ತಪ್ಪಾಗಿದೆ ಬಿಡಿ: ಬಿಸ್ಕೆಟ್ ಎಸೆದ ಕುರಿತು ಸಚಿವ ರೇವಣ್ಣ ಸಮರ್ಥನೆ
Team Udayavani, Aug 21, 2018, 4:05 PM IST
ಬೆಂಗಳೂರು: ನನ್ನಿಂದ ತಪ್ಪಾಗಿದೆ ಬಿಡಿ..ಜನ ಕೇಳಿದ್ರೆ ಕ್ಷಮೆ ಕೇಳುತ್ತೇನೆ, ಒಳ್ಳೆ ಕೆಲಸ ಮಾಡುವಾಗ ಇದೆಲ್ಲಾ ಸಾಮಾನ್ಯ..ಇದು ಸಚಿವ ಎಚ್.ಡಿ.ರೇವಣ್ಣ ಅವರು ಪ್ರವಾಹ ಸಂತ್ರಸ್ತ್ರರಿಗೆ ಬಿಸ್ಕೆಟ್ ಪ್ಯಾಕೆಟ್ಗಳನ್ನು ಎಸೆದು ವ್ಯಾಪಕ ಟೀಕೆಗೊಳಗಾದ ಬಳಿಕ ನೀಡಿದ ಸಮರ್ಥನೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ನನ್ನಿಂದ ತಪ್ಪಾಗಿದೆ ಬಿಡಿ’ ಎಂದರು.
‘ನಾನು ದೇವರನ್ನು ನಂಬುವವನು.ನಾನು ಬೇಕು ಅಂತಾ ಎಸೆದಿಲ್ಲ. ಹಿಂದೆ ಕುಳಿತಿದ್ದವರೂ ಜೋರಾಗಿ ಕೂಗುತ್ತಿದ್ದವರು.ಅವರಿಗೂ ಸಿಗಲಿ ಅಂತಾ ಒಳ್ಳೆಯ ಮನಸ್ಸಿನಿಂನ ಎಸೆದಿದ್ದೇನೆ, ಅಂತಹ ಮನೋಭಾವನೆ ನನ್ನದಲ್ಲ’ ಎಂದರು.
‘ನಾನೇನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವನಲ್ಲ ಆದರೂ ಹಗಲು, ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದೇನೆ. 3 ಸಾವಿರ ಹಾಲಿನ ಪ್ಯಾಕೇಟ್ ವಿತರಿಸಿದ್ದೇನೆ. ಎಸೆದಿದ್ದೇನಾ’ ಎಂದು ಪ್ರಶ್ನಿಸಿದರು.
‘ಈ ಸಂದರ್ಭದಲ್ಲಿ ರಾಜಕೀಯ ಮಾಡುವುದು ಬೇಡ’ ಎಂದು ಸಚಿವ ರೇವಣ್ಣ ಮನವಿ ಮಾಡಿದರು.
ಹಾಸನದ ರಾಮನಾಥಪುರ ಸಂತ್ರಸ್ತ್ರರ ಕೇಂದ್ರದಲ್ಲಿ ರೇವಣ್ಣ ಅವರು ಬಿಸ್ಕೆಟ್ ಎಸೆದ ದೃಶ್ಯಾವಳಿ ವ್ಯಾಪಕವಾಗಿ ಸಾಮಾಜಿಕ ತಾಣಗಳಲ್ಲಿ ಹರಿದಾಡಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು