ಅಮೆರಿಕದ ಗುರುದ್ವಾರದಲ್ಲಿ ಸಿಖ್ ನಾಯಕನ ಮೇಲೆ ಗುಂಪು ದಾಳಿ
Team Udayavani, Aug 26, 2018, 1:32 PM IST
ಕ್ಯಾಲಿಫೋರ್ನಿಯಾ: ಅಮೆರಿಕದಲ್ಲಿ ಜನಾಂಗೀಯ ದಾಳಿ ಮುಂದುವರೆದಿದ್ದು,ಶನಿವಾರ ದೆಹಲಿಯ ಗುರುದ್ವಾರ ಸಮಿತಿಯ ಸದಸ್ಯ, ಆಕಾಲಿದಳದ ನಾಯಕ ಮಂಜೀತ್ ಸಿಂಗ್ ಅವರನ್ನು 20 ಕ್ಕೂ ಹೆಚ್ಚು ಜನರ ಗುಂಪು ಎಳೆದಾಡಿ ಮುಖಕ್ಕೆ ಗಂಭೀರ ಸ್ವರೂಪದ ಹಲ್ಲೆ ನಡೆಸಿದೆ.
ಗುರುದ್ವಾರದಿಂದ ಹೊರ ಬರುತ್ತಿದ್ದ ವೇಳೆ 20 ಕ್ಕೂ ಹೆಚ್ಚು ಮಂದಿ ದಾಳಿ ನಡೆಸಿದ್ದಾರೆ. ಮಂಜೀತ್ ಅವರ ಮುಖಕ್ಕೆ ಬಲವಾದ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಾಳಿ ನಡೆಸಿ ಮೂವರನ್ನು ಕ್ಯಾಲಿಫೋರ್ನಿಯಾ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಮಂಜೀತ್ ಅವರು ಗುರುದ್ವಾರದಲ್ಲಿ ನನ್ನ ಮೇಲೆ ನಡೆದ ದಾಳಿಗೆ ಯಾರೂ ಶಾಂತಿ ಭಂಗಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.
ಘಟನೆಯನ್ನು ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಸೇರಿದಂತೆ ಹಲವು ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !