ನಯಾಗರ ಜಲಪಾತದಲ್ಲಿ ನೀರೇ ಇಲ್ಲ!


Team Udayavani, Aug 21, 2018, 12:01 PM IST

nayaagara.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಉತ್ತಮ ಮಳೆಯಾದರೂ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿರುವ “ನಯಾಗರ ಜಲಪಾತ’ ನೀರಿಲ್ಲದೆ ಬಣಗುಡುತ್ತಿದೆ. ಪರಿಣಾಮ, ಕೃತಕ ಜಲಪಾತದ ಸೌಂದರ್ಯ ಕಾಣಲು ಉದ್ಯಾನಕ್ಕೆ ಭೇಟಿ ನೀಡುವವರಿಗೆ ನಿರಾಸೆ ಮೂಡುವಂತಾಗಿದೆ.

ಹೊಸ ಆವಿಷ್ಕಾರಗಳ ಮೂಲಕ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿರುವ ತೋಟಗಾರಿಕೆ ಇಲಾಖೆ, ಅಮೆರಿಕದ ನಯಾಗರ ಜಲಪಾತವನ್ನು ಮಾದರಿಯಾಗಿಟ್ಟುಕೊಂಡು ಲಾಲ್‌ಬಾಗ್‌ ಕೆರೆಯ ಬಳಿ ಕೃತಕ ಜಲಪಾತ ನಿರ್ಮಿಸಿತ್ತು. ಅದಕ್ಕೆ ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತಾದರೂ, ಕಳೆದ ಎರಡು ತಿಂಗಳಿಂದ ಜಲಪಾತದಲ್ಲಿ ನೀರು ಹರಿಯುತ್ತಿಲ್ಲ.

ಪರಿಣಾಮ ಕೆರೆಯ ಬಳಿಯ ಬಿರುಕು ಬಂಡೆಗಳು ಮಾತ್ರ ಕಾಣ ಸಿಗುತ್ತಿವೆ. ಲಾಲ್‌ಬಾಗ್‌ ಉದ್ಯಾನದ ಸೌಂದರ್ಯ ಹೆಚ್ಚಿಸುವ ಉದ್ದೇಶದಿಂದ ಇಲಾಖೆಯು ಉದ್ಯಾನದ ಕೆರೆಯ ಬಳಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ, ಕೆರೆಯ ಒಂದು ಭಾಗದ 30 ಎಕರೆ ಜಾಗದಲ್ಲಿ 150 ಅಡಿ ಉದ್ದ ಹಾಗೂ 15-20 ಅಡಿ ಎತ್ತರದಲ್ಲಿ ಜಲಪಾತ ನಿರ್ಮಿಸಲಾಗಿತ್ತು.

ಆದರೆ, ಕೆರೆ ಅಭಿವೃದ್ಧಿ ಉದ್ದೇಶಕ್ಕೆ ಜಲಪಾತದಲ್ಲಿ ನೀರು ಹರಿಯುವುದನ್ನು ಸ್ಥಗಿತಗೊಳಿಸಲಾಗಿದೆ. ಕೆರೆ ಅಭಿವೃದ್ಧಿ ಕಾಮಗಾರಿಯು ವಿಳಂಬಗತಿಯಲ್ಲಿ ಸಾಗುತ್ತಿರುವುದರಿಂದ ಇನ್ನೂ ಎರಡು ಮೂರು ತಿಂಗಳು ಜಲಪಾತವನ್ನು ಕಣ್ತುಂಬಿಕೊಳ್ಳಲು ಸಾಧ್ಯವಿಲ್ಲ ಎಂಬುದು ಅಧಿಕಾರಿಗಳ ಅಭಿಪ್ರಾಯ.

ಮರು ಆರಂಭಕ್ಕೆ ಬೇಕು 2 ತಿಂಗಳು: ಮಳೆಯಿಂದಾಗಿ ಲಾಲ್‌ಬಾಗ್‌ ಕೆರೆಯ ಸುತ್ತ ಇರುವ ತಡೆಗೋಡೆ ಬಿರುಕು ಬಿಟ್ಟಿದ್ದು, ಕೆರೆ ನೀರು ಹೊರಭಾಗಕ್ಕೆ ಹರಿದುಹೋಗುತ್ತಿದೆ. ಹಾಗಾಗಿ, ಒಂದು ಕೋಟಿ ರೂ. ವೆಚ್ಚದಲ್ಲಿ ಕೆರೆಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಕೆರೆಯ ಕೆಲವು ಕಡೆಗಳಲ್ಲಿ ಕಾಂಕ್ರೀಟ್‌ ಗೋಡೆಗಳ ನಿರ್ಮಾಣ, ಬದಿ ಕಟ್ಟುವ ಕೆಲಸ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ.

