ಜಿಲ್ಲೆಯ ಪ್ರತಿ ಮನೆಗೂ ಮಲಪ್ರಭ 


Team Udayavani, Aug 23, 2018, 2:45 PM IST

23-agust-18.jpg

ಧಾರವಾಡ: ಮಹದಾಯಿ ನದಿಯಿಂದ ರಾಜ್ಯಕ್ಕೆ (ಮಲಪ್ರಭಾ ನದಿಗೆ) 4 ಟಿಎಂಸಿ ಕುಡಿಯುವ ನೀರು ಸಿಗುತ್ತಿದ್ದಂತೆ ಧಾರವಾಡ ಜಿಲ್ಲೆಯ ಸಮಗ್ರ ಹಳ್ಳಿಗಳ ಕುಡಿಯುವ ನೀರು ಪೂರೈಕೆ ಯೋಜನೆಗೆ ಇದೀಗ ಶಕ್ತಿ ಬಂದಂತಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ ಕುಡಿಯುವ ನೀರು ಪೂರೈಸುತ್ತಿರುವ ಮಾದರಿಯಲ್ಲೇ ಇಡೀ ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಧಾರವಾಡ ಜಿಪಂ ಮತ್ತು ಜಿಲ್ಲಾಡಳಿತ 1200 ಕೋಟಿ ರೂ. ವೆಚ್ಚದ ಮನೆ ಮನೆಗೆ ಶುದ್ಧ ನೀರು ಎನ್ನುವ ಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಯೋಜನೆ ಅನ್ವಯ ಜಿಲ್ಲೆಯಲ್ಲಿನ 388 ಹಳ್ಳಿಗಳ ಮನೆ ಮನೆಗೂ ಮಲಪ್ರಭೆಯ ಶುದ್ಧವಾದ ಕುಡಿವ ನೀರು ತಲುಪಲಿದೆ. ಅದಕ್ಕಾಗಿ 10 ಜನ ತಂತ್ರಜ್ಞರನ್ನ ಒಳಗೊಂಡ ತಂಡವೊಂದು ಅಧ್ಯಯನ ನಡೆಸಿ ನೀರು ಪೂರೈಕೆ, ಪೈಪ್‌ಲೈನ್‌ ಜಾಲ, ವಿದ್ಯುತ್‌ ಪೂರೈಕೆ, ಪಂಪ್‌ ಗಳ ಅಳವಡಿಕೆ ಸೇರಿ ಒಟ್ಟಾರೆ ಯಾವುದೇ ಆತಂಕವಿಲ್ಲದೇ ಹಳ್ಳಿಗಳಿಗೆ ನೀರು ಪೂರೈಕೆಯಾಗುವ ವ್ಯವಸ್ಥೆಯೊಂದನ್ನು ರೂಪಿಸಿ ಯೋಜನೆಯ ನೀಲನಕ್ಷೆ ಸಿದ್ಧಗೊಳಿಸಿದೆ. ಈ ಯೋಜನೆಯ ಅನ್ವಯ ಮಲಪ್ರಭಾ ಅಣೆಕಟ್ಟೆ ಯಿಂದಲೇ (ರೇಣುಕಾ ಸಾಗರ) ನೀರು ಹರಿಸಬೇಕಾಗಿತ್ತು. ಆದರೆ ಅಣೆಕಟ್ಟೆಗೆ ನೀರಿನ ಸಂಗ್ರಹ ಕುಸಿದಿದ್ದರಿಂದ ಯೋಜನೆ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಮಹದಾಯಿ ನ್ಯಾಯಾಧಿಕರಣ ಕುಡಿಯುವುದಕ್ಕಾಗಿಯೇ 4 ಟಿಎಂಸಿ ನೀರು ಕೊಟ್ಟಿದ್ದರಿಂದ ಯೋಜನೆ ಅನುಷ್ಠಾನಕ್ಕೆ ಎದುರಾಗಿದ್ದ ಅತಿ ದೊಡ್ಡ ವಿಘ್ನ ದೂರಾದಂತಾಗಿದೆ.

ಯೋಜನೆ ರೂಪಿಸಿದ್ದು ಏಕೆ?
ಧಾರವಾಡ ಜಿಲ್ಲೆಗೆ ಯಾವುದೇ ಪ್ರಬಲವಾದ ನದಿ, ಹಳ್ಳಕೊಳ್ಳ ಅಥವಾ ಕೆರೆಗಳ ಬಲವಿಲ್ಲ. ಇಲ್ಲೇನಿದ್ದರೂ ಅಂತರ್ಜಲದ ಜೊತೆಗೆ ಹಳ್ಳಿಗರು ತಮ್ಮ ದಾಹ ನೀಗಿಸಿಕೊಳ್ಳಬೇಕು. ಜಿಲ್ಲೆಯಲ್ಲಿನ 388 ಹಳ್ಳಿಗಳಲ್ಲಿ 11 ಲಕ್ಷಕ್ಕೂ ಅಧಿಕ ಜನರು ವಾಸವಾಗಿದ್ದು 8 ಲಕ್ಷದಷ್ಟು ಜಾನುವಾರುಗಳಿವೆ. ಪ್ರತಿ ಬೇಸಿಗೆಯಲ್ಲೂ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗುತ್ತದೆ. ಇಂದಿಗೂ ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕಿನ ಕೆಲವು ಹಳ್ಳಿಗಳಿಗೆ ಪ್ರತಿದಿನ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುವುದು ತಪ್ಪಿಲ್ಲ. 2018ರ ಜನವರಿಯಿಂದ ಜುಲೈವರೆಗೂ ಜಿಲ್ಲೆಯ ಹಳ್ಳಿಗಳಲ್ಲಿತ್ತು ನೀರಿನ ಹಾಹಾಕಾರ. 

ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ ಎಲ್ಲೆಂದರಲ್ಲಿ ಕೊಳವೆಬಾವಿ ಕೊರೆದು ತಾತ್ಕಾಲಿಕವಾಗಿ ನೀರು ಪೂರೈಕೆ ಮಾಡುತ್ತದೆ. ಆದರೆ ಸತತ ಬರಗಾಲ ಮತ್ತು ಕೊಳವೆ ಬಾವಿಗಳ ಸಂಖ್ಯೆ ಹೆಚ್ಚಿದ್ದರಿಂದಾಗಿ ಕಳೆದ ಆರು ವರ್ಷಗಳಲ್ಲಿ ಅಂತರ್ಜಲ 500 ಅಡಿಗೆ ಕುಸಿದಿದೆ. ಸರ್ಕಾರಿ ಜಾಗದಲ್ಲಿಯೇ ಗ್ರಾಮೀಣ ನೀರು ಪೂರೈಕೆ ಇಲಾಖೆ ಬೊರ್‌ ವೆಲ್‌ ಕೊರೆಸಬೇಕು. ಎರಡು ಅಥವಾ ಮೂರು ತಿಂಗಳು ನೀರು ಚೆಲ್ಲಿ ಕೊಳವೆಬಾವಿ ಬತ್ತುತ್ತಿವೆ. ಇನ್ನು ಕೆರೆಗಳ್ಳೋ ಹತ್ತು ವರ್ಷಕ್ಕೆ ಒಮ್ಮೆ ಮಳೆಯಿಂದ ಭರ್ತಿಯಾಗುತ್ತಿವೆ. ಅಲ್ಲಿಯೂ ನೀರಿಲ್ಲ. ಒಟ್ಟಾರೆ ಕುಡಿಯುವ ನೀರಿಗಾಗಿ ಜಿಲ್ಲೆಗೆ ಪ್ರತಿವರ್ಷ 15-20 ಕೋಟಿ ರೂ.ಗಳಷ್ಟು ಹಣ ವ್ಯಯಿಸಲಾಗುತ್ತಿದೆ. ಹೀಗಾಗಿ ಶಾಶ್ವತವಾಗಿ ಸವದತ್ತಿಯ (ಬೆಳಗಾವಿ ಜಿಲ್ಲೆ)ಯ ರೇಣುಕಾ ಸಾಗರ್‌ ಜಲಾಶಯದಿಂದ 1.6 ಟಿಎಂಸಿ ನೀರನ್ನು ಬಳಸಿಕೊಂಡು ಜಿಲ್ಲೆಯ ಎಲ್ಲಾ ಹಳ್ಳಿಗಳಿಗೂ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕು ಎಂಬ ಕಾರಣಕ್ಕೆ ಈ ಯೋಜನೆ ರೂಪಿತವಾಗಿದೆ.

