ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು
Team Udayavani, Aug 25, 2018, 12:51 PM IST
ಬೆಂಗಳೂರು: ಆಡುಗೋಡಿ ಮತ್ತು ಹುಳಿಮಾವು ಸಂಚಾರ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಈತನ ಸ್ನೇಹಿತೆ ಗಾಯಗೊಂಡಿರುವ ಘಟನೆ ಬನ್ನೇರುಘಟ್ಟ ರಸ್ತೆ ಕಾಳೇನ ಅಗ್ರಹಾರದ ಬಳಿ ನಡೆದಿದೆ.
ಬಿಳೇಕಹಳ್ಳಿ ನಿವಾಸಿ ಸ್ವಾಮಿ (25) ಮೃತರು. ಈತನ ಸ್ನೇಹಿತೆ ತೇಜು ಎಂಬುವರಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸ್ವಾಮಿ ಮತ್ತು ತೇಜು, ಗುರುವಾರ ಸಂಜೆ ಕೆಲಸ ಮುಗಿಸಿಕೊಂಡು ರಾತ್ರಿ 7.30ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಜಿಗಣಿ ಕಡೆಯಿಂದ ಬಿಳೇಕಹಳ್ಳಿಯಲ್ಲಿರುವ ಮನೆಗೆ ಹೋಗುತ್ತಿದ್ದರು.
ಈ ವೇಳೆ ವೇಗವಾಗಿ ಬಂದ ಖಾಸಗಿ ಬಸ್ ದ್ವಿಚಕ್ರ ವಾಹನದ ಹಿಂಬದಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಸ್ವಾಮಿ ಮೇಲೆ ಬಸ್ನ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಲಭಾಗಕ್ಕೆ ಬಿದ್ದ ತೇಜುಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಹುಳಿಮಾವು ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ಮತ್ತೂಂದು ಪ್ರಕರಣದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಸೇಂಟ್ಜಾನ್ಸ್ ಆಸ್ಪತ್ರೆ ಬಳಿ ಗುರುವಾರ ತಡರಾತ್ರಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಶುಭಂ (35) ಮೃತರು. ಘಟನೆಯಲ್ಲಿ ಪಲ್ಸರ್ ಬೈಕ್ ಚಾಲಕ ಸಾಗರ್ (35) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶುಭಂಗೆ ವಿವಾಹವಾಗಿದ್ದು, ಬಿಟಿಎಂ ಲೇಔಟ್ನಲ್ಲಿರುವ ಕಾಫಿಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ತಡರಾತ್ರಿ ಒಂದು ಗಂಟೆ ಸುಮಾರಿಗೆ ಸಾಗರ್ ಜತೆ ಬೈಕ್ನಲಿ ಹೋಗುತ್ತಿದ್ದರು. ಈ ವೇಳೆ ಚಾಲಕ ಸಾಗರ್ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಪರಿಣಾಮ ಕೆಳಗೆ ಬಿದ್ದ ಶುಭಂ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಘಟನೆ ವೇಳೆ ಹಿಂಬದಿ ಸವಾರ ಸಾಗರ್ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಆಡುಗೋಡಿ ಸಂಚಾರ ಠಾಣೆಯಲ್ಲಿ ದಾಖಲಾಗಿದೆ.
ರಸ್ತೆ ಅಪಘಾತವೆಸಗಿದ ಆರೋಪಿಗೆ ಶಿಕ್ಷೆ: ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರ ಸಾವಿಗೆ ಕಾರಣವಾಗಿದ್ದ ದ್ವಿಚಕ್ರ ವಾಹನ ಸವಾರನಿಗೆ 4ನೇ ಎಸಿಎಂಎಂ ಕೋರ್ಟ್ 6 ತಿಂಗಳ ಶಿಕ್ಷೆ ಹಾಗೂ 4 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಆದಿತ್ಯ (21)ಶಿಕ್ಷೆಗೊಳಗಾದ ಸವಾರ. ರಸ್ತೆ ಅಪಘಾತದಲ್ಲಿ ರಂಗಸ್ವಾಮಯ್ಯ(67) ಎಂಬುವರು ಮೃತಪಟ್ಟಿದ್ದರು.
2017 ಆ.26 ರಂದು ರಾತ್ರಿ 8 ಗಂಟೆ ಸುಮಾರಿಗೆ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ರಂಗಸ್ವಾಮಯ್ಯ ನಡೆದು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಆದಿತ್ಯ ರಂಗಸ್ವಾಮಯ್ಯಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಿದ ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಆರೋಪಿಯ ವಿರುದ್ಧ 4ನೇ ಎಸಿಎಂಎಂ ಕೋರ್ಟ್ಗೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗೆ 6 ತಿಂಗಳ ಶಿಕ್ಷೆ ಹಾಗೂ 4 ಸಾವಿರ ದಂಡ ವಿಧಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