ಬೆಂಗಳೂರಲ್ಲಿ ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವ


Team Udayavani, Aug 20, 2018, 4:48 PM IST

20-agust-18.jpg

ದಾವಣಗೆರೆ: ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಸೆ. 16 ರಿಂದ 19ರ ವರೆಗೆ ಡಾ| ವಿಷ್ಣುವರ್ಧನ್‌ ರಾಷ್ಟ್ರೀಯ ಉತ್ಸವ-2018 ನಡೆಯಲಿದೆ ಎಂದು ಉತ್ತರ ಕರ್ನಾಟಕ ಡಾ| ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಕೊಟ್ರೇಶ್‌ ಬಾರ್ಕಿ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡದ ಖ್ಯಾತ ನಟರಾಗಿದ್ದ ಡಾ| ವಿಷ್ಣುವರ್ಧನ್‌ ನಟನೆಯ ಜೊತೆಗೆ ಸಾಮಾಜಿಕ ಕಳಕಳಿ ಹೊಂದಿದ್ದವರು. ಅನೇಕ ಪಾತ್ರಗಳ ಮೂಲಕ ನಾಡಿನ ಜನರಿಗೆ ಜೀವನ ಸಂದೇಶ ನೀಡಿದವರು. ಅಂತಹ ಮಹಾನ್‌ ನಾಯಕ ನಟನ ಹೆಸರಿನಲ್ಲಿ ರಾಷ್ಟ್ರೀಯ ಉತ್ಸವ ನಡೆಸಲಾಗುತ್ತಿದೆ. ಕಳೆದ ವರ್ಷ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಸಲಾಗಿತ್ತು. ಈ ವರ್ಷ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸೆ. 16 ರಂದು ಉತ್ಸವದ ಮೊದಲ ದಿನ ಡಾ| ವಿಷ್ಣುವರ್ಧನ್‌ ಭಾವಚಿತ್ರದ ಭವ್ಯ ಮೆರವಣಿಗೆ ಬೆಂಗಳೂರಿನ ಪ್ರಮುಖ ರಸ್ತೆಯಲ್ಲಿ ನಡೆಯಲಿದೆ. ರಾಜ್ಯದ ಮುಖ್ಯಮಂತ್ರಿ ಇಲ್ಲವೇ ನಾಡಿನ ಖ್ಯಾತ ಸ್ವಾಮೀಜಿ ಮೆರವಣಿಗೆ ಉದ್ಘಾಟಿಸುವರು. ಅಂದು ಸಂಜೆ 4.30ಕ್ಕೆ ಕುವೆಂಪು ಕಲಾಕ್ಷೇತ್ರದಲ್ಲಿ ಚುನಾಯಿತ ಪ್ರತಿನಿಧಿಗಳ ಕಾರ್ಯಕ್ರಮ, ನಂತರ ಡಾ| ವಿಷ್ಣುವರ್ಧನ್‌ ಯುಗಳಗೀತೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

17 ರಂದು ಕನ್ನಡ ಚಿತ್ರಕೂಟವನ್ನು ಮಾಜಿ ಸಚಿವ ಬಿ.ಎಲ್‌. ಶಂಕರ್‌ ಇತರರು ಉದ್ಘಾಟಿಸುವರು. ಆ ನಂತರ ಡಾ| ವಿಷ್ಣುವರ್ಧನ್‌ ಅವರೊಂದಿಗೆ ನಟಿಸಿರುವ ಲಕ್ಷ್ಮಿ, ಸುಹಾಸಿನಿ, ಅಂಬಿಕಾ. ಭವ್ಯ ಇತರರೊಡಗೂಡಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3.30ಕ್ಕೆ ಕನ್ನಡ ಕಿರು ಚಿತ್ರೋತ್ಸವ, ಸಂಜೆ 6ಕ್ಕೆ ಆಪ್ತಮಿತ್ರನ ಆಪ್ತಕೂಟ ನಡೆಯಲಿದೆ. ಡಾ| ವಿಷ್ಣುವರ್ಧನ್‌ ಅವರ ಆಪ್ತರು ತಮ್ಮ ಅಭಿಪ್ರಾಯ, ಅನಿಸಿಕೆ ಹಂಚಿಕೊಳ್ಳುವರು ಎಂದು ತಿಳಿಸಿದರು.

ರಾಷ್ಟ್ರೀಯ ಉತ್ಸವದ ಕೊನೆಯ ದಿನ ಬೆಳಗ್ಗೆ ಕರ್ನಾಟಕ ವಾಣಿಜ್ಯ ಮಂಡಳಿಯಿಂದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಕನ್ನಡ ಚಿತ್ರರಂಗದ ಯುವ ನಟ-ನಟಿಯರ ಕಾರ್ಯಕ್ರಮ, ಸಂಜೆ 6ಕ್ಕೆ ಸಂಗೀತ ನಿರ್ದೇಶಕರ ಸಾರಥ್ಯದಲ್ಲಿ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು. ಡಾ| ವಿಷ್ಣುವರ್ಧನ್‌ರವರ ಜನ್ಮದಿನ ಸೆ. 18 ನ್ನು ವಿಶ್ವ ಆದರ್ಶ ದಿನವನ್ನಾಗಿ ಆಚರಿಸಬೇಕು ಎಂದು ಕೋರಿ ಡಾ| ವಿಷ್ಣು ಸೇನಾ ಸಮಿತಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಒತ್ತಾಯಿಸುತ್ತದೆ. ಸಾಂಸ್ಕೃತಿಕ ರಾಯಭಾರಿ ಆಗಿರುವ ಡಾ| ವಿಷ್ಣುವರ್ಧನ್‌ರವರು ವೈಯಕ್ತಿಕ ಹಾಗೂ ಸಾರ್ವಜನಿಕ ಜೀವನದಲ್ಲಿ ನುಡಿದಂತೆ ನಡೆದ ಆದರ್ಶ ನಟ. ಹಾಗಾಗಿ ಅವರ ಜನ್ಮದಿನವನ್ನು ಆದರ್ಶ ದಿನವನ್ನಾಗಿ ಆಚರಣೆ ಮಾಡಬೇಕು ಎಂಬುದು ನಮ್ಮ ಒತ್ತಾಯ ಎಂದು ತಿಳಿಸಿದರು. ಡಾ| ವಿಷ್ಣುವರ್ಧನ್‌ ಸೇನಾ ಸಮಿತಿ ಜಿಲ್ಲಾ ಅಧ್ಯಕ್ಷ ಪ್ರವೀಣ್‌ಕುಮಾರ್‌, ಅಜಯ್‌, ಹಾಲೇಕಲ್‌ ಸುರೇಶ್‌, ರಮೇಶ್‌, ಪರಮೇಶ್‌, ರವಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.