ನೀರು ಪೂರೈಕೆಗೆ ಜಾಲ
ಜಿಲ್ಲೆಯ 388 ಹಳ್ಳಿಗಳಲ್ಲಿಯೂ ಪ್ರತಿವರ್ಷ ನೀರಿನ ತೊಂದರೆ ಇದ್ದೇ ಇದೆ. ಈ ಪೈಕಿ 279 ಹಳ್ಳಿಗಳಲ್ಲಂತೂ ವರ್ಷದ 6 ತಿಂಗಳು ನೀರಿಗಾಗಿ ಹಾಹಾಕಾರ ಇರುವುದನ್ನು ಅಧ್ಯಯನ ತಂಡ ಪ್ರಸ್ತಾಪಿಸಿದೆ. ಅದಕ್ಕಾಗಿ ಈಗಾಗಲೇ ಜಿಲ್ಲೆಯಲ್ಲಿ ಎರಡು ಕಡೆ ಮಾಡಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಮಾದರಿಯಲ್ಲೇ ಇನ್ನಷ್ಟು ತಂತ್ರಾಂಶಗಳು ಮತ್ತು ವಿನೂತನ ವಿಧಾನಗಳನ್ನು ಬಳಸಿಕೊಂಡು ಸರಿಯಾಗಿ ನೀರು ಪೂರೈಸಲು ಯೋಜಿಸಲಾಗಿದೆ.

ಮಲಪ್ರಭಾ ಅಣೆಕಟ್ಟೆಯಿಂದ ನೇರವಾಗಿ ಪ್ರತ್ಯೇಕ ಪೈಪ್‌ಲೈನ್‌ ಬಳಸಿಕೊಂಡು ನೀರು ಪೂರೈಕೆ ಜಾಲವನ್ನು ಹೆಣೆಯಲಾಗಿದೆ. ಮೊದಲು ನೀರು ಮೇಲ್ಮಟ್ಟದ ಜಲಾಗಾರಗಳಿಗೆ (ದೈತ್ಯ ಓವರ್‌ಹೆಡ್‌ ಟ್ಯಾಂಕ್‌) ಪೂರೈಕೆಯಾಗಲಿದೆ. ಅಲ್ಲಿಂದ ಆಯಾ ಹಳ್ಳಿಗಳ ಸಣ್ಣ ಟ್ಯಾಂಕ್‌ ಗಳಿಗೆ ಪೂರೈಕೆಯಾಗಿ ಮನೆಮನೆ ತಲುಪಲಿದೆ. ಪ್ರತಿ ನಾಲ್ಕು ಅಥವಾ ಐದು ಹಳ್ಳಿಗಳಿಗೆ ಒಂದೊಂದು ಪ್ರತ್ಯೇಕ ನೀರು ಪೂರೈಕೆ ಪಂಪ್‌ ಗಳು ಇರಲಿವೆ. ಒಂದೆಡೆ ವಿದ್ಯುತ್‌ ವ್ಯತ್ಯಯವಾದರೆ ಎಲ್ಲ ಹಳ್ಳಿಗಳಿಗೂ ತೊಂದರೆಯಾಗದಂತೆ ಪ್ರತ್ಯೇಕ ವಿದ್ಯುತ್‌ ಲೈನ್‌ ಮತ್ತು ಪಂಪ್‌ ಸೆಟ್‌ಗಳನ್ನು ಬಳಕೆ ಮಾಡಲು ಯೋಜಿಸಲಾಗಿದೆ.

ಧಾರವಾಡ ಜಿಲ್ಲೆಯ ಎಲ್ಲಾ ಹಳ್ಳಿಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇದ್ದಿದ್ದು ನಿಜ. ಪ್ರತಿ ಬಾರಿಯೂ ತಾತ್ಕಾಲಿಕ ವ್ಯವಸ್ಥೆ ಮಾಡುತ್ತಿದ್ದೇವೆ ಅಷ್ಟೇ. ಆದರೆ ಈ ಸಮಗ್ರ ಯೋಜನೆ ಜಾರಿಯಾದರೆ, ಶಾಶ್ವತವಾಗಿ ಕುಡಿಯುವ ನೀರು ಸಿಗಲಿದೆ.
ಮನೋಹರ ಮಂಡೋಳಿ, ಪಂಚಾಯತ್‌ರಾಜ್‌ ಇಲಾಖೆ ಇಇ, ಧಾರವಾಡ

ಜಿಲ್ಲೆಗೆ ಯಾವುದೇ ನದಿಗಳ ಆಸರೆ ಇಲ್ಲ. ಹೀಗಾಗಿ ಈ ಬೃಹತ್‌ ಯೋಜನೆ ಅನಿವಾರ್ಯವಾಗಿದೆ. ಈ ಕುರಿತು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಅವರಿಗೆ ಮನವರಿಕೆ ಮಾಡಲಾಗಿದೆ. ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಅಗತ್ಯ ಕ್ರಮಗಳಿಗೂ ಸೂಚಿಸಿದ್ದೇನೆ.
ದೀಪಾ ಚೋಳನ್‌, ಜಿಲ್ಲಾಧಿಕಾರಿ, ಧಾರವಾಡ

ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.