ಸಂತ್ರಸ್ತರ ಹೆಸರಿನಲ್ಲಿ  ಸಕ್ರಿಯ ವಸೂಲಿ ಗ್ಯಾಂಗ್‌!


Team Udayavani, Aug 21, 2018, 10:28 AM IST

kodagu.jpg

ಮಂಗಳೂರು: ಕೊಡಗು, ಕೇರಳದ ನೆರೆ ಸಂತ್ರಸ್ತರಿಗೆ ನೆರವು ಎಂಬ ನೆಪ ಹೇಳಿ ಅಮಾಯಕರಿಂದ ಹಣ ವಸೂಲಿ ಮಾಡುವ ದಂಧೆ ದ.ಕ. ಮತ್ತು ಕೊಡಗು ಜಿಲ್ಲೆಯಲ್ಲಿ ಹುಟ್ಟಿಕೊಂಡಿದೆ. ನೆರೆಗೆ ನಲುಗಿದ ಕೇರಳ, ದ. ಕನ್ನಡ, ಕೊಡಗಿನ ಜನರಿಗೆ ದೇಶವೇ ಸ್ಪಂದಿಸಿ ನೆರವಿನ ಮಹಾಪೂರ ಹರಿದು ಬರುತ್ತಿದೆ. ಆದರೆ ಜನರ ಅನುಕಂಪವನ್ನೇ ದುರ್ಬಳಕೆ ಮಾಡಿಕೊಂಡು ಕಿಡಿಗೇಡಿಗಳು ಎಲ್ಲೆಂದರಲ್ಲಿ ನಗದು ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಇದು ಜಿಲ್ಲಾಡಳಿತಗಳಿಗೆ ತಲೆನೋವಾಗಿದೆ. 

ಮಳೆ ಮತ್ತು ಪ್ರವಾಹ ಕೇರಳ ಮತ್ತು ಕೊಡಗಿನ ಬದುಕನ್ನು ಕಸಿದುಕೊಂಡಿದೆ. ಆಸ್ತಿಪಾಸ್ತಿ ನಷ್ಟ, ಪ್ರಾಣಹಾನಿ ಆಗಿದೆ. ಪರಿಹಾರ ಕೇಂದ್ರಗಳಲ್ಲಿ ಹಂಚಿ ಹೋಗಿರುವ ಅನೇಕರಿಗೆ ತಮ್ಮವರ ಸುರಕ್ಷತೆಯ ಬಗ್ಗೆಯೂ ತಿಳಿದಿಲ್ಲ. ಸಂತ್ರಸ್ತರಿಗೆ ನೆರವಾಗಲೆಂದು ಸ್ವಯಂ ಸೇವಾ ಸಂಘಟನೆಗಳು, ಸಮಾಜಸೇವಾ ಸಂಘಟನೆಗಳು ನೆರವು ಸಂಗ್ರಹದಲ್ಲಿ ತೊಡಗಿದ್ದಾರೆ. ಈ ಸಂದರ್ಭದ ದುರ್ಲಾಭ ಪಡೆಯಲು ಯತ್ನಿಸುತ್ತಿರುವ ಕೆಲವರು ಜನರನ್ನು ನಂಬಿಸಿ ದೋಚುವ ಕೆಲಸದಲ್ಲಿ ತೊಡಗಿದ್ದಾರೆ. ವಾಹನ ಸವಾರರನ್ನು, ದಾರಿಹೋಕರನ್ನು ನಿಲ್ಲಿಸಿ, ಬೆದರಿಸಿ ಹಣ ಕೀಳುವ ಯುವಕರ ಗುಂಪುಗಳು ದ. ಕನ್ನಡ ಮತ್ತು ಕೊಡಗು ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿವೆ. 

ಪೆಟ್ಟಿಗೆ ಹಿಡಿದು ತಿರುಗಾಟ
ಜಿಲ್ಲೆಯ ಕಲ್ಲಡ್ಕ, ಉಪ್ಪಿನಂಗಡಿ, ಮಂಗಳೂರು, ಕೊಡಗು ಜಿಲ್ಲೆಯ ಮಡಿಕೇರಿ ಮೊದಲಾದೆಡೆ ಇಂತಹ ಲೂಟಿ ತಂಡಗಳು ಸಕ್ರಿಯವಾಗಿದ್ದು, ಪರಿಹಾರ ನಿಧಿ ಹೆಸರಿನ ಪೆಟ್ಟಿಗೆ ಹಿಡಿದು ತಿರುಗಾಡುತ್ತಿದ್ದಾರೆ. ಕೊಡಗು  ಮಾದಾಪುರ ಸಮೀಪದ ಇಗ್ಗೊಡ್ಲುವಿನಲ್ಲಿ ಹಣ ಹಾಗೂ ಚಿನ್ನಾಭರಣವಿದ್ದ ಬ್ಯಾಗನ್ನೇ ಲಪಟಾಯಿಸಿದ ಘಟನೆ ನಡೆದಿದೆ. ಇಂತಹ ಯುವಕರ ಪಡೆ ಮಾದಕ ವ್ಯಸನಿಗಳಂತೆಯೂ ಕಂಡು ಬರುತ್ತಿದ್ದು, ತಲೆನೋವಾಗಿ ಪರಿಣಮಿಸಿದ್ದಾರೆ. 

