ಹೊಸ ಕೀಟ ನಿಯಂತ್ರಣ ಪ್ರಾತ್ಯಕ್ಷಿಕೆ 


Team Udayavani, Aug 19, 2018, 5:32 PM IST

19-agust-17.jpg

ಕುಷ್ಟಗಿ: ಮೆಕ್ಕೆಜೋಳ ಬಾಧಿ ಸುವ ಹೊಸ ಕೀಟ ನಿಯಂತ್ರಣ ಕುರಿತು ಶನಿವಾರ ಪಟ್ಟಣದ ಹೊರವಲಯದ ರೈತ ಕಳಕಪ್ಪ ಬಸರಿಗಿಡದ ಅವರ ಜಮೀನಿನಲ್ಲಿ ಕೃಷಿ ಇಲಾಖೆ ಕೀಟ ನಿಯಂತ್ರಣದ ಪ್ರಾತ್ಯಕ್ಷಿಕೆ ನಡೆಸಿತು. ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ರೈತ ಕಳಕಪ್ಪ ಬಸರಿಗಿಡದ್‌ ಅವರ ಜಮೀನಿನಲ್ಲಿ ಬೆಳೆದಿರುವ ಮೆಕ್ಕೆಜೋಳದ ಬೆಳೆಯಲ್ಲಿ ಕಂಡುಬಂದ ಹಿನ್ನೆಲೆಯಲ್ಲಿ ಇಲಾಖೆ ಅಧಿಕಾರಿಗಳು ಸಹಾಯಕ ಕೃಷಿ ನಿರ್ದೇಶಕ ವೀರಣ್ಣ ಕಮತರ ಅವರ ನಿರ್ದೇಶನದ ಮೇರೆಗೆ ಭೇಟಿ ನೀಡಿ ಪರಿಶೀಲಿಸಿ, ಕೀಟಬಾಧೆಯನ್ನು ಖಚಿತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕಮತರ ಅವರ ಜಮೀನಿನಲ್ಲಿ ಕೀಟಬಾಧೆ ನಿಯಂತ್ರಣ ಪ್ರಾತ್ಯಕ್ಷಿಕೆ ಮೂಲಕ ಇತರೇ ರೈತರಿಗೂ ಹೊಸ ಕೀಟ ನಿಯಂತ್ರದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದೇ ಮೊದಲ ಬಾರಿಗೆ ತಾಲೂಕಿನಲ್ಲಿ ಕಾಣಿಸಿಕೊಂಡಿದ್ದು, ಮೆಕ್ಕೆಜೋಳ ಸೇರಿದಂತೆ ಏಕದಳ ಬೆಳೆಯನ್ನು ತೀವ್ರವಾಗಿ ಬಾಧಿಸುವ ಹುಸಿ ಸೈನಿಕ ಹುಳು ಎಂಬ ಹೊಸ ಕೀಟ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೃಷಿ ಇಲಾಖೆ, ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಈ ವರೆಗೂ ಸುಳಿ ಕೊರೆಯುವ ಸೈನಿಕ ಹುಳು ಇತ್ತಾದರೂ ಬಾಧೆ ಅಷ್ಟೊಂದು ತೀವ್ರವಾಗಿರಲಿಲ್ಲ. ಆದರೆ ಈಗ ಬೆಳಕಿಗೆ ಬಂದಿರುವ ಫಾಲ್ಸ್‌ ಆರ್ಮಿ ವರ್ಮ ಕೀಟ ರೈತರ, ಕೃಷಿ ಇಲಾಖೆ ನಿದ್ದೆಗೆಡಿಸಿದೆ. ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮೆಕ್ಕೆಜೋಳ ಸೇರಿದಂತೆ ಇತರೇ ಏಕದಳ ಬೆಳೆಗಳು ಸಂಪೂರ್ಣ ಹಾಳಾಗುವ ಸಾಧ್ಯತೆಗಳಿವೆ. ಈ ಕೀಟವು ಆಫ್ರೀಕಾ ಖಂಡದಲ್ಲಿ ಸಹಜವಾಗಿರುವ ಕೀಟ. ಕಳೆದ ವರ್ಷ ಅಮೆರಿಕಾದಲ್ಲಿ ಮೆಕ್ಕೆಜೋಳವನ್ನು ಈ ಕೀಟ ಹಾಳು ಮಾಡಿದ್ದರಿಂದ ಅಪಾರ ಪ್ರಮಾಣದ ಆರ್ಥಿಕ ಹಾನಿ ಸಂಭವಿಸಿತ್ತು. ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಭತ್ತ ಬೆಳೆಯುವ ಪ್ರದೇಶಗಳಲ್ಲಿ ಈ ಕೀಟಬಾಧೆ ಹಾವಳಿ ಇದೆ. ಶಿವಮೊಗ್ಗದ ಕೃಷಿ ತೋಟಗಾರಿಕೆ ವಿಶ್ವವಿದ್ಯಾಲಯದ ವಿಜ್ಞಾನಿಗಳು ಮೊದಲ ಬಾರಿಗೆ ಈ ಕೀಟವನ್ನು ಗುರುತಿಸಿ ವರದಿ ನೀಡಿದ್ದಾರೆ. ಕೀಟ ನಿಯಂತ್ರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಯಾಕೆಂದರೆ ಈ ಕೀಟವು ಒಮ್ಮೆ ಬೆಳೆಗೆ ವ್ಯಾಪಿಸಿದರೆ ನಿಯಂತ್ರಿಸುವುದೇ ಕಷ್ಟವಾಗುತ್ತದೆ. ಹೀಗಾಗಿ ರೈತರಿಗೆ ಆಗುವ ಆರ್ಥಿಕ ನಷ್ಟ ತಡೆಯಲು ಇಲಾಖೆ ಈ ಮುಂಜಾಗ್ರತೆ ಕ್ರಮ ಕೈಗೊಂಡಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ವೀರಣ್ಣ ಕಮತರ ವಿವರಿಸಿದರು.

