ನಗರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಡಗರ


Team Udayavani, Aug 25, 2018, 12:51 PM IST

sambramada.jpg

ಬೆಂಗಳೂರು: ರಾಜಧಾನಿಯಲ್ಲಿ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸಿಲಿಕಾನ್‌ ಸಿಟಿಯ ಮನೆಗಳಲ್ಲಿ ಮಾವು-ಸೇಬು, ಮಲ್ಲಿಗೆ, ಸುಗಂಧ, ಕೇದಗೆಗಳಿಂದ ಅಲಕೃಂತಗೊಂಡಿದ್ದ ಲಕ್ಷ್ಮೀ ಶುಕ್ರವಾರ ಕಳೆಗಟ್ಟಿದಳು. ನಗರದ ಬಹುತೇಕ ದೇವಾಲಯಗಳಲ್ಲಿ ಧೈರ್ಯ ಲಕ್ಷ್ಮಿ, ಸಂತಾನ ಲಕ್ಷ್ಮಿ, ಧನಲಕ್ಷ್ಮಿ, ಧಾನ್ಯಲಕ್ಷ್ಮಿಯ ವಿವಿಧ ಅಲಂಕಾರಗಳಲ್ಲಿ ದೇವಿಯ ಮೂರ್ತಿಗಳು ಜನರಲ್ಲಿ ಭಕ್ತಿ ಮೂಡಿಸಿತ್ತು.

ಹಬ್ಬದ ಪ್ರಯುಕ್ತ  ಮನೆಗಳಲ್ಲಿ ಕಳಸ ಪ್ರತಿಷ್ಠಾಪಿಸಿ ಲಕ್ಷ್ಮಿ ಮುಖವಾಡಗಳನ್ನು ಕಟ್ಟಿ , ತ್ರಾಮದ ಬಿಂದಿಗೆ ಇರಿಸಿ ಸೀರೆ ಉಡಿಸಿಲಾಯಿತು. ಕೆಲವು ಮನೆಗಳಲ್ಲಿ ಬೆಳ್ಳಿಯ ಲಕ್ಷ್ಮೀ ಮುಖವಾಡ ಕೊಬ್ಬರಿ ಅಥವಾ ತೆಂಗಿನಕಾಯಿಯಲ್ಲಿ ಅಥವಾ ಅರಿಶಿಣದಲ್ಲಿ ಮಾಡಿದ ಮುಖವಾಡಗಳನ್ನು ಕಳಸಕ್ಕೆ ಕಟ್ಟಿದ್ದರು. ಅದಕ್ಕೆ ಆಭರಣಗಳನ್ನು ತೊಡಿಸಿ ಅಲಂಕಾರ ಮಾಡಲಾಗಿತ್ತು. ಕೆಲವು ಮನೆಗಳಲ್ಲಿ ವಿವಿಧ ನೋಟುಗಳಿಂದ ಶೃಂಗಾರಿಸಿದ್ದರು.

ಅಲ್ಲದೆ ದೇವರಿಗೆ ವಿವಿಧ ಸಿಹಿ ಪದಾರ್ಥಗಳ ನೈವೇದ್ಯ ಸಮರ್ಪಿಸಿ ಭಕ್ತಿ ಭಾವದಿಂದ ಪೂಜಿಸಲಾಯಿತು. ಸಂಜೆ ವೇಳೆಗೆ ಶ್ಲೋಕ ಪಠಿಸಿ ಹಾಡು ಹಾಡಿ ಲಕ್ಷ್ಮಿಗೆ ಆರತಿ ಬೆಳಗಿದರು. ರೇಷ್ಮೆ ಸೀರೆ ಧರಿಸಿದ ಮುತ್ತೈದೆಯರು, ಬಣ್ಣ ಬಣ್ಣದ ಫ್ಯಾನ್ಸಿ ಡ್ರೆಸ್‌ ತೊಟ್ಟ ಯುವತಿಯರು, ಮಕ್ಕಳು ತಮ್ಮ ನೆರೆಹೊರೆಯವರ ಮನೆಗಳಿಗೆ ತೆರಳಿ ಲಕ್ಷ್ಮಿಗೆ ನಮಿಸಿದರು. ನಂತರ ಅರಿಶಿನ ಕುಂಕುಮ ಮತ್ತು ಬಾಗೀನ ಪಡೆದುಕೊಂಡು ಬಂದರು.

