ಹೊನ್ನಾಳಿಗೆ ಬೇಕಿದೆ ಹೊಸತನದ ಸ್ಪರ್ಶ


Team Udayavani, Aug 21, 2018, 5:36 PM IST

dvg-4.jpg

ಹೊನ್ನಾಳಿ: ಅರೆ ಮಲೆನಾಡು ಹಾಗೂ ಬಯಲು ಸೀಮೆಯ ಪ್ರಾದೇಶಿಕ ವೈವಿಧ್ಯತೆಯನ್ನೊಳಗೊಂಡ ಹೊನ್ನಾಳಿ ತಾಲೂಕಿನಲ್ಲಿ ಒಟ್ಟು ಆರು ಹೋಬಳಿಗಳಿವೆ. ಈಚೆಗೆ ಹೊನ್ನಾಳಿ ತಾಲೂಕಿನಿಂದ ಬೇರ್ಪಟ್ಟಿರುವ ನ್ಯಾಮತಿ ಹೊಸ ತಾಲೂಕಾಗಿ ಉದಯಿಸಿದೆ. ನೂತನ ನ್ಯಾಮತಿ ತಾಲೂಕಿಗೆ ಯಾವುದೇ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ. ಹೆಸರಿಗೆ ಮಾತ್ರ ತಾಲೂಕು ಆಗಿದೆ.

ತುಂಗಭದ್ರಾ ನದಿಯ ಇಕ್ಕೆಲಗಳಲ್ಲಿ ಹೊನ್ನಾಳಿ ತಾಲೂಕಿನ ವ್ಯಾಪ್ತಿ ಹರಡಿಕೊಂಡಿದೆ. ತಾಲೂಕು ಸಾಸ್ವೇಹಳ್ಳಿ, ಕುಂದೂರು, ಬೇಲಿಮಲ್ಲೂರು, ಚೀಲೂರು, ಬೆಳಗುತ್ತಿ, ನ್ಯಾಮತಿ ಜಿಪಂ ಕ್ಷೇತ್ರಗಳನ್ನು ಹೊಂದಿದೆ.
 
ಮಲೆನಾಡಿನ ಸಹ್ಯಾದ್ರಿ ಪರ್ವತ ಶ್ರೇಣಿಯ ತುದಿ ಹೊನ್ನಾಳಿ ತಾಲೂಕಿನಲ್ಲಿ ಹಾದು ಹೋಗಿ ಬಯಲು ಸೀಮೆಯಲ್ಲಿ ಲೀನವಾಗಿದೆ. ತೀರ್ಥಗಿರಿ, ಕಲುಬಿಗಿರಿ ಹಾಗೂ ತುಪ್ಪದಗಿರಿ ಈ ಶ್ರೇಣಿಯ ಕಿರಿ ಶಿಖರಗಳು. ಈ ಬೆಟ್ಟ ಶ್ರೇಣಿಯ ಆಚೀಚೆ ಇರುವ ಸೂರಗೊಂಡನಕೊಪ್ಪ, ಸುರಹೊನ್ನೆ, ಮಲ್ಲಿಗೇನಹಳ್ಳಿ, ಬೆಳಗುತ್ತಿ ಅರೆ ಮಲೆನಾಡಿನ ಪರಿಸರದಲ್ಲಿರುವ ಗ್ರಾಮಗಳು.

ಹೊನ್ನಾಳಿ ಪಟ್ಟಣದಲ್ಲಿ ಮೊದಲು 16 ವಾರ್ಡಗಳು ಅಸ್ತಿತ್ವದಲ್ಲಿದ್ದು ಈಗ ಪರಿಷ್ಕರಣೆಗೊಂಡು 18 ವಾರ್ಡ್‌ಗಳ ನಿರ್ಮಾಣವಾಗಿದೆ. ತಾಲೂಕು ಕೇಂದ್ರದಲ್ಲಿ ಐತಿಹಾಸಿಕ ಹಿರೇಕಲ್ಮಠ, ರಾಂಪುರ ಮಠ, ಹೊಟ್ಯಾಪುರಮಠ, ದ್ವಿತೀಯ ಮಂತ್ರಾಲಯ, ಪುಣ್ಯ ಕ್ಷೇತ್ರ ತೀರ್ಥರಾಮೇಶ್ವರ, ಗೆಡ್ಡೆ ರಾಮೇಶ್ವರ, ಬಳ್ಳೇಶ್ವರ ಸೇರಿದಂತೆ ಅನೇಕ ಧಾರ್ಮಿಕ ಮಠಗಳು, ದೇವಸ್ಥಾನಗಳಿವೆ.

ಹೊನ್ನಾಳಿ ತಾಲೂಕು ಕೇಂದ್ರದ ಸಮೀಪ ತುಂಗಭದ್ರಾ ನದಿ ಹರಿಯುತ್ತಿದೆ. ಹೊಳೆ ನೀರಿನ ಸೌಕರ್ಯವಿದ್ದರೂ ಇದುವರೆಗೂ ಯಾವುದೇ ಕಾರ್ಖಾನೆ ಸ್ಥಾಪನೆಯಾಗಿಲ್ಲ. ನಿರುದ್ಯೋಗವನ್ನು ಕಡಿಮೆ ಮಾಡುವಂತಹ ಒಂದು ಜನ ಹಿತ ಬಯಸುವ ಕಾರ್ಖಾನೆ ಇಲ್ಲಿ ಸ್ಥಾಪನೆಯಾದರೆ ತಾಲೂಕು ಉತ್ತಮ ಸ್ಥಾನ ಗಳಿಸಲು ಸಹಕಾರಿಯಾಗುತ್ತದೆ.

ತಾಲೂಕಿನ ಪೂರ್ವ ಗ್ರಾಮಗಳಿಗೆ ಭದ್ರಾ ನೀರಿನ ಲಭ್ಯತೆ ಇದ್ದು, ಈ ಭಾಗದ ರೈತರು ಹೇರಳವಾಗಿ ಭತ್ತ ಬೆಳೆಯುವದರಿಂದ ಹೊನ್ನಾಳಿಯಲ್ಲಿ ಭತ್ತದ ಸಂಸ್ಕರಣ ಘಟಕ ತೆರೆಯಬೇಕಿದೆ. ತಾಲೂಕಿನಲ್ಲಿ ಮೆಕ್ಕೆಜೋಳದ ಬೆಳೆಯನ್ನು ಹೇರಳವಾಗಿ ಬೆಳೆಯುದರಿಂದ ಹೊನ್ನಾಳಿಯಲ್ಲಿ ಮೆಕ್ಕೆಜೋಳದ ಸಂಸ್ಕರಣ ಘಟಕ ತೆರೆಯುವ ಜರೂರು ಇದೆ.

ಪಟ್ಟಣದಲ್ಲಿ ಉತ್ತಮ ಹಾಗೂ ಗುಣಮಟ್ಟದ ಸಿಸಿ ರಸ್ತೆಗಳ ತಕ್ಷಣದ ಅವಶ್ಯಕತೆ, ಅಸ್ಪಷ್ಠ ಹಾಗೂ ಅರ್ಧಕ್ಕೆ ನಿಂತಿರುವ ಒಳ ಚರಂಡಿ ವ್ಯವಸ್ಥೆಯನ್ನು ಪೂರ್ಣಗೊಳಿಸಿದರೆ ಪಟ್ಟಣಕ್ಕೆ ಒಂದು ನಿರ್ಧಿಷ್ಟತೆ ಲಭ್ಯವಾಗುತ್ತದೆ. ಪಟ್ಟಣದಲ್ಲಿ ಪ್ರತಿ ಬುಧವಾರ ಹಾಗೂ ಗುರುವಾರ ಕುರಿ ಸಂತೆ ನಡೆಯುವುದರಿಂದ ಗುಣಮಟ್ಟದ ಕುರಿ ಸಂತೆ, ತರಕಾರಿ ಮಾರ್ಕೆಟ್‌ಗಳ ಅವಶ್ಯಕತೆ ಇದ್ದು ಇವುಗಳ ನಿರ್ಮಾಣ ಕಾರ್ಯ ಬೇಗನೆ ಆಗಬೇಕಿದೆ.

