ಉದಯವಾಣಿ ವಿಶೇಷ : ಬೀಚ್‌ಗಳಲ್ಲಿ ಪ್ರವಾಸಿಗರ ಸಂಖ್ಯೆ ಶೇ. 80 ಇಳಿಮುಖ


Team Udayavani, Aug 23, 2018, 3:05 AM IST

karavali-beach-600.jpg

ಮಲ್ಪೆ/ಕಾಪು/ಸುರತ್ಕಲ್‌: ಕೇರಳ ಮತ್ತು ಮಡಿಕೇರಿಯ ಜಲಪ್ರಳಯದ ಪರಿಣಾಮ ಕರಾವಳಿಯಲ್ಲಿ ಪ್ರವಾಸಿಗರ ಸಂಖ್ಯೆ ಭಾರೀ ಇಳಿಮುಖವಾಗಿದೆ. ಸ್ಥಳೀಯರು ಸೇರಿದಂತೆ ರಾಜ್ಯ ಹೊರರಾಜ್ಯಗಳ ಪ್ರವಾಸಿಗರನ್ನು ಸೆಳೆಯುತ್ತಿದ್ದ, ಅದರಲ್ಲೂ ಮಳೆಗಾಲದಲ್ಲೂ ಸದಾ ಪ್ರವಾಸಿಗರಿಂದ ತುಂಬಿರುತ್ತಿದ್ದ ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸಂಖ್ಯೆ ಶೇ. 80ರಷ್ಟು ಕುಸಿತವಾಗಿದೆ. ಮಳೆ-ಗಾಳಿಯ ಪರಿಣಾಮ ಸ್ಥಳೀಯರು ಕೂಡ ಬೀಚ್‌ನತ್ತ ಮುಖ ಮಾಡುತ್ತಿಲ್ಲ. ಮಳೆಗಾಲದ ದಿನಗಳಲ್ಲಿ ಸಾಮಾನ್ಯವಾಗಿ ನಿತ್ಯ 2 ಸಾವಿರಕ್ಕೂ ಅಧಿಕ ಮಂದಿ ಬರುತ್ತಿದ್ದರೆ; ಕಳೆದ ರವಿವಾರ ಸಂಜೆ ಕೇವಲ 150ರಿಂದ 200ರಷ್ಟು ಮಂದಿ ಮಾತ್ರ ಬೀಚ್‌ನಲ್ಲಿ ಸುತ್ತಾಡುತ್ತಿರುವುದು ಕಂಡು ಬಂದಿದೆ.

ಮಲ್ಪೆ ಬೀಚ್‌, ಸೈಂಟ್‌ಮೇರಿಸ್‌, ಮರವಂತೆ, ಮುರುಡೇಶ್ವರ ಸೇರಿದಂತೆ ಕರಾವಳಿಯ ಪ್ರವಾಸಿ ತಾಣಗಳಿಗೆ ಕೇರಳದ ರಾಜ್ಯದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಾರೆ. ಮಲ್ಪೆ ಬೀಚ್‌ ಮತ್ತು ಸೈಂಟ್‌ಮೇರಿ ದ್ವೀಪಕ್ಕೆ ಬರುವ ಪ್ರವಾಸಿಗರಲ್ಲಿ ಶೇ. 50ರಷ್ಟು ಕೇರಳ ವಿದ್ಯಾರ್ಥಿಗಳೇ ಇರುತ್ತಾರೆ. ಇನ್ನು ಕೆಲವು ತಿಂಗಳು ಇಲ್ಲಿ ಕೇರಳ ಪ್ರವಾಸಿಗರ ನಿರೀಕ್ಷೆ ಅಸಾಧ್ಯ ಎನ್ನಲಾಗಿದೆ.

ಅಂಗಡಿಗಳು ಮುಚ್ಚಿವೆ
ಹೊಟೇಲ್‌, ಲಾಡ್ಜ್ ಇತ್ಯಾದಿ ಉದ್ಯಮಗಳಿಗೂ ಇದರ ಬಿಸಿ ತಟ್ಟಿದೆ. ವ್ಯಾಪಾರ ಇಲ್ಲವೆಂಬ ಕಾರಣಕ್ಕೆ ಬೀಚ್‌ನ ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲೆಳೆದಿವೆ. ಬೀಚ್‌ ಪರಿಸರದಲ್ಲಿ 70-80ರಷ್ಟು ಅಂಗಡಿ ಮುಂಗಟ್ಟುಗಳಿದ್ದು, ಕೆಲವೊಂದು ಸಣ್ಣ ಅಂಗಡಿಗಳವರು ಮಾತ್ರ ಸಂಜೆ ಬಳಿಕ ಬಾಗಿಲು ತೆರೆದು ಪ್ರವಾಸಿಗರನ್ನು ಎದುರು ನೋಡುತ್ತಿದ್ದಾರೆ. ಕಳೆದ 10-12 ದಿವಸಗಳಿಂದ ದಿನಕ್ಕೆ 200 – 300 ರೂ. ವ್ಯಾಪಾರವೂ ಕಷ್ಟವಾಗಿದೆ ಎನ್ನುತ್ತಾರೆ ಗೂಡಂಗಡಿಯವರು. ಪಣಂಬೂರು ಮತ್ತು ತಣ್ಣಿರುಬಾವಿ ಬೀಚ್‌ಗಳಲ್ಲೂ ಇದೇ ಪರಿಸ್ಥಿತಿ ಇದೆ. ಸ್ಥಳೀಯರು ಮಾತ್ರ ಇಲ್ಲಿ ಗಾಳಿಸೇವನೆಗೆ ಬರುತ್ತಿರುವುದು ಕಂಡುಬರುತ್ತಿದೆ.

