ನಾಳೆಯಿಂದ ಶಾಲೆಗಳಲ್ಲಿ ‘ವೆರಿಗುಡ್‌ 10/10’ ತೆರೆಗೆ


Team Udayavani, Aug 26, 2018, 4:50 PM IST

26-agust-18.jpg

ಹುಬ್ಬಳ್ಳಿ: ಬಾಲಿವುಡ್‌ ತಾರೆ ಜೂಹಿ ಚಾವ್ಲಾ ನಟಿಸಿರುವ ಮಕ್ಕಳ ಆಧಾರಿತ ಕನ್ನಡ ಚಿತ್ರ ‘ವೆರಿಗುಡ್‌ 10/10’ ಚಿತ್ರ ಹ್ಯಾಂಗ್ಯೋ ಐಸ್‌ಕ್ರೀಂ ಕಂಪೆನಿ ಪ್ರಾಯೋಜಕತ್ವದಲ್ಲಿ ಆ. 27ರಿಂದ ರಾಜ್ಯದ ಸರಕಾರಿ ಶಾಲೆಗಳಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಚಿತ್ರದ ನಿರ್ದೇಶಕ ಯಶವಂತ ಸರದೇಶಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಕ್ಕಳ ಕಿಡಿಗೇಡಿತನ, ಅದನ್ನು ಸಹಿಸಿಕೊಳ್ಳದ ಪಾಲಕರು ಸೇರಿದಂತೆ ಮಕ್ಕಳ ಮನೋವಿಕಾಸದ ಮೇಲೆ ಚಿತ್ರ ನಿರ್ಮಿಸಲಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಸಾಧ್ಯವಾಗದ ಕಾರಣ ಶಾಲೆಗಳಲ್ಲಿ ಪ್ರದರ್ಶಿಸಲು ಚಿಂತಿಸಲಾಯಿತು. ಇದಕ್ಕೆ ಪೂರಕವಾಗಿ ಶಿಕ್ಷಣ ಇಲಾಖೆಯಿಂದ ಅನುಮತಿ ಕೂಡ ದೊರೆತಿದೆ. ಪ್ರದರ್ಶನಕ್ಕೆ ತಗಲುವ ವೆಚ್ಚದ ಪ್ರಾಯೋಜಕತ್ವವನ್ನು ಹ್ಯಾಂಗ್ಯೋ ಐಸ್‌ಕ್ರೀಂ ಕಂಪನಿ ವಹಿಸಿಕೊಂಡಿದೆ ಎಂದು ತಿಳಿಸಿದರು.

ಬಾಲಿವುಡ್‌ ತಾರೆ ಜೂಹಿ ಚಾವ್ಲಾ ಶಿಕ್ಷಕಿ ಪಾತ್ರದಲ್ಲಿ ನಟಿಸಿದ್ದಾರೆ. ಅಬ್ರಹಾಂ ಲಿಂಕನ್‌ ಬರೆದಿರುವ ಪತ್ರದ ಸಾರಾಂಶದ ಹಾಡಿಗೆ ಜೂಹಿ ಚಾವ್ಲಾ ಧ್ವನಿ ನೀಡಿದ್ದು, ಸಾಕಷ್ಟು ಜನಪ್ರಿಯತೆ ಗಳಿಸಿದೆ. ಗುರುಬಲ ಎಂಟರ್‌ಟೇನರ್ ಹಾಗೂ ಬಾಲಾಜಿ ಕ್ರಿಯೇಶನ್‌ ಅಡಿಯಲ್ಲಿ ನಿರ್ಮಾಣವಾಗಿರುವ ಚಿತ್ರ 90 ನಿಮಿಷದ್ದಾಗಿದೆ. ಬಾಲ ಎಕ್ಸ್‌ಪ್ರೆಸ್‌ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳೇ ಪ್ರಮುಖ ಪಾತ್ರದಲ್ಲಿದ್ದಾರೆ. ಅವರ ಪಾಲಕರಿಗೂ ಅಭಿನಯಿಸಲು ಅವಕಾಶ ನೀಡಲಾಗಿದೆ ಎಂದರು.

