ಕೇರಳ ತಲುಪಿತು ವಾಡಿ ಪರಿಹಾರ


Team Udayavani, Aug 27, 2018, 1:10 PM IST

gul-4.jpg

ವಾಡಿ: ಉಕ್ಕಿ ಹರಿದ ಪ್ರವಾಹದಿಂದ ಬದುಕು ಮೂರಾಬಟ್ಟೆಯಾಗಿ ಅಕ್ಷರಶಃ ಬೀದಿಗೆ ನಿಂತಿರುವ ಕೇರಳ ನೆರೆ ಸಂತ್ರಸ್ತರ ಕಣ್ಣೀರಿಗೆ ಕರಗಿದ ಟೀಂ ಪ್ರಿಯಾಂಕ್‌ ಖರ್ಗೆ ಸದಸ್ಯರು, ಹಗಲು ರಾತ್ರಿ ಎನ್ನದೆ ಜನರಿಗೆ ಆಹಾರ ತಲುಪಿಸುವಲ್ಲಿ ಶ್ರಮಿಸುತ್ತಿದ್ದಾರೆ.

ಚಿತ್ತಾಪುರ ತಾಲೂಕು ವಾಡಿ ಪಟ್ಟಣದಿಂದ ಆ. 21ರಂದು ಲಾರಿಯಲ್ಲಿ ದವಸ ಧಾನ್ಯಗಳನ್ನು ಹೊತ್ತು ಕೇರಳದ ಪ್ರವಾಹ
ಪೀಡಿತ ಪ್ರದೇಶಗಳತ್ತ ತೆರಳಿದ ಟೀಂ ಪ್ರಿಯಾಂಕ್‌ ಖರ್ಗೆ ಹಾಗೂ ಭಾಯ್‌ ಭಾಯ್‌ ಗ್ರೂಪ್‌ನ ಒಟ್ಟು 27 ಜನ ಕಾರ್ಯಕರ್ತರು, ಕಳೆದ ಐದಾರು ದಿನಗಳಿಂದ ಸಂಕಷ್ಟಕ್ಕೀಡಾದ ಜನರ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಅತಿ ಹೆಚ್ಚು ಹಾನಿಗೀಡಾದ ವಿವಿಧ ಪ್ರದೇಶಗಳ ಕಾಡು ದಾರಿಗಳಲ್ಲಿ ಸಂಚರಿಸಿ ಹಸಿವೆಯಿಂದ ತತ್ತರಿಸಿರುವ ನಿರಾಶ್ರಿತರ ಒಡಲಿಗೆ ಅನ್ನ ಒದಗಿಸುವಲ್ಲಿ ಶ್ರಮಿಸುತ್ತಿದ್ದಾರೆ.
 
ಈ ವೇಳೆ ದೂರವಾಣಿ ಮೂಲಕ ಉದಯವಾಣಿಯೊಂದಿಗೆ ಮಾತನಾಡಿದ ಪ್ರಿಯಾಂಕ್‌ ಖರ್ಗೆ ಟೀಂ ಅಧ್ಯಕ್ಷ ಶಮಶೀರ್‌
ಅಹ್ಮದ್‌, ಕೇರಳ ರಾಜ್ಯದ ಜನರ ಜೀವನ ಭಯಾನಕ ಸ್ಥಿತಿಯಲ್ಲಿ ತಲುಪಿದೆ. ಅಲ್ಲಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸಾಕಷ್ಟು ಜನರು ಒಂದೆಡೆ ನೆಲೆನಿಂತಿದ್ದಾರೆ.

ಆದರೆ, ನಿರಾಶ್ರಿತ ಕೇಂದ್ರಗಳಿಗೆ ತೆರಳಲು ದಿಕ್ಕು ತೋಚದೆ ಬಹುತೇಕ ಜನರು ಸಂಕಷ್ಟದಲ್ಲಿದ್ದಾರೆ. ಅಂತಹ ತಾಣಗಳಿಗೆ
ತೆರಳಲು ರಸ್ತೆಗಳಿಲ್ಲ. ನಡೆದುಕೊಂಡು ಹೋಗಿ ಅಲ್ಲಿನ ಜನರಿಗೆ ಆಹಾರ ವಿತರಿಸುವ ಕಾರ್ಯ ಮಾಡುತ್ತಿದ್ದೇವೆ. ಮಳೆಯಿಂದ ಕುಸಿದು ಬಿದ್ದ ಮನೆಗಳ ದುರಸ್ತಿ ಕಾರ್ಯದಲ್ಲೂ ನಾವು ತೊಡಗಿಕೊಂಡಿದ್ದೇವೆ. ಇಲ್ಲಿನ ಜನರ ಬದುಕು ಕಟ್ಟಿಕೊಡಲು ಸಹಾಯಕ್ಕೆ ನಿಲ್ಲುವವರ ಕೊರತೆ ಕಾಡುತ್ತಿದೆ ಎಂದು ಅಲ್ಲಿನ ಚಿತ್ರಣ ಬಿಡಿಸಿಟ್ಟರು.

