ಶೌಚಾಲಯ ಕಟ್ಟಿಕೊಂಡು ಆರೋಗ್ಯವಾಗಿರಿ: ಸುವರ್ಣಾ
Team Udayavani, Aug 25, 2018, 10:00 AM IST
ಕಲಬುರಗಿ: ಪ್ರತಿಯೊಬ್ಬ ನಾಗರಿಕರು ತಮ್ಮ ಮನೆಯಲ್ಲಿ ಶೌಚಾಲಯ ಕಟ್ಟಿಕೊಳ್ಳುವುದರಿಂದ ಆರೋಗ್ಯವಂತರಾಗಿರಲು ಸಾಧ್ಯವೆಂದು ಜಿ.ಪಂ.ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ ಹೇಳಿದರು. ಭಾರತ ಸರಕಾರದ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ , ಜಿಪಂ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ತಾಪಂ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸರಕಾರಿ ಪದವಿ ಪೂರ್ವ ಬಾಲಕಿಯರ ಹಾಗೂ ಬಾಲಕರ ಕಾಲೇಜು ಕಮಲಾಪುರ ಏರ್ಪಡಿಸಿದ್ದ ಸ್ವತ್ಛ ಕ್ರಿಯಾ ಯೋಜನೆ (ಸ್ವಚ್ಚ ಭಾರತ ಅಭಿಯಾನ ) ಕುರಿತು ಹಮ್ಮಿಕೊಳ್ಳಲಾಗಿದ್ದ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅತಿಥಿಯಾಗಿದ್ದ ಕಮಲಾಪುರ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ಸತ್ತಾರ್ ಅಬ್ದುಲ್ ರೆಹಮಾನ್ ಮಾತನಾಡಿ, ಪ್ರತಿಯೊಬ್ಬರು
ತಮ್ಮ ಮನೆ ಅಂಗಳ ಸ್ವತ್ಛವಾಗಿಟ್ಟುಕೊಂಡಲ್ಲಿ ಇಡೀ ಗ್ರಾಮವೇ ಸ್ವತ್ಛವಾಗುತ್ತದೆ. ಇದೆ ರೀತಿ ಪಟ್ಟಣ, ನಗರಗಳು ಸ್ವತ್ಛವಾಗುತ್ತವೆ. ಗಾಂಧೀಜಿ ಕಂಡ ಕನಸು ನನಸಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಸ್ವತ್ಛಭಾರತ ಅಭಿಯಾನದಲ್ಲಿ ಕೈಜೋಡಿಸಬೇಕೆಂದು ಮನವಿ ಮಾಡಿದರು. ಕಮಲಾಪುರ ಗ್ರಾಮವನ್ನು ಇನ್ಮುಂದೆ ಸ್ವತ್ಛ ಹಾಗೂ ಹಸಿರು ಗ್ರಾಮವಾಗಿ ಮಾಡಲು ಅನೇಕ ಮರಗಳನ್ನು ನೆಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.
ಕಲಬುರಗಿ ಗ್ರಾಮಿಣ ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳಾದ ಪ್ರವಿಣಕುಮಾರ ಮಾತನಾಡಿ, ಗ್ರಾಮೀಣ
ಪ್ರದೇಶದಲ್ಲಿ ಸಾರ್ವಜನಿಕರಿಗೆ ಸ್ವತ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ಇರುವದಿಲ್ಲ. ಇದರಿಂದ ಅನೇಕರು ರೋಗಗಳಿಗೆ ತುತ್ತಾಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರ ಶೌಚಾಲಯ ನಿರ್ಮಿಸಿಕೊಳ್ಳಲು ಕಡುಬಡವರಿಗೆ 12,000ರೂ., ಹಿಂದುಳಿದ ವರ್ಗದವರಿಗೆ 15,000 ರೂ. ವಿತರಿಸುತ್ತದೆ. ಇದನ್ನು ಬಳಸಿಕೊಂಡು ಶೌಚಾಲಯಗಳನ್ನು ನಿರ್ಮಿಸಿ ಬಳಸಿ ಎಂದು ತಿಳಿಸಿದರು.
ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶಾಂತಾ ಬಿ. ಅಷ್ಟಗಿ ಅಧ್ಯಕ್ಷತೆ ವಹಿಸಿದ್ದರು. ಕಮಲಾಪುರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ಎಸ್ ಅಧಿಕಾರಿಗಳಾದ ರಮೇಶ ಟಿ. ಪೋತೆ, ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಪ್ರಾಚಾರ್ಯ ಬೂಸಾಳೆ ಗೋಪಾಲ, ಸರಕಾರಿ ಪದವಿ ಪೂರ್ವ ಬಾಲಕರ ಕಾಲೇಜಿನ ಪ್ರಾಚಾರ್ಯ ಮಲೇಶಿ ನಾಟೇಕಾರ ಸ್ವತ್ಛ ಭಾರತದ ಬಗ್ಗೆ ಮಾಹಿತಿ ನೀಡಿದರು. ಕ್ಷೇತ್ರ ಜನ ಸಂಪರ್ಕ ಕಾರ್ಯಲಯದ ನಾಗಪ್ಪ ಅಂಬಾಗೋಳ ಸ್ವಾಗತಿಸಿದರು, ರವಿಂದ್ರ ಕುಂಬಾರ ವಂದಿಸಿದರು.
ರಂಗೋಲಿ ಸ್ಪರ್ಧೆ: ವಿದ್ಯಾರ್ಥಿಗಳಿಗಾಗಿ ಸ್ವತ್ಛ ಭಾರತ ಅಭಿಯಾನ ಕುರಿತು ರಂಗೊಲಿ ನಿಂಬಂಧ ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