ಅನುಕಂಪದ ದುರುಪಯೋಗ
ಇಂತಹ ತಂಡಗಳು ಮುಗ್ಧ ಜನತೆಯನ್ನೇ ಟಾರ್ಗೆಟ್‌ ಮಾಡುತ್ತಿವೆ. ಹೊಟೇಲು, ಬಸ್‌ ನಿಲ್ದಾಣಗಳಲ್ಲಿ ಸಿಕ್ಕವರಿಂದ ಹಣ ಪೀಕಿಸುವ ತಂಡಗಳು ಎರಡೂ ಜಿಲ್ಲೆಗಳಲ್ಲಿ ಕಂಡು ಬರುತ್ತಿವೆ. ಒತ್ತಾಯಿಸಿ ಹಣ ಕೀಳುತ್ತಿರುವ ಬಗ್ಗೆಯೂ ದೂರುಗಳು ಬಂದಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಹಲವರು ಅನುಭವಗಳನ್ನು ಬರೆದುಕೊಂಡಿದ್ದಾರೆ.

ಸಿಎಂ ವಿಕೋಪ ಪರಿಹಾರ ನಿಧಿಗೇ ಹಣ ನೀಡಿ
ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವನ್ನು ನೀಡಲಿಚ್ಛಿಸುವವರು ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ಚೆಕ್‌ ಅಥವಾ ಡಿಡಿ ಮೂಲಕ ಆರ್ಥಿಕ ನೆರವು ನೀಡಬೇಕು. ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ಅಥವಾ ಸ್ವಯಂ ಸೇವಕರು, ಸಂಘ-ಸಂಸ್ಥೆಗಳು ಸಾರ್ವಜನಿಕವಾಗಿ ನಗದು ವಂತಿಗೆ ಸಂಗ್ರಹಿಸಲು ಅವಕಾಶವಿಲ್ಲ. ಸಂಘಸಂಸ್ಥೆಗಳು ಕೂಡ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೇ ಆರ್ಥಿಕ ನೆರವು ನೀಡಬಹುದು ಎಂದು ಎಲ್ಲ ಜಿಲ್ಲಾಡಳಿತಗಳು ಸೂಚನೆ ನೀಡಿವೆ. 

ಪೊಲೀಸ್‌ ದೂರು ನೀಡಿ
ಕೊಡಗಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಸಂತ್ರಸ್ತ ರಾಗಿದ್ದಾರೆ. ಇಂತಹವರ ಹೆಸರಿನಲ್ಲಿ ಹಣ ಸಂಗ್ರಹಿಸಿ ದುರುಪಯೋಗ ಮಾಡುವುದು ಸಲ್ಲ. ಜನ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೇ ಹಣ ನೀಡಬೇಕು. ನೆರೆ ಸಂತ್ರಸ್ತರ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಲ್ಲಿ ತತ್‌ಕ್ಷಣಕ್ಕೆ ಹತ್ತಿರದ ಠಾಣೆಯಲ್ಲಿ ದೂರು ದಾಖಲಿಸಿ.
-ಶಶಿಕಾಂತ ಸೆಂಥಿಲ್‌, ದ.ಕ. ಜಿಲ್ಲಾಧಿಕಾರಿ

ಪರಿಹಾರ ನಿಧಿಗೆ ಹೀಗೆ ಕಳುಹಿಸಿ
* ಕೊಡಗು ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವಾಗಿ ಚೆಕ್‌ ಅಥವಾ ಡಿಡಿಗಳನ್ನು ಕಳುಹಿಸಬೇಕಾದ್ದು: Chief Minister’s Calamity Relief Fund Karnataka State
* ನೇರವಾಗಿ ನಗದು ವರ್ಗಾವಣೆಗೆ No: 37887098605, IFSC Code: SBIN0040277
* ಕೇರಳ ಪ್ರವಾಹ ಸಂತ್ರಸ್ತರಿಗೆ ಆರ್ಥಿಕ ನೆರವಾಗಿ ಚೆಕ್‌ ಅಥವಾ ಡಿಡಿಗಳನ್ನು ಕಳುಹಿಸಬೇಕಾದ್ದು: Chief Minister’s Calamity Relief Fund Kerala State 
*  ನೇರವಾಗಿ ನಗದು ವರ್ಗಾವಣೆಗೆ A/c No: 67319948232 IFSC Code: SBIN0070028   

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.