ಆ.27ರಂದು ಕಿರುಚಿತ್ರೋತ್ಸವ; ಫೆಸ್ಟಿವಲ್ ಗೆ ಸೋನು ರಾಯಭಾರಿ


Team Udayavani, Aug 23, 2018, 3:53 PM IST

short-film-festival101.jpg

ಕಿರುಚಿತ್ರ ನಿರ್ದೇಶನ, ನಿರ್ಮಾಣ ಮಾಡುವ ಪ್ರತಿಭಾವಂತರಿಗೆ ಅನೇಕ ವೇದಿಕೆಗಳಿವೆ. ಆ ಮೂಲಕ ತಮ್ಮ ಪ್ರತಿಭೆಯನ್ನು ತೋರಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿರುವ ಪ್ರತಿಭಾವಂತರ ಸಂಖ್ಯೆಯೂ ದಿನ ಕಳೆದಂತೆ ಹೆಚ್ಚುತ್ತಿದೆ. ಕಿರುಚಿತ್ರ ಮಾಡುವ ಸಿನಿ ಪ್ರೇಮಿಗಳಿಗೆಂದೇ ಹಲವು ಶಾರ್ಟ್‌ಫಿಲ್ಮ್ ಫೆಸ್ಟಿವಲ್‌ ನಡೆಯುತ್ತಿವೆ. ಆ ಸಾಲಿಗೆ ಈಗ ಸ್ಟೋನ್ಸ್‌ ಮಂಕಿ ಎಂಟರ್‌ಟೈನ್‌ ಮೆಂಟ್‌ ಇಂಟರ್‌ನ್ಯಾಷನಲ್‌ ಶಾರ್ಟ್‌ ಫಿಲ್ಮ್ ಫೆಸ್ಟಿವಲ್‌ ಕೂಡ ಸೇರ್ಪಡೆಯಾಗಿದೆ. 

ಇದು ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡನೇ ವರ್ಷದ ಕಿರುಚಿತ್ರೋತ್ಸವ. ಬೇರೆ ರಾಜ್ಯ, ವಿದೇಶಗಳಲ್ಲಿ ನಡೆಯುವ ಚಿತ್ರೋತ್ಸವಗಳಂತೆಯೇ ಈ ಕಿರುಚಿತ್ರೋತ್ಸವ ನಡೆಸುವ ಉದ್ದೇಶ ಆಯೋಜಕರಿಗಿದೆ. “ಸ್ಟೋನ್ಸ್ ಮಂಕಿ ಐಸ್‌ಕ್ರೀಮ್‌’ ಸಂಸ್ಥೆಯ ಮಾಲೀಕ ಡಾ.ಆಶ್ಲೇಷ ಅವರು ಮನರಂಜನೆ ಕ್ಷೇತ್ರದಲ್ಲೂ ಎಂಟ್ರಿಯಾಗಿ, ಹೊಸ ಪ್ರತಿಭಾವಂತರಿಗೊಂದು ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ. ಕಳೆದ ವರ್ಷ ಯಶಸ್ವಿಯಾಗಿ ನೆರವೇರಿದ್ದ ಕಿರುಚಿತ್ರೋತ್ಸವ, ಈ ಬಾರಿ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ. 

ಎಲ್ಲೆಡೆಯಿಂದ ಈಗಾಗಲೇ 500 ಕ್ಕೂ ಹೆಚ್ಚು ಕಿರುಚಿತ್ರಗಳು ಬಂದಿದ್ದು, ಆ ಪೈಕಿ, ನೋಡುವಂತಹ 300 ಕಿರುಚಿತ್ರಗಳನ್ನು ಆಯ್ಕೆ ಮಾಡಿ, ಅದರಲ್ಲಿ ಅಂತಿಮವಾಗಿ 30 ಕಿರುಚಿತ್ರಗಳನ್ನು ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ. 30 ನಿಮಿಷದ ಒಳಗಿರುವ ಕಿರುಚಿತ್ರಗಳು ಸ್ಪರ್ಧೆಯಲ್ಲಿದ್ದು, ಈ ಕಿರುಚಿತ್ರೋತ್ಸವದಲ್ಲಿ ಜ್ಯೂರಿಗಳಾಗಿ ನಿರ್ದೇಶಕರಾದ ದಯಾಳ್‌ ಪದ್ಮನಾಭ್‌, ರೋಹಿತ್‌ ಪದಕಿ, ಸಂಗೀತ ನಿರ್ದೇಶಕ ಗಿರಿಧರನ್‌ ದಿವಾನ್‌ ಹಾಗು ಜೋಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ಒಟ್ಟು ಎಂಟು ವಿಭಾಗದಲ್ಲಿ ಪ್ರಶಸ್ತಿಗಳನ್ನು ವಿತರಿಸಲು ಆಯೋಜಕರು ತೀರ್ಮಾನಿಸಿದ್ದಾರೆ.

ಎರಡು ನಿಮಿಷದಿಂದ ಹಿಡಿದು, ಇಪ್ಪತ್ತೈದು ನಿಮಿಷದವರೆಗಿನ ಕಿರುಚಿತ್ರಗಳು ಸ್ಪರ್ಧೆಯಲ್ಲಿವೆ. ನಿರ್ದೇಶನ, ನಟ, ನಟಿ, ಸಂಕಲನ, ಸಂಗೀತ, ಪೋಷಕ ನಟ ಮತ್ತು ಛಾಯಾಗ್ರಾಹಣ ವಿಭಾಗದಲ್ಲಿ ಪ್ರಶಸ್ತಿ ವಿತರಿಸಲಾಗುವುದು. ಈಗಾಗಲೇ ಆಯ್ಕೆ ಮಾಡಿರುವ 30 ಕಿರುಚಿತ್ರಗಳ ಪೈಕಿ ಯಾವ ವಿಭಾಗದಲ್ಲಿ ಪ್ರಶಸ್ತಿ ಪಡೆದಿವೆ ಎಂಬುದನ್ನು ಆ.27 ರ ಸಂಜೆ ಕಬ್ಬನ್‌ ಪಾರ್ಕ್‌ ಸಮೀಪದ ಕೆಜಿಎಸ್‌ ಕ್ಲಬ್‌ನಲ್ಲಿ ಘೋಷಣೆ ಮಾಡಲು ಆಯೋಜಕರು ತೀರ್ಮಾನಿಸಿದ್ದಾರೆ. ಅಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯಲಿದೆ. ಇನ್ನೊಂದು ವಿಶೇಷವೆಂದರೆ, ಈ ಕಿರುಚಿತ್ರೋತ್ಸವಕ್ಕೆ ನಟಿ ಸೋನುಗೌಡ ರಾಯಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶೇಷವಾಗಿರುವ ಚಿತ್ರ ಪ್ರದರ್ಶನ ಕೂಡ ಅಂದು ನಡೆಯಲಿದೆ ಎಂಬುದು ಆಯೋಜಕರ ಮಾತು.

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.