ಬೆಳುವಾಯಿಂದ ಅಮೆರಿಕಕ್ಕೆ ಯಕ್ಷಗಾನ‌ ರಿಂಗಣ 


Team Udayavani, Aug 24, 2018, 5:47 PM IST

5.jpg

 ಬೆಳುವಾಯಿ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕ ಎಮ್ ದೇವಾನಂದ್‌ ಭಟ್‌ ಯಕ್ಷಗಾನ ಕಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಬೇಕು ಎಂಬ ಆಶಯದಿಂದ ಪೂರ್ಣ ಪ್ರಮಾಣದ ಯಕ್ಷಗಾನ ತಂಡವನ್ನು ಕಟ್ಟಿಕೊಂಡು ಅಮೆರಿಕದ ಹಲವೆಡೆ ಪ್ರದರ್ಶನ ನೀಡಿ ವಿದೇಶದ ಮಣ್ಣಿನಲ್ಲಿ ಕರುನಾಡ ಕಲೆಯ ಕಂಪು ಹರಡಿದ್ದಾರೆ. 

 ಮೊದಲು ನ್ಯೂಯಾರ್ಕ್‌ ಎಡಿಸನ್‌ನಲ್ಲಿರುವ ಪುತ್ತಿಗೆ ಮಠಕ್ಕೆ ಆಗಮಿಸಿದ ತಂಡ ಪ್ರದರ್ಶಿಸಿದ “ಮಹಿಷ ವಧೆ’ ಪ್ರಸಂಗ ಪ್ರಶಂಸೆಗೆ ಪಾತ್ರವಾಯಿತು. ಅಲ್ಲಿಂದ ಮುಂದೆ ಪೆನ್ಸಿಲ್ವೆನಿಯ ಶೃಂಗೇರಿ ಮಠದಲ್ಲಿ ಭಗವತಾರಾಧನೆ ಪಟ್ಲ ಭಾಗವತ ಬಳಗದಿಂದ ಸೇವಾರೂಪವಾಗಿ ಗೈದು ಮುಂದೆ ಬೋಸ್ಟನ್‌ನಲ್ಲಿ “ಮಹಿಷ ವಧೆ’ ಪ್ರದರ್ಶಿಸಿತು. ರಾಲೆಯಲ್ಲಿ “ಕೃಷ್ಣಲೀಲೆ – ಕಂಸವಧೆ’ಯಾದ ಬಳಿಕ ತಂಡವನ್ನು ಅಮೆರಿಕಕ್ಕೆ ಬರಿಸುವಲ್ಲಿ ಪ್ರಯತ್ನ ಪಟ್ಟ ಬಾಲಕೃಷ್ಣ ಭಟ್‌ ಅವರ ಮೇರಿಲ್ಯಾಂಡ್‌ ಭಕ್ತಾಂಜನೇಯ ದೇವಸ್ಥಾನದಲ್ಲಿ ಸ್ಥಳೀಯ ಕಲಾವಿದರನ್ನೊಳಗೊಂಡ “ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಶಸ್ವಿಯಾಗಿ ಪ್ರದರ್ಶಿಸಲ್ಪಟ್ಟು ಜನಮನತಟ್ಟಿತು. 

ಅಲ್ಲಿಂದ ಡಲ್ಲಾಸ್‌ಗೆ ಬಂದು “ಸುಧನ್ವಾರ್ಜುನ’ ಯಕ್ಷ ರಸದೌತಣವನ್ನು ಉಣಬಡಿಸಿತು. ಮುಂದೆ ಹೂಸ್ಟನ್‌ ಕಡೆ ಸಾಗಿ ಕೃಷ್ಣ ವೃಂದಾವನದ ಬಯಲು ಪ್ರದೇಶದಲ್ಲಿ ಪಣಂಬೂರಿನ ವಾಸು ಐತಾಳ್‌ ಬಳಗದ ಸಾರಥ್ಯದಲ್ಲಿ ಆಮೆರಿಕದಲ್ಲಿ ಮೊದಲ ಬಾರಿಗೆ ಎಂಬಂತೆ ಊರಿನ ರಂಗಸ್ಥಳವನ್ನೇ ತಯಾರಿಸಿ “ಮಹಿಷ ವಧೆ’ ಪ್ರದರ್ಶಿಸಿದರು. ಇದೊಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ದಾಖಲಾರ್ಹ ವಿಷಯವಾಗಿತ್ತು. ಕನ್ನಡಿಗರು ಮಾತ್ರವಲ್ಲದೆ ಅನ್ಯರಾಜ್ಯಗಳ ಜನರು ಮತ್ತು ವಿದೇಶಿಯರು ಯಕ್ಷಗಾನವನ್ನು ಆಸ್ವಾದಿಸಿದ್ದು ವಿಶೇಷವಾಗಿತ್ತು. 

 ಭಾಗವತರಾಗಿ ಪಟ್ಲ ಸತೀಶ ಶೆಟ್ಟಿ, ಮದ್ದಳೆಯಲ್ಲಿ ಪದ್ಮನಾಭ ಉಪಾಧ್ಯ, ಚೆಂಡೆಯಲ್ಲಿ ಎಮ್‌. ದೇವಾನಂದ ಭಟ್‌ ಮೆಚ್ಚುಗೆಗೆ ಪಾತ್ರರಾದರು. ಮುಮ್ಮೇಳದಲ್ಲಿ ಮಲ್ಪೆ ಲಕ್ಷ್ಮೀನಾರಾಯಣ ಸಾಮಗ, ಚಂದ್ರಶೇಖರ ಧರ್ಮಸ್ಥಳ, ಮಹೇಶ್‌ ಮಣಿಯಾಣಿ, ಪ್ರಶಾಂತ ಶೆಟ್ಟಿ ನೆಲ್ಯಾಡಿ, ಮೋಹನ ಬೆಳ್ಳಿಪ್ಪಾಡಿ ಹೀಗೆ ಮತ್ತಿತರರು ಹೊರನಾಡ ಕನ್ನಡಿಗರನ್ನು ರಂಜಿಸಿದರು.ಆಮೆರಿಕದಂತಹ ದೇಶದಲ್ಲಿ ಯಕ್ಷಗಾನದ ಕಂಪು ಹರಡಿದ ತಂಡ ಅಭಿನಂದನೀಯ. 

ಸುಬ್ರಮಣ್ಯ ಶಾನುಭಾಗ್‌ 

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.