ಏಕ ಧರ್ಮದ ಸಿದ್ಧಾಂತ ಮನೆಯಲ್ಲೇ ಕೇಳ್ಳೋದಿಲ್ಲ


Team Udayavani, Aug 26, 2018, 11:10 AM IST

gul-5.jpg

ಕಲಬುರಗಿ: ಕೆಲ ಸಂಸ್ಥೆಗಳು ತಮ್ಮ ತತ್ವಗಳನ್ನು ದೇಶದ ಜನತೆ ಮೇಲೆ ಹೇರಲು ಹೊರಟಿದ್ದು, ಅದನ್ನು ವಿರೋಧಿಸುವವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ವಿರುದ್ಧ ವಾಗ್ಧಾಳಿ ನಡೆಸುವ ಮೂಲಕ ಮನುಸ್ಮೃತಿಯನ್ನು ಖಂಡಿಸಿದರು.

ದೆಹಲಿಯ ಜಂತರ್‌ ಮಂತರ್‌ನಲ್ಲಿ ಸಂವಿಧಾನ ಸುಟ್ಟ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸಂವಿಧಾನ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು, ಡಾ| ಬಿ.ಆರ್‌.ಅಂಬೇಡ್ಕರ್‌ ರಚಿಸಿರುವ ಸಂವಿಧಾನ ರಕ್ಷಿಸುವುದು ಎಲ್ಲ ಸಮಾಜಗಳ, ವರ್ಗಗಳ ಜವಾಬ್ದಾರಿ ಆಗಿದೆ. ಆದರೆ, ಕೆಲ ಸಂಸ್ಥೆಗಳು ಏಕ ಧರ್ಮದ ಸಿದ್ಧಾಂತವನ್ನು ಸ್ಥಾಪಿಸಿ ಅದರ ತತ್ವ ದೇಶದ ನಾಗರಿಕರ ಮೇಲೆ ಹೇರಲು ಮುಂದಾಗಿವೆ. ಇಂತಹ ತತ್ವವನ್ನು ಮೊದಲು ತಮ್ಮ ಮನೆಯಲ್ಲೇ ಅಳವಡಿಸಿಕೊಂಡು ನೋಡಲಿ. ಅವರ ಮನೆಯ ಹೆಣ್ಣು ಮಕ್ಕಳೇ ದಂಗೆ ಏಳುತ್ತಾರೆ ಎಂದರು. 

ಸಂವಿಧಾನ ಬದಲಾವಣೆ ಮತ್ತು ಬುದ್ಧಿಜೀವಿಗಳ ಕುರಿತು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನೀಡಿರುವ ಹೇಳಿಕೆಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿದ ಅವರು, ಹೆಗಡೆ ಅವರಿಗೆ ಏಕಧರ್ಮದ ತತ್ವ ಮಾತ್ರ ಗೊತ್ತಿದೆ. ಅವರಿಗೆ ಜಾತ್ಯತೀತ ಮೌಲ್ಯಗಳು, ತತ್ವಗಳು ಗೊತ್ತಿಲ್ಲ ಎಂದು ಟೀಕಿಸಿದರು.