ಸೀವಾಕ್‌ ನಿರ್ಜನ
ಪ್ರವಾಹ ಭೀತಿಯಿಂದಾಗಿ ಈಗ ಇತ್ತ ಸೀವಾಕ್‌ನಲ್ಲೂ ಓಡಾಡುವವರಿಲ್ಲ. ಸೀವಾಕ್‌ ಆರಂಭಗೊಂಡಾಗಿನಿಂದಲೂ ಪ್ರತಿದಿನ ಜನಸಾಗರವೇ ಇಲ್ಲಿಗೆ ಹರಿದು ಬರುತ್ತಿತ್ತು. ಮಳೆಗಾಲದಲ್ಲಿ ಸೈಂಟ್‌ಮೇರಿ ದ್ವೀಪ ಯಾನ ನಿಷೇಧದ ಬಳಿಕವಂತೂ ಸೀವಾಕ್‌ ವೀಕ್ಷಕರ ಸಂಖ್ಯೆ ದುಪ್ಪಟ್ಟಾಗಿತ್ತು. ಆದರೀಗ ಅಲ್ಲೂ ಖಾಲಿ ಖಾಲಿಯಾಗಿದೆ.

ಜಲಪ್ರವಾಹದ ಭೀತಿ
ಜಲಪ್ರವಾಹ, ಶಿರಾಡಿ, ಸಂಪಾಜೆ, ಕುದುರೆಮುಖ, ಚಾರ್ಮಾಡಿ ಘಾಟಿಗಳ ಕುಸಿತ ಪ್ರವಾಸಿಗರನ್ನು ಬೆಚ್ಚಿ ಬೀಳಿಸಿದ್ದು ಘಟ್ಟ ಪ್ರದೇಶದವರೂ ಕರಾವಳಿಯ ಪ್ರವಾಸಿ ತಾಣಗಳತ್ತ ವಿಮುಖರಾಗಿದ್ದಾರೆ.

ಕಾಪು ಬೀಚ್‌ ಖಾಲಿಖಾಲಿ
ಪ್ರತಿ ನಿತ್ಯ ನೂರಾರು ಮಂದಿ ಪ್ರವಾಸಿಗರು ಭೇಟಿ ನೀಡುವ ದೇಶ – ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಕಾಪು ಬೀಚ್‌ ಕೂಡ ಪ್ರವಾಸಿಗರಿಲ್ಲದೆ ಖಾಲಿಖಾಲಿಯಾಗಿದೆ. ಬಕ್ರೀದ್‌ ದಿನವಾದರೂ ಹೆಚ್ಚಿನ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿತ್ತು. ಆದರೆ ಇಂದೂ ಜನ ಸಂಚಾರ ವಿರಳವಾಗಿದೆ. ಪ್ರವಾಸಿಗರನ್ನೇ ನಂಬಿರುವ ನಮಗೆ ಹೊಡೆತ ಬಿದ್ದಿದೆ ಎಂದು ಬೀಚ್‌ನಲ್ಲಿ ಫಾಸ್ಟ್‌ ಫುಡ್‌ ವ್ಯವಹಾರ ನಡೆಸುತ್ತಿರುವ ಚಂದ್ರಶೇಖರ್‌ ಪ್ರತಿಕ್ರಿಯಿಸಿದ್ದಾರೆ.

ಕಳೆದ ಎರಡು ವಾರಗಳಿಂದ
ಬೀಚ್‌ಗೆ ಬರುವ ಜನರ ಸಂಖ್ಯೆ ವಿರಳವಾಗಿದೆ. ಒಂದು ವಾರದಿಂದ ದೂರದ ಪ್ರವಾಸಿಗರು ಬರುವುದೇ ನಿಂತುಹೋಗಿದೆ. ನಿತ್ಯ ಸಾವಿರಾರು ಪ್ರವಾಸಿಗರಿಂದ ಗಿಜಿಗಿಡುತ್ತಿದ್ದ  ಬೀಚ್‌ ಬಿಕೋ ಎನ್ನುತ್ತಿದೆ.
– ಸುರೇಶ್‌ ಕುಂದರ್‌, ಸ್ಥಳೀಯ ವಿಹಾರಿ

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.