ಬೆಂಗಳೂರಿಗೆ ಬಂದ ಅಟಲ್ ಅಸ್ಥಿಗೆ ಸ್ವಾಗತ
Team Udayavani, Aug 23, 2018, 6:30 AM IST
ಬೆಂಗಳೂರು: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮದ ಕಳಶ ಬುಧವಾರ ಬೆಂಗಳೂರಿಗೆ ತರಲಾಗಿದ್ದು , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಹಸ್ರಾರು ಕಾರ್ಯಕರ್ತರು ಬರಮಾಡಿಕೊಂಡರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಸಂಸದರಾದ ಸುರೇಶ್ ಅಂಗಡಿ, ಶಿವಕುಮಾರ ಉದಾಸಿಯವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಅಸ್ಥಿ ಕಳಶ ಸ್ವೀಕರಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಸೇರಿ ಹಲವು ನಾಯಕರು ಸ್ವಾಗತ ಕೋರಿದರು.
ನಂತರ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಬೈಕ್ ರ್ಯಾಲಿ ಮೂಲಕ ಮೆರವಣಿಗೆಯಲ್ಲಿ ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ತರಲಾಯಿತು. ಮಾರ್ಗದುದ್ದಕ್ಕೂ ಸಹಸ್ರಾರು ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು.
ರಾಜ್ಯ ಬಿಜೆಪಿ ಕಚೇರಿಯಲ್ಲಿಯೂ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ರವಿಕುಮಾರ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಾಜರಿದ್ದ ಕಾರ್ಯಕರ್ತರು ಹಾಗೂ ಮುಖಂಡರು ಅಸ್ಥಿ ಕಳಶ ಸ್ವಾಗತಿಸಿ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು.
ರಾಜ್ಯ ಕಚೇರಿಗೆ ಚಿತಾಭಸ್ಮದ ಕಳಶ ಆಗಮಿಸದಾಗ ಅಭಿಮಾನಿಗಳು ಅಟಲ್ ಜೀ, ಅಮರ್ ರಹೇ, ವಾಜಪೇಯಿ ಜಿಂದಾಬಾದ್’ ಎಂದು ಘೋಷಣೆಗಳ ಮೂಲಕ ಗೌರವ ಅರ್ಪಿಸಿದರು. ರಾತ್ರಿ ಹತ್ತು ಗಂಟೆವರೆಗೂ ಚಿತಾಭಸ್ಮಕ್ಕೆ ಗೌರವ ಸಲ್ಲಿಸಲು ಸಾರ್ವಜನಿಕರಿಗೂ ಅವಕಾಶ ಮಾಡಿಕೊಡಲಾಗಿತ್ತು.
ಇಂದು ಕಾವೇರಿಗೆ ವಿಸರ್ಜನೆ
ಗುರುವಾರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ಬೆಳಗ್ಗೆ 9 ಗಂಟೆಯಿಂದ ರಾಜ್ಯ ಬಿಜೆಪಿ ಕಾರ್ಯಾಲಯದಿಂದ ಅಸ್ಥಿ ಕಳಶ ತೆರೆದ ಜೀಪಿನಲ್ಲಿ ಮೆರವಣಿಗೆ ನಡೆಸಿ ನವರಂಗ್ ವೃತ್ತ, ವಿಜಯನಗರ, ಗಾಳಿ ಆಂಜನೇಯ ದೇವಸ್ಥಾನ, ರಾಜರಾಜೇಶ್ವರಿ ನಗರ ವೃತ್ತ, ಕೆಂಗೇರಿ ಮೂಲಕ ಸಾಗಲಿದೆ.
ಬಿಡದಿಯಲ್ಲಿ ಕಳಶ ಸ್ವಾಗತಿಸಿ ನಂತರ ರಾಮನಗರ, ಚೆನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ 2 ಗಂಟೆಗೆ ಶ್ರೀರಂಗಪಟ್ಟಣಕ್ಕೆ ತಲುಪಿದ್ದು, ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಗುವುದು. ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಸಂಸದರಾದ ಪಿ.ಸಿ.ಮೋಹನ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಮೆರವಣಿಗೆಯಲ್ಲಿ ಸಾಗುವರು. ಪಶ್ಚಿಮ ವಾಹಿನಿ ಬಳಿ ಸಂಸದ ಪ್ರತಾಪಸಿಂಹ ಹಾಗೂ ಶಾಸಕರಾದ ರಾಮದಾಸ್, ಎಲ್.ನಾಗೇಂದ್ರ ಜತೆಗೂಡಲಿದ್ದಾರೆ .
ನಂತರ ಆ.25 ರಂದು ನೇತ್ರಾವತಿ, ಮಲಪ್ರಭಾ, ಕೃಷ್ಣಾ , ಕಾರಂಜಾ, ತುಂಗಭದ್ರಾ, ಶರಾವತಿ , ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