ವಾರದ ಸಂತೆ, ಸಂಚಾರ ಅಸ್ತವ್ಯಸ್ತ ಕಿರಿಕಿರಿಗೆ ಮುಕ್ತಿ ನೀಡಿದ ಪುರಸಭೆ


Team Udayavani, Aug 25, 2018, 12:11 PM IST

kaup.jpg

ಕಾಪು: ಪದೇ ಪದೇ ಟ್ರಾಫಿಕ್‌ ಸಮಸ್ಯೆಗೆ ಕಾರಣವಾಗುತ್ತಿದ್ದ ಮತ್ತು ಜನರಿಗೆ ಅಪಘಾತದ ಭೀತಿಯನ್ನು ತಂದೊಡ್ಡುತ್ತಿದ್ದ ಕಾಪುವಿನ ವಾರದ ಸಂತೆ ಮತ್ತು ಟ್ರಾಫಿಕ್‌ ಜಾಮ್‌ನ ಸಮಸ್ಯೆ ಪರಿಹಾರಕ್ಕೆ ಪುರಸಭೆ ದಿಟ್ಟ  ನಿರ್ಧಾರವನ್ನು ತೆಗೆದುಕೊಂಡಿದೆ.
ಕಾಪುವಿನರಾಷ್ಟ್ರೀಯ ಹೆದ್ದಾರಿ 66ರ ಬದಿಯ ಸರ್ವೀಸ್‌ ರಸ್ತೆಗೆ ತಾಗಿಕೊಂಡು ನಡೆಯುತ್ತಿದ್ದ ವಾರದ ಸಂತೆಯನ್ನು ಮಾರ್ಕೆಟ್‌ಗೆ ಸನಿಹದ ಖಾಸಗಿ ಪ್ರದೇಶಕ್ಕೆ ಸ್ಥಳಾಂತರಿಸುವ ಮೂಲಕ ಸರ್ವೀಸ್‌ ರಸ್ತೆಯ ಮೇಲಿನ ಸಂಚಾರದ ಒತ್ತಡವನ್ನು ಕಡಿಮೆಗೊಳಿಸುವ ಪ್ರಯತ್ನಕ್ಕೆ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ರೂಪಿಸಿದ್ದು ಅದರಲ್ಲಿ ಯಶಸ್ಸನ್ನೂ ಸಾಧಿಸಿದ್ದಾರೆ.

ಸರ್ವೀಸ್‌ ರಸ್ತೆಗೆ ತಾಗಿಕೊಂಡು ನಡೆಯುತ್ತಿದ್ದ ವಾರದ ಸಂತೆಯಿಂದ ಸುಗಮ ಸಂಚಾರಕ್ಕೆ ತೊಡಕುಂಟಾಗುತ್ತಿತ್ತು. ಸಂತೆಗೆ ಬರುವ ಗ್ರಾಹಕರಿಗೆ ತಮ್ಮ ವಾಹನಗಳನ್ನು ನಿಲ್ಲಿಸಲು ಸೂಕ್ತ ಜಾಗದ ಕೊರತೆಯಿಂದಾಗಿ ಸರ್ವೀಸ್‌ ರಸ್ತೆಯಲ್ಲೇ ತಮ್ಮ ವಾಹನಗಳನ್ನು ನಿಲ್ಲಿಸಿ ಬರುವಂತಾಗಿದ್ದು, ಅದರಿಂದಾಗಿ ಪದೇ ಪದೇ ಸಂಚಾರ ಅಸ್ತವ್ಯಸ್ತಗೊಳ್ಳುತ್ತಿತ್ತು.

ಕಾಪು ವಾರದ ಸಂತೆಯ ದುಸ್ಥಿತಿ ಮತ್ತು ಇಲ್ಲಿನ ಟ್ರಾಫಿಕ್‌ ಕಿರಿಕಿರಿಯ ಬಗ್ಗೆ ಉದಯವಾಣಿಯಲ್ಲಿ ಕೂಡಾ 
ಎರಡು ಬಾರಿ ಸಚಿತ್ರ ಲೇಖನದೊಂದಿಗೆ ವರದಿ ಪ್ರಕಟಿಸಲಾಗಿತ್ತು. ಇದೀಗ ಶುಕ್ರವಾರದ ವಾರದ ಸಂತೆಯನ್ನು ಪೊಲೀಸರ ಸಮ್ಮುಖದಲ್ಲಿ ಕೆಲವು ಸಮಯಗಳ ಹಿಂದೆ ನಡೆಸಲಾಗುತ್ತಿದ್ದ ಪ್ರದೇಶಕ್ಕೇ ಸ್ಥಳಾಂತರಿಸಲಾಗಿದ್ದು, ಎಲ್ಲಾ ಸಂತೆ ವ್ಯಾಪಾರಿಗಳಿಗೂ ಅಲ್ಲಿಯೇ ಅಂಗಡಿಗಳಿಗೆ ಜಾಗ ವಿಂಗಡಿಸಿಕೊಡಲಾಗಿದೆ. ಸಂತೆ ಯನ್ನು ಪಕ್ಕದ ಜಾಗಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆಗೆ ಪ್ರಾರಂಭದಲ್ಲಿ ವ್ಯಾಪಾರಿಗಳಿಂದ ಅಸಮಾಧಾನ ವ್ಯಕ್ತವಾದರೂ ಬಳಿಕ ಅಲ್ಲಿನ ವ್ಯವಸ್ಥೆಗೆ ಹೊಂದಿಕೊಳ್ಳುವುದು ಅನಿವಾರ್ಯವೆಂಬಂತಾಗಿದೆ.

