾಹನಗಳಿಗೆ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ  ಅವರು ಶನಿವಾರ ಹಸಿರುನಿಶಾನೆ ತೋರಿದರು.

ಕೇರಳ ಸಮಾಜಂ
ಮಂಗಳೂರು: ಕೇರಳ ಸಮಾಜಂ ವತಿಯಿಂದ ಕೇರಳದ ನೆರೆ ಪೀಡಿತರಿಗೆ 5 ಲಕ್ಷ ರೂ. ನೆರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿದೆ ಎಂದು ಅಧ್ಯಕ್ಷ ಟಿ.ಕೆ. ರಾಜನ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಶೀ ಶ್ರೀ ಸಹಾಯ
ಮಂಗಳೂರು: ಶ್ರೀ ಸಂಯಮೀಂದ್ರತೀರ್ಥ ಸ್ವಾಮೀಜಿ ಅವರ ಆದೇಶದ ಮೇರೆಗೆ ಶ್ರೀ ಕಾಶೀಮಠ, ಬೆಂಗಳೂರು ಶ್ರೀ ಕಾಶೀ ಮಠ, ಜಿಎಸ್‌ಬಿ ದೇವಾಲಯಗಳ ಒಕ್ಕೂಟದ ವತಿಯಿಂದ ಕೇರಳದ ಪ್ರವಾಹ ಪೀಡಿತ ಸಂತ್ರಸ್ತರಿಗೆ ವಸ್ತು ರೂಪದಲ್ಲಿ ಸಹಾಯ ಮಾಡಬಯಸುವ ಸಮಾಜ ಬಾಂಧವರು ತಮ್ಮ ಶಕ್ತಾÂನುಸಾರ ಶ್ರೀ ದೇಗುಲದ ವಿಶೇಷ ಕೌಂಟರ್‌ಗೆ ಆ. 19ರ ಒಳಗೆ ತಲುಪಿಸಬಹುದು. ಕಾಫಿ-ಚಹಾ ಪುಡಿ, ಅಕ್ಕಿ, ಸಕ್ಕರೆ, ಟೂತ್‌ಪೇಸ್ಟ್‌, ಸೀರೆ, ಬಾತ್‌ ಟವಲ್‌, ಲುಂಗಿ, ಒಳ ವಸ್ತ್ರಗಳು (ಹೊಸತು ಮಾತ್ರ) ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಕೇರಳ ನೆರವು ಕೇಂದ್ರ ಆರಂಭ
ಕಾಸರಗೋಡು: ಕೇರಳದ ಸಂತ್ರಸ್ತರ ನೆರವಿಗೆ ವಸ್ತುರೂಪದಲ್ಲಿ ಸಹಾಯ ಮಾಡಲು ಸಾಮಗ್ರಿ ಸಂಗ್ರಹಣಾ ಕೇಂದ್ರಗಳನ್ನು ತೆರೆಯಲಾಗಿದೆ. ಕಾಸರಗೋಡು ಸರಕಾರಿ ಕಾಲೇಜು, ಪಡನ್ನಕ್ಕಾಡು ಕೃಷಿ ವಿದ್ಯಾಲಯ, ತ್ರಿಕ್ಕರಿಪ್ಪುರ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ನೆರವನ್ನು ಸಲ್ಲಿಸಬಹುದು. ಧನಸಹಾಯವನ್ನು ಕೇರಳ ಮುಖ್ಯಮಂತ್ರಿಗಳ ದುರಂತ ಪರಿಹಾರ ನಿಧಿಗೆ ಚೆಕ್‌/ಡಿಡಿ/ನಗದು ರೂಪದಲ್ಲಿ ಡಿಸಿ ಕಚೇರಿಯಲ್ಲಿ ನೇರ ಜಮೆ ಮಾಡಬಹುದು.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.