ತವರು ಜನರಿಗಾಗಿ ಕೇರಳಿಗರ ಓಣಂ ತ್ಯಾಗ


Team Udayavani, Aug 26, 2018, 12:26 PM IST

tavatu.jpg

ಬೆಂಗಳೂರು: ದೇವರನಾಡು ಕೇರಳದ ಐತಿಹಾಸಿಕ ಮತ್ತು ಪುರಾಣ ಪ್ರಸಿದ್ಧ ಓಣಂ ಹಬ್ಬದ ಸಂಭ್ರಮ ಈ ಬಾರಿ ರಾಜಧಾನಿ ಬೆಂಗಳೂರಿನಲ್ಲಿ ಕಳೆಗುಂದಿದೆ. ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ತಮ್ಮ ತವರು ರಾಜ್ಯದ ಜನ ಸಂಕಷ್ಟ ಎದುರಿಸುತ್ತಿರುವಾಗ ತಾವು ಹಬ್ಬದ ಸಂಭ್ರಮ ಆಚರಿಸುವುದು ಮಾನವೀಯತೆ ಅಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ವಾಸ ಮಾಡುತ್ತಿರುವ ಮಲೆಯಾಳಿ ಕುಟುಂಬಗಳು ಈ ಬಾರಿ ಓಣಂ ಹಬ್ಬ ಆಚರಿಸದಿರಲು ನಿರ್ಧರಿಸಿದ್ದಾರೆ.

ತವರು ರಾಜ್ಯ ಕೇರಳ ಮತ್ತು ತಾವು ವಾಸ ಮಾಡುತ್ತಿರುವ ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ನೀಡಿ, ಆವರ ಸಂಕಷ್ಟದಲ್ಲಿ ಭಾಗಿಯಾಗುವ ಮೂಲಕ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಲು ನಗರದ ವಿವಿಧ ಮಲೆಯಾಳಿ ಸಂಘ-ಸಂಸ್ಥೆಗಳು ತೀರ್ಮಾನಿಸಿವೆ.

ಕೇರಳದಲ್ಲಿ ಆಗಸ್ಟ್‌ ಕೊನೆ ವಾರದಲ್ಲಿ ಓಣಂ ಹಬ್ಬ ಆಚರಿಸಲಾಗುತ್ತದೆ. ಅಲ್ಲಿ ಹಬ್ಬ ಮುಗಿದ ಮೇಲೆ ಬೆಂಗಳೂರಿನ ಮಲೆಯಾಳಿ ಸಮುದಾಯವರು ಇಲ್ಲಿ ಹಬ್ಬ ಆಚರಿಸುತ್ತಾರೆ. ಅದರಂತೆ, ಈ ವರ್ಷ ಸೆ. 9 ಮತ್ತು 10ರಂದು ಓಣಂ ಹಬ್ಬ ಆಚರಣೆಗೆ ನಿರ್ಧರಿಸಲಾಗಿತ್ತು. ಅದಕ್ಕಾಗಿ ಕಳೆದ ಎರಡು ತಿಂಗಳಿಂದ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ, ಅವುಗಳೆಲ್ಲಾ ಈಗ ಸ್ಥಗಿತಗೊಂಡಿವೆ.

ನಾಲ್ಕು ದಶಕಗಳ ಇತಿಹಾಸ ಹೊಂದಿರುವ “ಕೇರಳ ಸಮಾಜಂ’ ಸಂಘ, ಸುವರ್ಣ ಕರ್ನಾಟಕ ಕೇರಳ ಸಮಾಜಂ ಸೇರಿದಂತೆ ಬೆಂಗಳೂರಿನಲ್ಲಿ 80ಕ್ಕೂ ಹೆಚ್ಚು ಮಲೆಯಾಳಿ ಸಮುದಾಯ ಸಾಂಸ್ಕೃತಿಕ, ಸಾಮಾಜಿಕ ಸಂಘಟನೆಗಳಿವೆ. ಒಂದೊಂದು ಸಂಘದಲ್ಲಿ 100ರಿಂದ ಸಾವಿರ ಕುಟುಂಬದವರೆಗೆ ಸದಸ್ಯರು ಇದ್ದಾರೆ.

