ಬಂಟ್ವಾಳ: ಮಧ್ಯರಾತ್ರಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ
Team Udayavani, Aug 21, 2018, 1:38 PM IST
ಬಂಟ್ವಾಳ: ಮನೆಮಂದಿಯನ್ನು ಕಟ್ಟಿ ಹಾಕಿ ಚಿನ್ನಾಭರಣಗಳನ್ನು ದರೋಡೆ ಮಾಡಿದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಅಮ್ಟಾಡಿ ಲೋರಟ್ಟೋ ಎಂಬಲ್ಲಿ ನಡೆದಿದೆ.
ಅಮ್ಟಾಡಿ ಗ್ರಾಮದ ಲೊರೆಟ್ಟೋ ನಿವಾಸಿ ಜೇಕಬ್ ರೋಡ್ರಿಗಸ್ ಎಂಬವರ ಮನೆಗೆ ಮಧ್ಯೆ ರಾತ್ರಿಯ ವೇಳೆ ನುಗ್ಗಿದ ಕಳ್ಳರು ಈ ಕೃತ್ಯ ಎಸಗಿದ್ದಾರೆ.
ರಾತ್ರಿ ಸುಮಾರು ಒಂದುವರೆ ಘಂಟೆಯ ವೇಳೆ ಜೇಕಬ್ ಅವರ ಮನೆಯ ಹಿಂಬದಿಯ ಮನೆಯ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿದ ಐದು ಜನ ಮುಸುಕುಧಾರಿಗಳು ಮನೆಯಲ್ಲಿದ್ದ ಜೇಕಬ್ ಮತ್ತು ಅವರ ಮಗಳು ಅಲ್ಮೀರಾ ಅವರ ಕೈಕಾಲುಗಳನ್ನು ಕಟ್ಟಿಹಾಕಿದ್ದರು. ನಂತರ ಜೇಕಬ್ ಅವರ ಪತ್ನಿ ಗ್ರೇಟ ಅವರಲ್ಲಿ ಬಂಗಾರ ತೋರಿಸಿವಂತೆ ಹೆದರಿಸಿ ಕಪಾಟಿನಲ್ಲಿದ್ದ ಬಂಗಾರಗಳನ್ನು ದೋಚಿದ್ದಾರೆ.
ಕಪಾಟಿನಲ್ಲಿದ್ದ ಸುಮಾರು 30 ಗ್ರಾಂನ ಮಂಗಳಸೂತ್ರ, ನಾಲ್ಕು ಉಂಗುರ, ವಾಚು ಹಾಗೂ ಒಪೋ ಮೋಬೈಲನ್ನು ದೋಚಿದ ಘಟನೆ ನಡೆದಿದೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣೆ ಎಡಿಶನಲ್ ಎಸ್ಪಿ ವಿ.ಜೆ.ಸಜಿತ್, ಎ.ಎಸ್. ಪಿ.ಹ್ರಷಿಕೇಶ್ ಸೋನಾವಣೆ, ವೃತ ನಿರೀಕ್ಷಕ ಟಿ.ಡಿ.ನಾಗರಾಜ್, ಎಸ್.ಐ.ಗಳಾದ ಚಂದ್ರಶೇಖರ್, ಹರೀಶ್, ಪ್ರೋಬೆಸನರಿ ಪಿ.ಎಸ್.ಐ.ಸೌಮ್ಯ, ಎ.ಎಸ್.ಐ.ಸಂಜೀವ, ಹೆಚ್.ಸಿ.ಸುರೇಶ್ ಪಡಾರ್, ಸಿಬ್ಬಂದಿಗಳಾದ ಮಲಿಕ್ ಸಾಬ್, ಕುಮಾರ್, ವಿವೇಕ್, ಸುಜು, ಗೋಣಿಬಸಪ್ಪ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್