ಠೇವಣಿ ಹಣಕ್ಕಾಗಿ ವೃದ್ಧೆ ಕೊಂದ ಆರೋಪಿ ಬಂಧನ


Team Udayavani, Aug 24, 2018, 10:23 AM IST

blore-4.jpg

ಬೆಂಗಳೂರು: ಇತ್ತೀಚೆಗೆ ಮೈಸೂರು ರಸ್ತೆಯ ದುಬಾಸಿಪಾಳ್ಯ ಬಳಿಯ ತೋಟದ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನು ಹತ್ಯೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಸುಂಕದಕಟ್ಟೆ ನಿವಾಸಿ, ಆಟೋ ಚಾಲಕ ವೆಂಕಟರಾಮು ಬಂಧಿತ. ಆರೋಪಿ ಆ.10ರಂದು ಒಂಟಿಯಾಗಿ ವಾಸವಾಗಿದ್ದ ಗೌರಮ್ಮರನ್ನು ಕತ್ತು ಕೊಯ್ದು ಹತ್ಯೆಗೈದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವೆಂಕಟರಾಮು ಆಟೋ ಚಾಲಕನಾಗಿದ್ದು, 13 ವರ್ಷಗಳ ಹಿಂದೆ ಗೌರಮ್ಮರನ್ನು ಪರಿಚಯಿಸಿಕೊಂಡಿದ್ದ. ಅಂದಿನಿಂದ ನೀನು ನನ್ನ ತಾಯಿ ಇದ್ದಂತೆ ಎಂದು ಹೇಳಿ, ಕೆಲವೊಮ್ಮೆ ವೃದ್ಧೆಯ ಮನೆಯಲ್ಲೇ ಊಟ ಮಾಡಿ ತಂಗುತ್ತಿದ್ದ. ಈ ಮಧ್ಯೆ ಗೌರಮ್ಮ ಹಾರೋಹಳ್ಳಿಯ ಬ್ಯಾಂಕ್‌ವೊಂದರಲ್ಲಿ
3.94 ಲಕ್ಷ ರೂ. ಹಣ ಠೇವಣಿ ಇಟ್ಟಿದ್ದರು. ಈ ಬಗ್ಗೆ ತಿಳಿದಿದ್ದ ಆರೋಪಿ, ಕೆಲ ತಿಂಗಳಿಂದ ಮನೆಯಲ್ಲಿ ಕಷ್ಟವಿದೆ ಹಣ ಕೊಡುವಂತೆ ದುಂಬಾಲು ಬಿದ್ದಿದ್ದ. ಆದರೆ, ಗೌರಮ್ಮ ನಿರಾಕರಿಸಿದ್ದರು. 