124 ವಿದ್ಯಾರ್ಥಿಗಳು ಚಿತ್ರದಲ್ಲಿ ನಟಿಸಿದ್ದು, ಬಾಲ್ಯದ ತುಂಟಾಟ, ತಂದೆ-ತಾಯಿ ಹಾಗೂ ಶಿಕ್ಷಕರ ಅಗತ್ಯತೆ ಕೇಂದ್ರೀಕರಿಸಿ ಚಿತ್ರಿಸಲಾಗಿದೆ. ಈಗಾಗಲೇ ಅಮೆರಿಕ, ಕತಾರ, ಇಟಲಿ, ಮಾಸ್ಕೋದಲ್ಲಿ ಚಿತ್ರ ತೆರೆಕಂಡಿದೆ. ಆದರೆ ರಾಜ್ಯದ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲು ಸಾಧ್ಯವಾಗದ ಕಾರಣ ಪ್ರತಿಯೊಂದು ಶಾಲೆಗೆ ಮುಟ್ಟಿಸುವ ಕಾರ್ಯಕ್ಕೆ ಮುಂದಾಗಲಾಗಿದೆ ಎಂದರು. 

ಆರಂಭದಲ್ಲಿ 100 ಶಾಲೆಗಳ ಪ್ರಾಯೋಜಕತ್ವ ದೊರೆತಿದ್ದು, ಸರಕಾರಿ ಶಾಲೆಗಳನ್ನು ಕೇಂದ್ರೀಕರಿಸಲಾಗಿದೆ. ವಿದ್ಯಾರ್ಥಿಯಿಂದ 10 ರೂ. ಸಂಗ್ರಹಿಸುವಂತೆ ಶಿಕ್ಷಣ ಇಲಾಖೆಯಿಂದ ನಿರ್ದೇಶನವಿದ್ದರೂ ಇದರಲ್ಲಿ ಯಾವುದೇ ಒತ್ತಾಯವಿಲ್ಲ. ಪ್ರದರ್ಶನಕ್ಕೆ ಅಗತ್ಯವಾದ ವಾಹನ, ದೊಡ್ಡ ಪರದೆಯ ಟಿವಿ, ಜನರೇಟರ್‌ ಸೇರಿದಂತೆ ಇತರೆ ಸಾಮಗ್ರಿ ನಮ್ಮಲ್ಲಿವೆ. ಖಾಸಗಿ ಶಾಲೆಗಳಿಂದ ಬೇಡಿಕೆ ಬಂದರೆ ಅಲ್ಲಿಯೂ ಪ್ರದರ್ಶಿಸಲಾಗುವುದು ಎಂದರು.

ಸಾಹಿತ್ಯ ಪ್ರಕಾಶನದ ಎಂ.ಎ. ಸುಬ್ರಹ್ಮಣ್ಯ ಮಾತನಾಡಿ, ಮಕ್ಕಳಿಗಾಗಿ ವಿಭಿನ್ನವಾಗಿ ನಿರ್ಮಾಣವಾಗಿರುವ ಚಿತ್ರವನ್ನು ಮಕ್ಕಳಿಗೆ ಮುಟ್ಟಿಸಬೇಕು ಎನ್ನುವ ಏಕೈಕ ಕಾರಣಕ್ಕೆ ಹ್ಯಾಂಗ್ಯೋ ಐಸ್‌ ಕ್ರೀಂ ಸಂಸ್ಥೆ ಪ್ರಾಯೋಜಕತ್ವ ತೆಗೆದುಕೊಂಡಿದೆ. ಈ ಚಿತ್ರವನ್ನು ವೀಕ್ಷಿಸಿದ ಹ್ಯಾಂಗ್ಯೋ ಐಸ್‌ ಕ್ರೀಂ ಸಂಸ್ಥೆ ಕಾರ್ಯನಿರ್ವಾಹಕ ಚೇರ್ಮ ನ್‌ ದಿನೇಶ ಪೈ ಅವರು ಚಿತ್ರ ಗ್ರಾಮೀಣ ಭಾಗದ ಮಕ್ಕಳಿಗೂ ತಲುಪಲಿ ಎನ್ನುವ ಉದ್ದೇಶದಿಂದ ಪ್ರಾಯೋಜಕತ್ವ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.