ಪ್ರತಿ ವರ್ಷ ಎಲ್ಲ ಸಂಘಟನೆಗಳು ಓಣಂ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತವೆ. ಒಂದೊಂದು ಸಂಘದಲ್ಲಿ 10 ಲಕ್ಷದಿಂದ 50 ಲಕ್ಷ ರೂ.ವರೆಗೆ ಹಣ ಖರ್ಚಾಗುತ್ತದೆ. ಆದರೆ, ಈ ಬಾರಿ ಹಬ್ಬದ ಸಂಭ್ರಮ ಸ್ಥಗಿತಗೊಳಿಸಿ, ಹಬ್ಬಕ್ಕೆ ಖರ್ಚಾಗುತ್ತಿದ್ದ ಎಲ್ಲ ಹಣವನ್ನು ಕೇರಳ ರಾಜ್ಯದ ನೆರೆ ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರಕ್ಕೆ ಕಳಿಸಿಕೊಡಲಾಗುತ್ತಿದೆ. 

ಸಂತ್ರಸ್ತರಿಗೆ ಓಣಂ ಅರ್ಪಣೆ: ನಮ್ಮ ತವರು ರಾಜ್ಯದಲ್ಲಿ ನೆರೆ ಉಂಟಾಗಿ ನಮ್ಮವನ್ನು ಕಷ್ಟದಲ್ಲಿರುವಾಗ ನಾವು ಇಲ್ಲಿ ಸಂಭ್ರಮಿಸುವುದು ಸರಿಯಲ್ಲ. ಹಾಗಾಗಿ, ಈ ಬಾರಿ ಓಣಂ ಆಚರಿಸದಿರಲು ತೀರ್ಮಾನಿಸಿದ್ದೇವೆ. ಹಬ್ಬಕ್ಕೆ ಕೂಡಿಟ್ಟ ಹಣವನ್ನು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಕಳಿಸಿಕೊಡಲಾಗಿದೆ.

ಜತೆಗೆ ಎರಡು ಟ್ರಕ್‌ ಪರಿಹಾರ ಸಾಮಾಗ್ರಿಗಳನ್ನು ಕೇರಳಕ್ಕೆ ಮತ್ತು ಒಂದು ಟ್ರಕ್‌ ಪರಿಹಾರ ಸಾಮಾಗ್ರಿ ಕೊಡಗು ಜಿಲ್ಲೆಗೆ ಕಳಿಸಿಕೊಡಲಾಗಿದೆ. ಈ ನೆರವು ಹೀಗೇ ಮುಂದುವರಿಯಲಿದೆ ಎಂದು ಮಲೆಯಾಳೀಸ್‌ ಅಸೋಸಿಯೇಷನ್‌ ಆಫ್ ಎಚ್‌ಎಎಲ್‌ (ಮಹಲ್‌) ಸಾರ್ವಜನಿಕ ಸಂಪರ್ಕಾಧಿಕಾರಿ ಅಖೀಲ್‌ ಟಿ. ರಮಣ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಕೇರಳದಲ್ಲಿ ಪ್ರವಾಹ ಉಂಟಾಗಿ ನಮ್ಮವರು ಕಷ್ಟದಲ್ಲಿರುವ ಕಾರಣಕ್ಕೆ ಅವರ ನೋವಿಗೆ ಸ್ಪಂದಿಸಲು ಬೆಂಗಳೂರಿನ ಬಹುತೇಕ ಮಲೆಯಾಳಿ ಸಂಘಟನೆಗಳು ಈ ಬಾರಿ ಓಣಂ ಹಬ್ಬ ಆಚರಿಸದಿರಲು ತೀರ್ಮಾನಿಸಿದ್ದಾರೆ. ಅಲ್ಲದೇ ಆ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರೆ ಸಂತ್ರಸ್ತರಿಗೆ ನೀಡಲು ತೀರ್ಮಾನಿಸಲಾಗಿದೆ
-ಎನ್‌. ಸತೀಶ್‌, ನನ್ಮಾ ಮಲೆಯಾಳಿ ಕಲ್ಚರರ್‌ ಅಸೋಸಿಯೇಷನ್‌

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.