ಹಣ ಸಿಗುವುದಿಲ್ಲ ಎಂದು ಕೊಲೆ: ಆಷಾಡ ಮುಗಿದು ಶ್ರಾವಣದ ಮೊದಲ ವಾರದಲ್ಲಿ ತಮ್ಮ ಪತಿಯ ಊರಾದ ಕನಕಪುರದ ಮನೆಗೆ ಹೋಗಲು ಗೌರಮ್ಮ ತೀರ್ಮಾನಿಸಿದ್ದರು. ಈ ಬಗ್ಗೆ ತಿಳಿದಿದ್ದ ವೆಂಕಟರಾಮು, ಆ.10ರಂದು ಮಧ್ಯಾಹ್ನ ವೃದ್ಧೆಯ ಮನೆಗೆ ಬಂದು ಹಣ ಕೊಡುವಂತೆ ಒತ್ತಾಯಿಸಿದ್ದಾನೆ. ಆಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ, ಈಕೆ ಊರಿಗೆ ಹೋದರೆ ಹಣ ಸಿಗುವುದಿಲ್ಲ. ಇಷ್ಟು ವರ್ಷ ಸಹಾಯಕನಾಗಿ ಸೇವೆ ಮಾಡಿದ್ದು ವರ್ಥವಾಯಿತು ಎಂದು ಭಾವಿಸಿ ಅಲ್ಲೇ ಇದ್ದ ಕುಡುಗೋಲಿನಿಂದ ಆಕೆಯ ಕುತ್ತಿಗೆ ಕೊಯ್ದು ಮನೆ ಬೀಗ ಹಾಕಿಕೊಂಡು ಹೋಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಮಾಯಕನಂತೆ ನಟನೆ: ಆ.10ರಂದು ರಾತ್ರಿ 8 ಗಂಟೆ ಸುಮಾರಿಗೆ ಹಸು ನಿರಂತರವಾಗಿ ಕೂಗಿಕೊಳ್ಳುತ್ತಿತ್ತು. ಆದರೂ ಗೌರಮ್ಮ ಮನೆಯಿಂದ ಹೊರಬಂದಿಲ್ಲ. ಇದರಿಂದ ಅನುಮಾನಗೊಂಡ ಭದ್ರತಾ ಸಿಬ್ಬಂದಿ ಕೂಡಲೇ ಆರೋಪಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಏನು ತಿಳಿಯದವನಂತೆ
ಸ್ಥಳಕ್ಕೆ ಬಂದ ಆರೋಪಿ, ಬನಶಂಕರಿಯಲ್ಲಿರುವ ಗೌರಮ್ಮರ ಮೊಮ್ಮಗನಿಗೆ ಕರೆ ಮಾಡಿ, ನಿಮ್ಮ ಅಜ್ಜಿ ಕಾಣಿಸುತ್ತಿಲ್ಲ, ಬಾಗಿಲು ಬೀಗ ಹಾಕಿದೆ. ಕೂಡಲೇ ಬರುವಂತೆ ಹೇಳಿದ್ದ. ಬಳಿಕ ಇಬ್ಬರು ಬಾಗಿಲು ಹೊಡೆದು ನೋಡಿದಾಗ ಗೌರಮ್ಮ ರಕ್ತದ ಮಡುವಿನಲ್ಲಿ ಬಿದ್ದಿದ್ದರು.

ಈ ವೇಳೆ ಮೃತ ದೇಹವನ್ನು ನೋಡಿದ ಆರೋಪಿ ಕಣ್ಣಿರು ಸುರಿಸಿದ್ದು, ಸ್ಥಳಕ್ಕೆ ಬಂದ ಪೊಲೀಸರಿಗೆ ಆರೋಪಿ ಯಾರೇ ಆದರೂ ಬಂಧಿಸುವಂತೆ ಮನವಿ ಮಾಡಿದ್ದ. ಹೀಗಾಗಿ ಈತನ ಮೇಲೆ ಅನುಮಾನ ಬಂದಿರಲಿಲ್ಲ. ಅನಂತರ ಆರೋಪಿಯ ಬಗ್ಗೆ ಶಂಕೆ ವ್ಯಕ್ತವಾಗಿ ವಶಕ್ಕೆ ಪಡೆದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಆರೋಪಿ ಸತ್ಯಾಂಶ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕ್ಕಪೇಟೆಯ ದೇವರಾಜ್‌ ಎಂಬುವರಿಗೆ ಸೇರಿದ ತೋಟದಲ್ಲಿ ಸುಮಾರು 40 ವರ್ಷಗಳಿಂದ ಗೌರಮ್ಮ ಮತ್ತು ಇವರ ಪತಿ ವಾಸವಾಗಿದ್ದರು. 15 ವರ್ಷಗಳ ಹಿಂದೆ ಗೌರಮ್ಮ ಪತಿ ಮೃತಪಟ್ಟಿದ್ದಾರೆ. ಹೀಗಾಗಿ ಗೌರಮ್ಮ ಒಬ್ಬರೇ ಇದ್ದು, ಜೀವನ ನಿರ್ವಹಣೆಗಾಗಿ ಹಸು ಸಾಕಾಣಿಕೆ ಮಾಡಿಕೊಂಡಿದ್ದರು. ತೋಟದ ಮಾಲೀಕ ದೇವರಾಜ್‌ ಕೂಡ ಮಾಸಿಕ ಮೂರು ಸಾವಿರ ರೂ. ಕೊಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.