ಕೆಸರಿನ ನಡುವಿನ ಸಂತೆಗೆ ಗ್ರಾಹಕರಿಂದ ಆಕ್ರೋಶ
 ವಾರದ ಸಂತೆಯನ್ನು ಮಾರ್ಕೆಟ್‌ ಬಳಿಯ ಪ್ರದೇಶಕ್ಕೆ ಸ್ಥಳಾಂತರಿಸಿರುವುದು ಗ್ರಾಹಕರು ಮತ್ತು ವಾಹನ ಚಾಲಕರ ಹಿತಾಸಕ್ತಿಯಿಂದ ಸರಿ ಎಂಬುದಾಗಿ ಕಂಡರೂ ಸಂತೆ ನಡೆಯುವ ಪ್ರದೇಶದ ಬಗ್ಗೆ ಗಮನ ಹರಿಸಿದರೆ ಸಂತೆಗೆ ತೆರಳುವವರಿಗೆ ವಾಕರಿಕೆ ಬರುವಂತಾಗಿದೆ. ಸಂತೆಯ ಅಂಗಡಿ ಇರುವ ಪ್ರದೇಶದ ಸುತ್ತಲೂ ಕೆಸರು ಮತ್ತು ತ್ಯಾಜ್ಯದ ರಾಶಿಯಿದ್ದು, ವ್ಯಾಪಾರಿಗಳು ಅಲ್ಲೇ ತರಕಾರಿ – ವಸ್ತುಗಳನ್ನು ವಿಂಗಡಿಸಿ ಮಾರಾಟಕ್ಕೆ ಇಟ್ಟಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.

ವ್ಯಾಪಾರಿಗಳಿಂದಲೂ ಆಕ್ರೋಶ
 ಕಾಪುವಿನ ವಾರದ ಸಂತೆಯಲ್ಲಿ ವ್ಯಾಪಾರಿಗಳು ಕೆಸರಿನ ನಡುವೆ ನಿಂತು ವ್ಯಾಪಾರ ನಡೆಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದು, ಈ ಬಗ್ಗೆ ವ್ಯಾಪಾರಿಗಳಿಂದಲೂ ಆಕ್ರೋಶ ವ್ಯಕ್ತವಾಗಿದೆ. ಕೆಸರುಮಯ ವಾತಾವರಣ ಒಂದೆಡೆಯಾದರೆ, ಅಲ್ಲೇ ಪಕ್ಕದಲ್ಲಿ ಕೋಳಿ – ಮಾಂಸದಂಗಡಿಯೂ ಇರುವುದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತದೆ. ಪುರಸಭೆ ಮಣ್ಣು ಹಾಕಿ ವ್ಯವಸ್ಥೆಯನ್ನು ಸರಿಪಡಿಸಿದ ಬಳಿಕ ವಾರದ ಸಂತೆ
ಯನ್ನು ಇಲ್ಲಿಗೆ ಸ್ಥಳಾಂತರ ಮಾಡಬೇಕಿತ್ತು ಎಂಬ ಅಭಿಪ್ರಾಯ ವ್ಯಾಪಾರಸ್ಥರಿಂದ ವ್ಯಕ್ತವಾಗಿದೆ.

ಜನರ ಮನವಿಗೆ ಸ್ಪಂದನೆ
ಕಾಪುವಿನ ವಾರದ ಸಂತೆ ಮತ್ತು ಅದರಿಂದಾಗಿ ಉಂಟಾಗುತ್ತಿದ್ದ ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ, ವಾಹನ ಸಂಚಾರಿಗಳಿಂದ ಪ್ರತೀ ವಾರವೂ ದೂರುಗಳು ಕೇಳಿ ಬರುತ್ತಿದ್ದವು. ಇಲ್ಲಿ ಅಪಘಾತದ ಭೀತಿಯೂ ಎದುರಾಗಿತ್ತು. ಈ ಬಗ್ಗೆ ಪುರಸಭೆ ಸದಸ್ಯರಿಂದಲೂ ಆಕ್ಷೇಪ ವ್ಯಕ್ತವಾಗಿದ್ದು, ಮಾಧ್ಯಮಗಳಲ್ಲೂ ವರದಿ ಪ್ರಕಟವಾಗಿತ್ತು. ಇದೀಗ ಸಮಸ್ಯೆ ಪರಿಹಾರಕ್ಕಾಗಿ ವಾರದ ಸಂತೆಯನ್ನು ಖಾಸಗಿ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮಳೆಯ ಕಾರಣದಿಂದಾಗಿ ಕೆಸರುಮಯ ಸ್ಥಿತಿಯಿದ್ದು, ಅದನ್ನೂ ಕೂಡಾ ಜಲ್ಲಿ ಹುಡಿ ಮತ್ತು ಮಣ್ಣು ಹಾಕಿ ಸಮತಟ್ಟು ಮಾಡಿ ಕೊಡಲಾಗುವುದು.
ರಾಯಪ್ಪ,  ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.