ತಾಲೂಕಿನ ಕೆಲ ಪ್ರದೇಶಗಳಲ್ಲಿ ಈ ಕೀಟ ಬಾಧೆ ಇದ್ದು, ಕೃಷಿ ಇಲಾಖೆಯ ಸಿಬ್ಬಂದಿ ತಮ್ಮ ವ್ಯಾಪ್ತಿಯ ರೈತರಿಗೆ ಸೂಕ್ತ ರೀತಿಯಲ್ಲಿ ತಿಳಿವಳಿಕೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಸೂಕ್ತ ಕೀಟನಾಶಕ ಹಾಗೂ ವಿಷ ಪಾಷಣ ವೈಜ್ಞಾನಿಕವಾಗಿ ಸುರಕ್ಷಿತ ರೀತಿಯಲ್ಲಿ ಬಳಕೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗುವಂತೆ ಕಮತರ ಸೂಚಿಸಿದರು.

ರೈತ ಕಳಕಪ್ಪ ಬಸರೀಗಿಡದ, ಕೃಷಿ ಅಧಿಕಾರಿ ಪ್ರಕಾಶ ತಾರಿವಾಳ, ಬಾಲಪ್ಪ ಜಲಗೇರಿ, ತಾಂತ್ರಿಕ ವ್ಯವಸ್ಥಾಪಕ ಬಸವರಾಜ್‌ ಪಾಟೀಲ, ಸಹಾಯಕರಾದ ಶ್ರೀಧರ, ಸಂದೀಪ, ಶೇಖರಯ್ಯ ಹಿರೇಮಠ, ಹಂಪಯ್ಯ, ಶರಣಯ್ಯ, ಶುಕಮುನಿ, ರೈತರಾದ ಸಿದ್ದನಗೌಡ ಹುಲ್ಸಗೇರಿ, ಅಮರೇಶ ಹೊಸೂರು, ಹನುಮಗೌಡ ಕತ್ತಿ ಮತ್ತಿತರಿದ್ದರು.

ಟಾಪ್ ನ್ಯೂಸ್

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.