ದೇಶದಲ್ಲಿ ಗೌರಿ ಲಂಕೇಶ, ಡಾ| ಎಂ.ಎಂ. ಕಲಬುರ್ಗಿ, ದಾಬೋಲ್ಕರ್‌, ಪನಸಾರೆ ಅವರಂತ ವಿಜಾರವಾದಿಗಳ ಹತ್ಯೆ ನಡೆದಿವೆ. ಕೇಂದ್ರದಲ್ಲಿ ದಲಿತರು, ದುರ್ಬಲರು, ಅಲ್ಪಸಂಖ್ಯಾತರ ವಿರೋಧಿಗಳು ಅಧಿಕಾರದಲ್ಲಿದ್ದಾರೆ. ಗೋ ರಕ್ಷಣೆಯ ಹೆಸರಲ್ಲಿ ಮನುಷ್ಯರಿಗೆ ಬೆಲೆ ಇಲ್ಲದಂತಾಗಿದ್ದು, ಹಲ್ಲೆ, ದೌರ್ಜನ್ಯ ಮತ್ತು ಕೊಲೆ ಕೃತ್ಯಗಳನ್ನು ಎಸಗಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಮರಿ ಮೊಮ್ಮಗ ರಾಜರತ್ನ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂವಿಧಾನವನ್ನು ಬದಲಾವಣೆ ಮಾಡುವ ಷಡ್ಯಂತ್ರದಲ್ಲಿ ತೊಡಗಿದ್ದು, ಮನುಸ್ಮೃತಿಯನ್ನು ಸ್ಥಾಪಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಕಚೇರಿಯಿಂದ ಕೇವಲ 15 ಕಿ.ಮೀ. ದೂರದಲ್ಲಿರುವ ಜಂತರ್‌ ಮಂತರ್‌ನಲ್ಲಿ ಸಂವಿಧಾನ ಪ್ರತಿ ಸುಡಲಾಗಿದೆ. ಆದರೂ, ಪ್ರಧಾನಿ ಮೋದಿ ಮೌನ ವಹಿಸುವ ಮೂಲಕ ಸಂವಿಧಾನ ಸುಟ್ಟವರಿಗೆ ಬೆಂಬಲ ಕೊಟ್ಟಿದ್ದಾರೆ ಎಂದು ದೂರಿದರು.

ಮೋದಿ ಅವರನ್ನು ಬದಲಾಯಿಸಿ ಎಂದು ನಾನು ಹೇಳುವುದಿಲ್ಲ. ಯಾಕೆಂದರೆ, ಮೋದಿ ಜಾಗದಲ್ಲಿ ನಾಳೆ ಮತ್ತೂಬ್ಬರು ಬರ್ತಾರೆ. ಹೀಗಾಗಿ ಮೋದಿಯಂತಹ ಉತ್ಪನ್ನಗಳನ್ನು ಉತ್ಪಾದಿಸುವ ಆರ್‌ಎಸ್‌ಎಸ್‌ ಎನ್ನುವ ಫ್ಯಾಕ್ಟರಿಯನ್ನು ಬಂದ್‌ ಮಾಡಬೇಕಿದೆ ಎಂದರು.
 
ಮಾಜಿ ಶಾಸಕ ಬಿ.ಆರ್‌.ಪಾಟೀಲ, ಫಾದರ್‌ ಲೋಬೋ, ಗುರಮೀತ್‌ ಸಿಂಗ್‌, ಬಾಬಾ ಖಾನ್‌, ತಿಪ್ಪಣ್ಣಪ್ಪ ಕಮಕನೂರ, ದಸಂಸ ರಾಜ್ಯ ಸಂಚಾಲಕ ಡಿ.ಜಿ .ಸಾಗರ ಮಾತನಾಡಿದರು. ಶಾಸಕ ಎಂ.ವೈ. ಪಾಟೀಲ, ಸಂವಿಧಾನ ರಕ್ಷಣಾ ಸಮಿತಿ ಅಧ್ಯಕ್ಷ ವಿಠಲ ದೊಡ್ಮನಿ, ಕೆ.ನೀಲಾ, ಅಲ್ಲಮ ಪ್ರಭು ಪಾಟೀಲ, ರಾಜಕುಮಾರ ಕಪನೂರ, ಮಾರುತಿ ಮಾನ್ಪಡೆ ಹಾಗೂ ಮತ್ತಿತರರು ಇದ್ದರು. 

ಬಹಿರಂಗ ಸಮಾವೇಶಕ್ಕೂ ಮುನ್ನ ನಗರೇಶ್ವರ ಶಾಲೆಯಿಂದ ಜಗತ್‌ ವೃತ್ತದವರೆಗೂ ಬೃಹತ್‌ ರ್ಯಾಲಿ ನಡೆಸಲಾಯಿತು. ಜಿಲ್ಲೆಯ ಹಲವು ಭಾಗಗಳಿಂದ ಆಗಮಿಸಿದ್ದ ಸಾವಿರಾರು ಜನರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.