ಕೇರಳಕ್ಕೆ ಯಾವುದೇ ನಿರ್ದಿಷ್ಟ ನೆರವು ಮೊತ್ತ ಪ್ರಕಟಿಸಿಲ್ಲ: ಯುಎಇ
Team Udayavani, Aug 24, 2018, 7:14 PM IST
ಅಬುಧಾಬಿ : ಜಡಿಮಳೆ, ಪ್ರವಾಹ, ಭೂಕುಸಿತವೇ ಮೊದಲಾದ ಭೀಕರ ನೈಸರ್ಗಿಕ ಪ್ರಕೋಪಕ್ಕೆ ನಲುಗಿಹೋಗಿರುವ ಕೇರಳಕ್ಕೆ ”ಯಾವುದೇ ನಿರ್ದಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಅಧಿಕೃತ ಘೋಷಣೆಯನ್ನು ತಾನು ಮಾಡೇ ಇಲ್ಲ” ಎಂದು ಯುಎಇ ಸರಕಾರ ಸ್ಪಷ್ಟಪಡಿಸಿದೆ.
ಯುಎಇ ಆರ್ಥಿಕ ನೆರವು ಸ್ವೀಕರಿಸುವ ವಿಷಯದಲ್ಲಿ ಕೇಂದ್ರ ಮತ್ತು ಕೇರಳ ಸರಕಾರ ನಡುವಿನ ಹಗ್ಗಜಗ್ಗಾಟಕ್ಕೆ ತಾನು ಸಿಲುಕಿಕೊಂಡಿರುವುದನ್ನು ಗಮನಿಸಿರುವ ಯುಎಇ ಸರಕಾರ ಈ ಅಧಿಕೃತ ಹೇಳಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
”ಕೇರಳಕ್ಕೆ ಯಾವುದೇ ನಿರ್ದಿಷ್ಟ ಮೊತ್ತದ ಹಣಕಾಸು ನೆರವು ನೀಡುವ ಬಗ್ಗೆ ಯುಎಇ ಈ ತನಕ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ” ಎಂದು ಯುಎಇ ರಾಯಭಾರಿ ಅಹ್ಮದ್ ಅಲ್ಬನ್ನಾ ಹೇಳಿರುವುದನ್ನು ಉಲ್ಲೇಖೀಸಿ “ದ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ.
ನಿನ್ನೆ ಗುರುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು “ಯುಎಇ ಸರಕಾರ ಕೇರಳಕ್ಕೆ 700 ಕೋಟಿ ರೂ. ಹಣಕಾಸು ನೆರವು ನೀಡುವುದಾಗಿ ಹೇಳಿದೆ’ ಎಂದು ತಿಳಿಸಿದ್ದರು.
ಮಾತ್ರವಲ್ಲದೆ ಅಬುಧಾಭಿಯ ಕ್ರೌನ್ ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫೋನ್ ಕರೆ ಮಾಡಿ ಯುಎಇ ನೆರವು ಕೊಡುಗೆಯನ್ನು ತಿಳಿಸಿದ್ದಾರೆ ಎಂದೂ ಪಿಣರಾಯಿ ಹೇಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
Ban; ಎಂಡಿಎಚ್, ಎವರೆಸ್ಟ್ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?