ದೇವಾಲಯಗಳಲ್ಲೂ ವಿಶೇಷ ಪೂಜೆ: ಗವಿಪುರದ ಅಂಬಾಭವಾನಿ ದೇವಸ್ಥಾನ, ಬಂಡೆಮಹಾಕಾಳಿ ದೇವಸ್ಥಾನ, ಚಾಮರಾಜಪೇಟೆಯ ಅಂಬಾ ಭವಾನಿ, ಹನುಮಂತನಗರದ ಬಲಮುರಿ ಗಣಪತಿ ದೇವಾಲಯದಲ್ಲಿ ಪದ್ಮಾವತಿ, ಧರ್ಮರಾಯರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ, ಬನಶಂಕರಿಯ ಬನಶಂಕರಮ್ಮ,

ವಾಸವಿ ಕನ್ಯಕಾಪರಮೇಶ್ವರಿ ದೇವಸ್ಥಾನ ಸೇರಿದಂತೆ ನಗರದ ವಿವಿಧ ದೇವಿ ದೇವಾಲಯಗಳಲ್ಲಿ  ಲಕ್ಷ್ಮಿ, ಮಹಾಲಕ್ಷ್ಮಿ, ಗಜಲಕ್ಷ್ಮಿ, ಅಷ್ಟಲಕ್ಷ್ಮಿ ಹೀಗೆ ನಾನಾ ಲಕ್ಷ್ಮಿಯರ ಅಲಂಕಾರ ಮಾಡಲಾಗಿತ್ತು. ಅರಿಶಿನ ಕುಂಕುಮ ಅಲಂಕಾರ, ಧಾನ್ಯದ ಅಲಂಕಾರ, ಡ್ರೈಫ್ರೂಟ್ಸ್‌ ಅಲಂಕಾರ, ಹಣ್ಣಿನ ಅಲಂಕಾರ, ನೋಟು ಮತ್ತು ಕಾಸಿನ ಅಲಂಕಾರ ಹೀಗೆ ನಾನಾ ಅಲಂಕಾರಗಳನ್ನು ಮಾಡಲಾಗಿತ್ತು. 

ಟಿ.ಆರ್‌. ಮಿಲ್‌ ಬಳಿಯಿರುವ ಲಕ್ಷ್ಮೀ ದೇವಸ್ಥಾನ, ಶ್ರೀನಗರದ ಲಕ್ಷ್ಮೀ ದೇವಸ್ಥಾನ, ದೇವಗಿರಿ ವೆಂಕಟರಮಣ ಲಕ್ಷ್ಮೀ ದೇವಸ್ಥಾನ, ಮಹಾಲಕ್ಷ್ಮಿ ಲೇಔಟ್‌ ಲಕ್ಷ್ಮೀ ದೇವಸ್ಥಾನ, ಶೇಷಾದ್ರಿಪುರಂನ ಮಹಾಲಕ್ಷ್ಮಿ ಮಂದಿರ, ಹೆಬ್ಟಾಳದ ಕೆಂಪಾಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ನಡೆಯಿತು. ಮುಂಜಾನೆಯಿಂದ ರಾತ್ರಿಯವರೆಗೆ ಭಕ್ತರು ಸಾಲುಗಟ್ಟಿ ಆಗಮಿಸಿದ್ದರು.

ಲಕ್ಷ್ಮಿ ವಿಗ್ರಹಕ್ಕೆ ವಿಶೇಷ ಅಲಂಕಾರ: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಪದ್ಮನಾಭನಗರ ಲಕ್ಷ್ಮೀಕಾಂತ ದೇವಸ್ಥಾನದಲ್ಲಿರುವ 8 ಅಡಿ ಎತ್ತರದ ಲಕ್ಷ್ಮಿ ವಿಗ್ರಹಕ್ಕೆ ಅಲಂಕಾರ ಮತ್ತು ಪೂಜೆ ನೆರವೇರಿಸಲಾಯಿತು. ಧನ್ವಂತರಿ ರಸ್ತೆಯ ಲಕ್ಷ್ಮಿ ಹಯಗ್ರೀವ ಸನ್ನಿ ಯಲ್ಲಿ ಪುಟಾಣಿ ಲಕ್ಷ್ಮಿ ವಿಗ್ರಹವಿದೆ. ಇದು ಪುಟಾಣಿಯಾದರೂ ಭಕ್ತರ ನಂಬಿಕೆ ದೊಡ್ಡದು. ಹೀಗಾಗಿ ಇಲ್ಲಿ ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ಸಾಲುಗಟ್ಟಿ ದೇವಿಗೆ ಭಕ್ತಿ ಸಮರ್ಪಿಸಿದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.