ಕಾಮಗಾರಿ ನಡೆಸುವ ವೇಳೆ ಕೃತಕ ಜಲಪಾತದಲ್ಲಿ ನೀರು ಹರಿಸಿದರೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ತೊಂದರೆಯಾಗಲಿದೆ. ಹೀಗಾಗಿ, ಅನಿವಾರ್ಯವಾಗಿ ನೀರು ಹರಿಸುವುದನ್ನು ತಡೆಹಿಡಿಯಲಾಗಿದೆ. ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಆನಂತರ ಮತ್ತೆ ಜಲಪಾತದಲ್ಲಿ ನೀರು ಹರಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ವಾಯುವಿಹಾರಿಗಳಿಗೆ ಬೇಸರ: ಕೃತಕ ಜಲಪಾತದಲ್ಲಿ ನೀರು ನಿಲ್ಲಿಸಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ವಾಯುವಿಹಾರಿಗಳು ಹಾಗೂ ಪ್ರೇಕ್ಷಕರು ಒಂದು ವರ್ಷಕ್ಕೂ ಹೆಚ್ಚು ದಿನಗಳ ಕಾಲ ಕೃತಕ ನಯಾಗರ ಜಲಪಾತದ ಕಾಮಗಾರಿ ನಡೆಸಿದ್ದು, ಈ ವೇಳೆಯೇ ಕೆರೆಯ ತಡೆಗೋಡೆ, ಬದಿ, ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಮಾಡಿಕೊಂಡಿದ್ದರೆ ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿರುವ ಜಲಪಾತವನ್ನು ನಿಲ್ಲಿಸುವ ಅನಿವಾರ್ಯತೆ ಬರುತ್ತಿರಲಿಲ್ಲ. ಮುಂದಾಲೋಚನೆಯಿಲ್ಲದ ಮಾಡಿದ ಕೆಲಸದಿಂದಾಗಿ ಹಣವೂ ಪೋಲು, ಜನರಿಗೆ ಸೌದರ್ಯ ಸವಿಯುವ ಅವಕಾಶವೂ ಇಲ್ಲದಂತಾಗಿದೆ ಎಂದು ಹೇಳುತ್ತಿದ್ದಾರೆ.

ವರ್ಷಾರಂಭದಲ್ಲಿ ನಯಾಗರ ಫಾಲ್ಸ್‌ ಕಾಮಗಾರಿ ಮುಗಿಸಿ ನೀರು ಹರಿಸಿದ್ದರು. ಇದೀಗ ಮತ್ತೆ ಕೆರೆ ಕಾಮಗಾರಿ ಹೆಸರಿನಲ್ಲಿ ಎರಡು ತಿಂಗಳಿನಿಂದ ನೀರು ನಿಲ್ಲಿಸಲಾಗಿದೆ. ಖಾಲಿ ಬಂಡೆಗಳನ್ನು ಜನರಿಗೆ ತೋರಿಸಲು ಕೋಟಿ ಕೋಟಿ ಖರ್ಚು ಮಾಡುವ ಅಗತ್ಯವೇನಿತ್ತು?
-ಶಂಭುಲಿಂಗ, ವಾಯುವಿಹಾರಿ 

ಮಳೆಗೆ ಲಾಲ್‌ಬಾಗ್‌ ಕೆರೆಯ ತಡೆಗೋಡೆ ಬಿರುಕು ಬಿಟ್ಟು, ಕೆರೆ ಬದಿ ರಸ್ತೆ ಹಾಳಾಗಿತ್ತು. ಜಲಪಾತದಲ್ಲಿ ನೀರು ಹರಿಸುವುದರಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆಯಾಗುತ್ತದೆ. ಈ ಕಾರಣದಿಂದಾಗಿ ನೀರು ಸ್ಥಗಿತಗೊಳಿಸಿದ್ದು, ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಿ ಮತ್ತೆ ಜಲಪಾತಕ್ಕೆ ಚಾಲನೆ ನೀಡಲಾಗುವುದು.
-ಚಂದ್ರಶೇಖರ್‌, ಲಾಲ್‌ಬಾಗ್‌ ಉದ್ಯಾನದ ಸಹಾಯಕ ನಿರ್ದೇಶಕ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.