ಹೊನ್ನಾಳಿ ಪಟ್ಟಣದಲ್ಲಿ ಒಟ್ಟು ಜನಸಂಖ್ಯೆ 17921 ಇದ್ದು ಜನಸಂಖ್ಯೆ 20 ಸಾವಿರಕ್ಕಿಂತ ಕಡಿಮೆ ಇರುವ ಕಾರಣ ಹೊನ್ನಾಳಿ ತಾಲೂಕು ಕೇಂದ್ರ ಇನ್ನು ಪಟ್ಟಣ ಪಂಚಾಯತ್‌ ವ್ಯವಸ್ಥೆಯಲ್ಲಿದೆ. ಹೊನ್ನಾಳಿ ತಾಲೂಕು ಕೇಂದ್ರದಲ್ಲಿ ಮಿನಿವಿಧಾನಸೌಧ, ಪಟ್ಟಣ ಪಂಚಾಯತ್‌, ಕೃಷಿ ಇಲಾಖೆ, ತಾಲೂಕು ಪಂಚಾಯತ್‌, ಉಪ ನೋಂದಣಿ ಕಚೇರಿ ಪಟ್ಟಣದ ಹೃದಯ ಭಾಗದಲ್ಲಿದ್ದರೆ, ಸರ್ಕಾರಿ ಆಸ್ಪತ್ರೆ, ನ್ಯಾಯಾಲಯ, ವಿದ್ಯಾರ್ಥಿನಿಲಯಗಳು ಪಟ್ಟಣದಿಂದ ಸುಮಾರು ಒಂದು ಕಿ.,ಮೀ. ದೂರದ ದುರ್ಗಿಗುಡಿ ಬಡಾವಣೆಯ ಪಶ್ಚಿಮ ದಿಕ್ಕಿನಲ್ಲಿವೆ. ಹೊನ್ನಾಳಿ ಪೊಲೀಸ್‌ ಠಾಣೆ, ಬಿಇಒ ಕಚೇರಿ, ತೋಟಗಾರಿಕೆ ಕಚೇರಿಗಳು ದೇವನಾಯ್ಕನಹಳ್ಳಿಯಲ್ಲಿವೆ. ಈ
ಎಲ್ಲ ಸರ್ಕಾರಿ ಕಚೇರಿಗಳು ಒಂದೇ ಆವರಣದಲ್ಲಿ ಬರುವಂತೆ ಮಾಡಿದರೆ ತಾಲೂಕಿನ ನಾಗರಿಕರಿಗೆ ಉತ್ತಮ ಸೌಲತ್ತು ಕಲ್ಪಿಸಿಕೊಟ್ಟಂತಾಗುತ್ತದೆ. ಉತ್ತಮ ಭವಿಷ್ಯದ ತಾಲೂಕು ಆಗುವುದರಲ್ಲಿ ಅನುಮಾನವಿಲ್ಲ.

ಪಟ್ಟಣಕ್ಕೆ ಹೊಂದಿಕೊಂಡಂತೆ ಐತಿಹಾಸಿಕ ಹಾಗೂ ಪುಣ್ಯ ಸ್ಥಳಗಳಾದ ಹಿರೇಕಲ್ಮಠ ಹಾಗೂ ತುಂಗಭದ್ರಾ ನದಿಯ ತಟದಲ್ಲಿರುವ 2ನೇ ಮಂತ್ರಾಲಯ ಮಠಗಳಿದ್ದು, ತಾಲೂಕು ಕೇಂದ್ರಕ್ಕೆ ಸಮೀಪ ಇರುವ ಬಳ್ಳೇಶ್ವರ ಶಿಲಾ ದೇವಸ್ಥಾನ ಮತ್ತು ತಾಲೂಕಿನಲ್ಲಿ ಬೆಟ್ಟದ ಸಾಲಿನಲ್ಲಿರುವ ತೀರ್ಥರಾಮೇಶ್ವರ, ತುಣಗಭದ್ರಾ ನದಿ ಮಧ್ಯದಲ್ಲಿರುವ ಗೆಡ್ಡೆ ರಾಮೇಶ್ವರ ಸೇರಿದಂತೆ ಅನೇಕ ಪುಣ್ಯ ಸ್ಥಳಗಳ ಕೇಂದ್ರವಾಗಿರುವ ಹೊನ್ನಾಳಿಗೆ ಒಂದು ಪ್ರವಾಸೋದ್ಯಮ ಇಲಾಖೆ ತೆರೆಯವುದು ಅವಶ್ಯವಾಗಿದೆ. ಪಟ್ಟಣದಲ್ಲಿ ಪಾರ್ಕ್‌ ಇಲ್ಲದೆ ಇರುವುದು ಒಂದು ಕೊರತೆಯಾಗಿದೆ. ಇದನ್ನು ನೀಗಿಸಲು ಪಟ್ಟಣಕ್ಕೆ ಪಾರ್ಕ್‌ ವ್ಯವಸ್ಥೆ ಮಾಡುವ ಅವಶ್ಯಕತೆ ಇದೆ.

ಎಂ.ಪಿ.ಎಂ. ವಿಜಯಾನಂದಸ್ವಾಮಿ 

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.