6 ವರ್ಷಗಳಲ್ಲಿ 24ಕ್ಕೂ ಹೆಚ್ಚು ಉಗ್ರರು ಭಾರತಕ್ಕೆ ಗಡಿಪಾರು
Team Udayavani, Aug 25, 2018, 6:00 AM IST
ಹೊಸದಿಲ್ಲಿ: ಸಂಯುಕ್ತ ಅರಬ್ ಗಣರಾಜ್ಯ (ಯುಎಇ), ಸೌದಿ ಅರೇಬಿಯಾ ಜತೆಗೆ ಭಾರತ ಸರಕಾರ ಉತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದೆ. ಹೀಗಾಗಿಯೇ 2012ರಿಂದ ಈಚೆಗೆ ಲಷ್ಕರ್-ಎ- ತೊಯ್ಬಾ, ಇಂಡಿಯನ್ ಮುಜಾಹಿದೀನ್ ಸೇರಿದಂತೆ ಹಲವು ಉಗ್ರ ಸಂಘಟನೆಗೆ ಸೇರಿದ 24 ಮಂದಿಯನ್ನು ದೇಶಕ್ಕೆ ಗಡಿಪಾರು ಮಾಡಿಸಿಕೊಳ್ಳಲಾಗಿದೆ. ಇದು ರಾಜತಾಂತ್ರಿಕವಾಗಿ ಕೇಂದ್ರ ಸರಕಾರಕ್ಕೆ ಸಿಕ್ಕಿದ ಮಹತ್ವದ ಜಯವಾಗಿದೆ.
ಈ 24 ಮಂದಿಯ ಪೈಕಿ 18 ಮಂದಿ ಸೌದಿ ಅರೇಬಿಯಾ,ಯುಎಇಯಿಂದಲೇ ಗಡಿಪಾರಾಗಿದ್ದಾರೆ. ಈ ಪೈಕಿ ಲಷ್ಕರ್, ಇಂಡಿಯನ್ ಮುಜಾಹಿದೀನ್ ಉಗ್ರರೇ ಹೆಚ್ಚು. ತೀರಾ ಇತ್ತೀಚಿನ ಪ್ರಕರಣವೆಂದರೆ ಲಷ್ಕರ್-ಎ-ತೊಯ್ಬಾ ಸಂಘಟನೆ ಜತೆಗೆ ಸಂಪರ್ಕ ಇರಿಸಿಕೊಂಡಿದ್ದಾನೆ ಎಂದು ಹೇಳಲಾಗಿರುವ ಹಬೀಬುರ್ ರೆಹಮಾನ್ ಎಂಬಾತನನ್ನು ನವದೆಹಲಿ ಏರ್ಪೋರ್ಟ್ನಲ್ಲಿ ಬಂಧಿಸಲಾಗಿತ್ತು. 2012ರ ಜೂ.5ರಂದು ಅಬು ಜುಂದಾಲ್ ಎಂಬ ಉಗ್ರನ ಗಡಿಪಾರಿನಿಂದ ಈ ಪ್ರಕ್ರಿಯೆ ಶುರುವಾಗಿತ್ತು. ಯುಪಿಎ ಮತ್ತು ಹಾಲಿ ಎನ್ಡಿಎ ಸರಕಾರದ ಅವಧಿಯಲ್ಲಿ ಈ ಬಗ್ಗೆ ಆದ್ಯತೆಯಿಂದ ಶ್ರಮಿಸಲಾಗಿತ್ತು.
ಕಳೆದ 6 ವರ್ಷಗಳಲ್ಲಿ ಸೌದಿ ಅರೇಬಿಯಾದಿಂದ 8, ಯುಎಇನಿಂದ 10, ಟರ್ಕಿಯಿಂದ 3, ಥಾಯ್ಲೆಂಡ್ನಿಂದ 1, ಸುಡಾನ್ನಿಂದ 1, ಬಾಂಗ್ಲಾದೇಶದಿಂದ ಒಬ್ಬನನ್ನು ಗಡಿಪಾರು ಮಾಡಲಾಗಿದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ
Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Microsoft ಚಿಂತನೆ : ಚೀನದಿಂದ 800 ನೌಕರರ ವರ್ಗ
27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್
Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು
Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ
Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