ರಾಮಾಯಣ ಕೇವಲ ಕವಿ ಕಲ್ಪನೆ


Team Udayavani, Aug 25, 2018, 12:52 PM IST

ramayana.jpg

ಬೆಂಗಳೂರು: “ರಾಮಾಯಣ ಕವಿ ಕಲ್ಪನೆ ಅಷ್ಟೇ.ಅದು,ನಮ್ಮ ಬದುಕಿಗೆ ಅತಿ ಹತ್ತಿರವಾಗಲಿ ಎಂಬ ದೃಷ್ಟಿಯಿಂದ ಪಾತ್ರಗಳನ್ನು ಸೃಷ್ಟಿ ಮಾಡಲಾಗಿದೆ’ಎಂದು ರಾಷ್ಟ್ರೀಯ ನಾಟಕ ಶಾಲೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯ ಅಭಿಪ್ರಾಯಪಟ್ಟಿದ್ದಾರೆ. 

ಲಹರಿ ಅಡ್ವೊಕೇಟ್‌ ಫೋರಂ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಲಹರಿ ಲಾಯರ್ಸ್‌ ಆ್ಯಕ್ಟ್ -2018′, ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಾಯಣಕ್ಕೆ ಒಂದೊಂದು ದೇಶದಲ್ಲಿ ಒಂದೊಂದು ರೀತಿಯ ಕಲ್ಪನೆ ನೀಡಲಾಗಿದೆ. ಥೈಲ್ಯಾಂಡ್‌ನ‌ಲ್ಲಿ ರಾಮ, ಲಕ್ಷ್ಮಣ, ಸೀತೆಯರನ್ನು ಸಹೋದರ ಸಹೋದರಿ ರೀತಿಯಲ್ಲಿ ನೋಡಲಾಗುತ್ತಿದೆ. ಆದರೆ ಭಾರತದಲ್ಲಿ ವಾಲ್ಮೀಕಿ ಒಂದು ಗಂಡಿಗೆ ಒಂದೇ ಹೆಣ್ಣು ಎಂಬ ಕಲ್ಪನೆಯಲ್ಲಿ ರಾಮಾಯಣ ಹೆಣೆದಿದ್ದಾರೆ ಎಂದು ಇತಿಹಾಸ ಬಿಚ್ಚಿಟ್ಟರು.

12ನೇ ಶತಮಾನದಲ್ಲಿ ವಚನ ಚಳುವಳಿಕಾರ ಬಸವಣ್ಣನವರು ಮಾನವತ್ವದ‌ ಮಹಾಕ್ರಾಂತಿ ಮಾಡಿದರು. ಆದರೆ, ಇಂದು ಮಾನವೀಯತೆ ಇಲ್ಲದ ರೀತಿಯಲ್ಲಿ ಬದುಕು ಸಾಗಿಸಲಾಗುತ್ತದೆ. ಹೀಗಾಗಿ ಮೊದಲು, ನಾವು ಮಾನವೀಯ ಗುಣಗಳನ್ನು ರೂಢಿಸಿಕೊಳ್ಳುವುದರ ಜತೆಗೆ ಅದನ್ನು ಬಿತ್ತುವ ಕೆಲಸವನ್ನು ಮಾಡಬೇಕು ಎಂದು ಸಲಹೆ ನೀಡಿದರು.

ನಾವೇ ಸೃಷ್ಟಿಸಿಕೊಂಡ ಆಪತ್ತು: ಕೊಡಗು ಮತ್ತು ಕೇರಳದಲ್ಲಿ ಉಂಟಾಗಿರುವ ವಿಪತ್ತು ಮನುಷ್ಯರೇ ಸೃಷ್ಟಿಸಿಕೊಂಡಿರುವುದಾಗಿದೆ. ಕಸ್ತೂರಿರಂಗನ್‌ ವರದಿ ಅನುಷ್ಠಾನ ಮಾಡದೇ ಮೂಲೆಗುಂಪು ಮಾಡಿರುವುದು ಕೂಡ ಇದರಲ್ಲಿ ಸೇರಿದೆ. ಭೂಮಿ ಕೇವಲ ಮನುಷ್ಯ ಸಂಕುಲಕಷ್ಟೇ ಸೀಮಿತವಲ್ಲ ಎಂಬುವುದನ್ನು ಮಾನವ ಸಂಕುಲ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿ ಹೇಳಿದರು.

ಬೆಂಗಳೂರಿನಲ್ಲೂ ಕೂಡ ಕೆರೆ ಹಾಗೂ ರಾಜಕಾಲುವೆ ಒತ್ತುವರಿಯಾಗಿದೆ. ಹೀಗಾಗಿ ಕೊಡಗು ಮತ್ತು ಕೇರಳದಲ್ಲಿ ಕಾಣಿಸಿಕೊಂಡಿರುವ ಪರಿಸ್ಥಿತಿ ಮುಂದೊಂದು ದಿನ ಸಿಲಿಕಾನ್‌ಸಿಟಿ ಬೆಂಗಳೂರಿಗೂ ಬರಬಹುದು ಎಂದು ಎಚ್ಚರಿಸಿದರು.

