ನಿರಾಶ್ರಿತರ ಸೇವೆಗೆ 242 ವೈದ್ಯರ ನೋಂದಣಿ!


Team Udayavani, Aug 24, 2018, 6:00 AM IST

ban24081807medn.jpg

ಮಡಿಕೇರಿ: ಕೊಡಗಿನ ಜನರಿಗೆ ಉಚಿತ ಸೇವೆ ನೀಡಲು ರಾಜ್ಯದ ವೈದ್ಯರು ಹಾಗೂ ದಾದಿಯರು ಸ್ವಇಚ್ಛೆಯಿಂದ ಮುಂದೆ ಬಂದಿದ್ದು, ಗೂಗಲ್‌ ಡಾಕ್ಸ್‌ ತಂತ್ರಾಂಶದಲ್ಲಿ ಈಗಾಗಲೇ 242 ವೈದ್ಯರು ಮತ್ತು 178 ದಾದಿಯರು ನೋಂದಣಿ ಮಾಡಿಕೊಂಡಿದ್ದಾರೆ.

ಈ ಎಲ್ಲ ವೈದ್ಯರನ್ನು ಹಾಗೂ ದಾದಿಯರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಸ್ಪತ್ರೆ ರೂಪು-ರೇಷೆ ಸಿದ್ಧಪಡಿಸಿಕೊಂಡಿದೆ.

ವೈದ್ಯಕೀಯ ತಂಡವನ್ನು ಆ.30ರ ತನಕ ಆರೋಗ್ಯ ಸೇವೆ ಒದಗಿಸಲು ಬೇಕಾದ ಸಿದ್ಧತೆಯಾಗಿದೆ. ಸೆ.15ರ ತನಕವೂ ವೈದ್ಯರ ಸೇವೆ ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಡಾ.ರಾಜೇಶ್‌ ಹೇಳಿದರು.

ವೈದ್ಯರು ಹಾಗೂ ದಾದಿಯರು ವೈಯಕ್ತಿಕ ನೆಲೆಯಲ್ಲಿ ಬಂದು ಸೇವೆ ಮಾಡಲು ಅನುಕೂಲವಾಗುವಂತೆ ಗೂಗಲ್‌ ಡಾಕ್ಸ್‌ನಲ್ಲಿ ನೋಂದಣಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ವೈದ್ಯರ ಮಾಹಿತಿಯ ಜತೆಗೆ ಅವರು ತರಲಿರುವ ವೈದ್ಯಕೀಯ ಪರಿಕರ ಹಾಗೂ ವಸ್ತುಗಳ ವಿವರವೂ ಇದರಲ್ಲಿ ದೊರೆಯಲಿದೆ. ಅದರ ಆಧಾರದಲ್ಲಿ ಹಂತ ಹಂತವಾಗಿ ವೈದ್ಯರ ಸೇವೆ ಬಳಸಿಕೊಳ್ಳಲು ಕಾರ್ಯಯೋಜನೆ ರೂಪಿಸಿದ್ದೇವೆ. ಈಗಾಗಲೇ ಬಂದಿರುವ ವೈದ್ಯರಿಗೂ ಸೂಕ್ತ ಜವಾಬ್ದಾರಿ ನೀಡಿದ್ದೇವೆ ಎಂದು ತಿಳಿಸಿದರು.
ಒಟ್ಟಾರೆಯಾಗಿ 25 ವೈದ್ಯರ ತಂಡ ಸೇವೆ ಸಲ್ಲಿಸುತ್ತಿದೆ. ಎಲ್ಲ ನಿರಾಶ್ರಿತರ ಕೇಂದ್ರದಲ್ಲೂ ಇಬ್ಬರು ವೈದ್ಯರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶಿಬಿರದಲ್ಲಿ ಇರುವ 30 ವರ್ಷ ಮೇಲ್ಪಟ್ಟ ಎಲ್ಲರ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚು ಗಂಭೀರ ಪ್ರಕಣಗಳು ಬಂದಿಲ್ಲ. ಎಲುಬು ಹಾಗೂ ಮೂಳೆ ನೋವಿನಿಂದ ಬಳಲುತ್ತಿರುವ ಮೂರ್‍ನಾಲ್ಕು ಜನರಿಗೆ ಚಿಕಿತ್ಸೆ ನೀಡಿದ್ದೇವೆ.

ನಿರಾಶ್ರಿತರಲ್ಲಿ ಒಳ ರೋಗಿ ವಿಭಾಗದಲ್ಲಿ  30 ಮಂದಿಗೆ ಹಾಗೂ ಹೊರರೋಗಿ ವಿಭಾಗದಲ್ಲಿ 60 ಮಂದಿಗೆ ಚಿಕಿತ್ಸೆ ನೀಡಿದ್ದೇವೆ. 10 ಮಂದಿ ಇನ್ನೂ ಒಳರೋಗ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜಗದೀಶ್‌ ಹೇಳಿದರು.

ಲಘುಉಷ್ಣತೆ(ಹೈಪೋಥರ್ಮಿಯಾ) ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ವಿಪರಿತ ಮಳೆಯಿಂದಾಗಿ ಮನುಷ್ಯನ ದೇಹದಲ್ಲಿ ಉಷ್ಣಾಂಶ ಕಡಿಮೆಯಾದಾಗದ ಈ ಸಮಸ್ಯೆ ಕಂಡು ಬರುತ್ತದೆ. ಅದಕ್ಕಾಗಿ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯರಿಗೆ ಹಾಗೂ ಪುರಷರಿಗೆ ಪ್ರತ್ಯೇಕವಾದ ಎರಡು ವಾರ್ಮ್(ಉಷ್ಣಾಂಶ ಹೆಚ್ಚಿಸಲು ಸಹಕಾರಿ) ಕೊಠಡಿ ವ್ಯವಸ್ಥೆ ಮಾಡಿದ್ದೇವೆ. ತಲಾ 8 ಹಾಸಿಗೆಯ ವ್ಯವಸ್ಥೆ ಮಾಡಲಾಗಿದೆ. ಅಗತ್ಯವಿರುವ ರೋಗಿಗಳಿಗೆ ವಾರ್ಮ್ ಕೊಠಡಿಯಲ್ಲಿ ಚಿಕಿತ್ಸೆ ನೀಡಿ ನಂತರ ವಾರ್ಡ್‌ಗೆ ವರ್ಗಾಯಿಸುತ್ತೇವೆ. ಆಸ್ಪತ್ರೆಯಲ್ಲಿ 50 ವೈದ್ಯರು ಮತ್ತು 200 ದಾದಿಯರು ಮೂರು ಪಾಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನೂ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ರೋಗಿಗಳನ್ನು ಮೈಸೂರು ಅಥವಾ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಡುವ ವ್ಯವಸ್ಥೆಯೂ ಆಗುತ್ತಿದೆ ಎಂದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.