ಒಡೆಯನ ಸ್ಪಷ್ಟನೆ ಹೆಸರಿಡದಿದ್ದರೂ ವಿವಾದ


Team Udayavani, Aug 24, 2018, 6:00 AM IST

odeya-kannada-movie.jpg

ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಹುಟ್ಟುಹಬ್ಬದಂದು ದರ್ಶನ್‌ ಹೊಸ ಚಿತ್ರ ಪ್ರಾರಂಭ ಎಂಬ ಸುದ್ದಿ ಎರಡು ತಿಂಗಳಿಂದಲೇ ಇತ್ತು. ಅದಕ್ಕೆ ಸರಿಯಾಗಿ, ಆಗಸ್ಟ್‌ 16ರಂದು ಅಂತೂ ದರ್ಶನ್‌ ಅಭಿನಯದ “ಒಡೆಯ’ ಮೈಸೂರಿನಲ್ಲಿ ಸೆಟ್ಟೇರಿದೆ. ಸಂದೇಶ್‌ ನಾಗರಾಜ್‌ ಅವರ ಮನೆಯಲ್ಲೇ ಚಿತ್ರದ ಮುಹೂರ್ತ ನಡೆಯಿತು. ಹಿರಿಯ ನಟ ಅಂಬರೀಶ್‌, ಬಿಜೆಪಿ ಮುಖಂಡ ರಾಮಚಂದ್ರಗೌಡ ಮೊದಲಾದವರು ಆಗಮಿಸಿ ಶುಭ ಹಾರೈಸಿದರು.

ನಂತರವೇ ಪತ್ರಿಕಾಗೋಷ್ಠಿ ಚಿತ್ರದ ಬಗ್ಗೆ ಮಾತನಾಡಿದ ದರ್ಶನ್‌, ಇದೊಂದು ಫ್ಯಾಮಿಲಿ ಸೆಂಟಿಮೆಂಟ್‌ ಚಿತ್ರ. ಜೊತೆಗೆ ಆಕ್ಷನ್‌ ಸಿನಿಮಾ. ನಾನು ಫ್ಯಾಮಿಲಿ ಸೆಂಟಿಮೆಂಟ್‌ ಚಿತ್ರ ಮಾಡಿ ತುಂಬಾ ದಿನಗಳಾಗಿತ್ತು. ಸಂದೇಶ್‌ ಪ್ರೊಡಕ್ಷನ್‌ನಲ್ಲಿ ಕೆಲಸ ಮಾಡುವುದು ತುಂಬಾ ಖುಷಿ ಕೊಡುತ್ತದೆ. ಸಂದೇಶ್‌ ಪ್ರೊಡಕ್ಷನ್‌ ಬೇರೆಯಲ್ಲ, ತೂಗುದೀಪ ಪ್ರೊಡಕ್ಷನ್‌ ಬೇರೆಯಲ್ಲ. ಸೆಪ್ಟೆಂಬರ್‌ 10ರಂದು ಚಿತ್ರೀಕರಣ ಆರಂಭವಾಗಲಿದೆ. ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲೇ 35 ರಿಂದ 40 ದಿನಗಳ ಕಾಲ ನಡೆಯಲಿದೆ. ಬಳಿಕ ಬೆಂಗಳೂರು, ಹೈದ್ರಾಬಾದ್‌ನಲ್ಲಿ ಚಿತ್ರೀಕರಣ ನಡೆಯಲಿದೆ’ ಎಂದು ತಿಳಿಸಿದರು.

ಇನ್ನು ಚಿತ್ರದ ಟೈಟಲ್‌ ವಿವಾದದ ಬಗ್ಗೆ ಅವರ ಗಮನ ಸೆಳೆದಾಗ, “ಚಿತ್ರಕ್ಕೆ “ಒಡೆಯರ್‌’ ಅಂತ ನಾವು ಟೈಟಲ್‌ ಇಟ್ಟಿರಲಿಲ್ಲ. ಫಿಲ್ಮ್ ಚೇಂಬರ್‌ನಲ್ಲೂ ಆ ಹೆಸರನ್ನು ರಿಜಿಸ್ಟರ್‌ ಮಾಡಿಸಿರಲಿಲ್ಲ. ಆದರೂ ವಿವಾದ ಯಾಕೆ ಹುಟ್ಟಿಕೊಳೊ ಗೊತ್ತಿಲ್ಲ’ ಎಂದು ದರ್ಶನ್‌ ಹೇಳಿದರು.

ಚಿತ್ರದ ನಿರ್ದೇಶಕ ಎಂ.ಡಿ.ಶ್ರೀಧರ್‌ ಮಾತನಾಡಿ, “ಸಂದೇಶ್‌ ನಾಗರಾಜ್‌ ಅವರ ಬ್ಯಾನರ್‌ನಲ್ಲಿ ಅನೇಕ ಚಿತ್ರಗಳಿಗೆ ಸಹಾಯಕ
ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ. ನಿರ್ದೇಶಕನಾಗಿ ಇದು ನನ್ನ ಮೊದಲ ಸಿನಿಮಾ. ದರ್ಶನ್‌ ಅವರ ಮೂರನೇ ಚಿತ್ರ ಇದು. ಬ್ಯಾನರ್‌ ಯಾವುದೇ ಆಗಲೀ, ದರ್ಶನ್‌ ಸಿನಿಮಾ ಮಾಡುವುದು ನನ್ನ ಭಾಗ್ಯ. ರವಿಶಂಕರ್‌, ದೇವರಾಜ್‌, ಚಿಕ್ಕಣ್ಣ, ಸಾಧು ಕೋಕಿಲ ಮೊದಲಾದ ಕಲಾವಿದರನ್ನು ಚಿತ್ರಕ್ಕೆ ಆಯ್ಕೆ ಮಾಡಲಾಗಿದೆ. ನಾಯಕ ನಟಿಯ ಹುಡುಕಾಟ ನಡೆಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಆಯ್ಕೆ ಅಂತಿಮಗೊಳಿಸಲಾಗುವುದು’ ಎಂದರು.

ಛಾಯಾಗ್ರಾಹಕ ಕೃಷ್ಣಕುಮಾರ್‌ಗೂ ಸಂದೇಶ್‌ ಪ್ರೊಡಕ್ಷನ್ಸ್‌ ಜೊತೆಗೆ ಹಳೆಯ ನಂಟು. “ದರ್ಶನ್‌ ಜತೆ ಇದು ನನ್ನ 11ನೇ ಸಿನಿಮಾ. ಸಂದೇಶ್‌ ನಾಗರಾಜ್‌ ಅವರ ಬ್ಯಾನರ್‌ನಲ್ಲಿ ಏಳೆಂಟು ಸಿನಿಮಾ ಮಾಡಿದ್ದೇನೆ. ಇದೊಂದು ರೀತಿ ಹೋಂ ಬ್ಯಾನರ್‌ ಇದ್ದಂತೆ.  ತಮಿಳಿನ ಹಿಟ್‌ ಸಿನಿಮಾ ತಂದಿದ್ದೇವೆ. ನಿರ್ಮಾಪಕ ಸಂದೇಶ್‌ ನಾಗರಾಜ್‌ ಅವರ ಸಹಕಾರದೊಂದಿಗೆ ಅದಕ್ಕಿಂತ ಅದ್ದೂರಿ ಸಿನಿಮಾ ಮಾಡುತ್ತೇವೆ’ ಎಂದರು.

– ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.