ಕೋರ್ಟ್‌ನಲ್ಲಿ ದಿನಲೂ ವಾದ ಮಂಡನೆ ಮಾಡುವ ವಕೀಲರಲ್ಲೂ ನಾಟಕದ ಅಭಿರುಚಿ ಇದೆ ಎಂಬುವುದನ್ನು ಮರೆಯಲಾಗದು.ರಂಗಭೂಮಿ ಬೆಳವಣಿಗೆ ದೃಷ್ಟಿಯಿಂದ ಈ ಪ್ರಯತ್ನ ಖಷಿ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕಾರ್ಯಕ್ರಮಗಳು ಹೀಗೆ ನಡೆಯಲಿ ಎಂದು ಆಶಿಸಿದರು.

ವಕೀಲರಿಗೆ ಡ್ರಾಮಾ ಹೊಸದಲ್ಲ: ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ ಮಾತನಾಡಿ, ವಕೀಲರಿಗೆ ಡ್ರಾಮಾ ಹೊಸದೇನು ಅಲ್ಲ.ನ್ಯಾಯಾಲದಲ್ಲಿ ತಮ್ಮ ಕಕ್ಷಿದಾರರ ಜತೆ ಮಾತನಾಡುವಾಗ ಸೇರಿದಂತೆ ಹಲವು ಸನ್ನಿವೇಶಗಳಲ್ಲಿ ವಕೀಲರು ಆಗಾಗ ನಾಟಕ ಮಾಡುತ್ತಲೇ ಇರುತ್ತಾರೆ ಎಂದು ನಗೆ ಚಟಾಕಿಯನ್ನು ಹಾರಿಸಿದರು.

ಬಿಡುವಿಲ್ಲದ ತಮ್ಮ ವಕೀಲ ವೃತ್ತಿಯ ನಡುವೆಯೂ, ರಾಜ್ಯದಲ್ಲಿರುವ ವಕೀಲರನ್ನು ಸಂಘಟಿಸಿ ಎರಡು ದಿನಗಳ ನಾಟಕೋತ್ಸವ ಸ್ಪರ್ಧೆಯನ್ನು ಹಮ್ಮಿಕೊಳ್ಳುವುದು ಸಾಮಾನ್ಯದ ಕೆಲಸವೇನು ಅಲ್ಲ. ಇದೊಂದು ಉತ್ತಮವಾದ ಕೆಲಸವಾಗಿದ್ದು ವಯಕ್ತಿಕವಾಗಿ ನನಗೆ ಸಂತಸ ನೀಡಿದೆ ಎಂದು ಹೇಳಿದರು. ಲಹರಿ ಅಡ್ವೊಕೇಟ್‌ ಫೋರಂನ ಅಧ್ಯಕ್ಷೆ ಪಿ.ಅನು ಚಂಗಪ್ಪ, ಕಾರ್ಯದರ್ಶಿ ಆರ್‌.ಜಿ.ಚೌವ್ಹಾಣ್‌, ಶ್ರೀಕಾಂತ್‌ ಪಾಟೀಲ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸಂತ್ರಸ್ತರಿಗೆ ನಿಧಿಸಂಗ್ರಹ: ಎರಡು ದಿನಗಳ ಈ ನಾಟಕೋತ್ಸವ ಸ್ಪರ್ಧೆಯಲ್ಲಿ ಶಿವಮೊಗ್ಗ, ಧಾರವಾಡ, ಮೈಸೂರು ಮತು ಬೆಂಗಳೂರು ಸೇರಿದಂತೆ ಒಟ್ಟು ಐದು ತಂಡಗಳು ಭಾಗವಹಿಸಿವೆ. ವಿಜೇತ ತಂಡಕ್ಕೆ ಪ್ರಥಮ ಬಹುಮಾನ 72, ಸಾವಿರ ರೂ. ದ್ವಿತೀಯ ಬಹುಮಾನ 50, ಸಾವಿರ ರೂ.ಹಾಗೂ ತೃತೀಯ ಬಹುಮಾನ 25 ಸಾವಿರ ರೂ.ನೀಡಲಾಗುವುದು. ಟಿಕೆಟ್‌ ಸಂಗ್ರಹದ ಹಣವನ್ನು ಕೊಡಗು ಸಂತ್ರಸ್ತರಿಗೆ ನೀಡಲು ಲಹರಿ ಅಡ್ವೋಕೆಟ್‌ ಫೋರಂ ನಿರ್ಧರಿಸಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.