ಆಹಾರದ ಪೊಟ್ಟಣ ಮಾಡಿ ನಿರಾಶ್ರಿತ ಪ್ರದೇಶಗಳತ್ತ ರವಾನಿಸುತ್ತಿದ್ದೇವೆ. ದಿನ ದಿನಕ್ಕೂ ಒಂದೊಂದು ಸ್ಥಳಗಳಿಗೆ ಭೇಟಿ ನೀಡಿ ಆಹಾರ ಧಾನ್ಯ ವಿತರಿಸುತ್ತಿದ್ದೇವೆ. ಇಲ್ಲಿನ ಕಾಂಗ್ರೆಸ್‌ ಶಾಸಕ ಮೋನ್ಸ್‌ ಜೋಸೆಫ್‌, ಸಮಾಜ ಸೇವಕಿ ಮೇರಿ ಸೇಬಸ್ಟೀನ್‌, ಮನಿಯಾರ ಗ್ರಾಮದ ಗ್ರಾಪಂ ಸದಸ್ಯ ಬೆನೊಯ್‌ ಇಮಾನ್ವೆಲ್‌ ಅವರು ನಮ್ಮ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನಷ್ಟು ದಿನ ಇದ್ದು ಜನರ ಕಷ್ಟಗಳಿಗೆ ಸ್ಪಂದಿಸುವ ಇಚ್ಛೆ ಹೊಂದಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಭಾಯ್‌ ಭಾಯ್‌ ಗ್ರೂಪ್‌ ಅಧ್ಯಕ್ಷ ಮಹ್ಮದ್‌ ಇರ್ಫಾನ್‌, ಸದಸ್ಯರಾದ ಅಸ್ಸಾಂ ರಹೆಮಾನ್‌ ಇನಾಮಾರ್‌, ದೊಡ್ಡಯ್ಯಸ್ವಾಮಿ, ಸಲ್ಮಾನ್‌ ಪಟೇಲ್‌, ತರಬೇಜ್‌ ಅಹ್ಮದ್‌, ಅಬೀದ್‌, ಸರ್ಫರಾಜ್‌, ಇಮ್ರಾನ್‌ ಸೇರಿದಂತೆ ಇತರರು ಸಂತ್ರಸ‚ರಿಗೆ ಆಹಾರ ಸರಬರಾಜು ಮಾಡುವಲ್ಲಿ ಕೈಜೋಡಿಸಿದ್ದಾರೆ.

ಪತ್ರಕರ್ತರ ಸಹಾಯದಿಂದ ನಿರಾಶ್ರಿತ ತಾಣಗಳ ಪತ್ತೆ ಪ್ರವಾಹ ಪೀಡಿತ ಕೇರಳ ರಾಜ್ಯದ ಕೊಟ್ಟಾಯಂ, ಅಲಾಬಿ, ಚಗ್ನಾಚಿ, ಮಾನ್ತಾನಂ, ಕೊಚ್ಚಿ ಹಾಗೂ ಪಲಕಾರ ಎಂಬ ಆರು ಜಿಲ್ಲೆಗಳಲ್ಲಿ ನಮ್ಮ ತಂಡ ಎರಡು ಭಾಗವಾಗಿ ಸಂತ್ರಸ್ತರ ಸೇವೆಯಲ್ಲಿ ತೊಡಗಿದೆ. ಒಂದು ತಂಡ ಆಹಾರ ಸಿದ್ಧತೆಯಲ್ಲಿ ತೊಡಗಿದರೆ, ಮತ್ತೂಂದು ತಂಡ ಆಹಾರ ಪದಾರ್ಥಗಳನ್ನು ಪ್ಯಾಕೆಟ್‌ ಮಾಡಿ ನಿರಾಶ್ರಿತರ ವಾಸಸ್ಥಳಗಳಿಗೆ ತಲುಪಿಸಲು ಶ್ರಮಿಸುತ್ತಿದೆ. ಒಂದು ಲಾರಿ, ಎರಡು ಕಾರು, ಒಂದು ಕ್ರೂಸರ್‌ ವಾಹನದೊಂದಿಗೆ ಆ.21 ರಂದು ವಾಡಿ ಪಟ್ಟಣದಿಂದ ಹೊರಟು 23ರಂದು ಮಧ್ಯಾಹ್ನ ಕೇರಳ ತಲುಪಿದ್ದೇವೆ. 18 ಟನ್‌ ಅಕ್ಕಿ, 2 ಟನ್‌ ತೊಗರಿ ಬೇಳೆ, 2 ಟನ್‌ ಉಪ್ಪು, 500
ಬ್ಲಾಂಕೆಟ್‌, ರಗ್ಗುಗಳು, ಅಡುಗೆ ಎಣ್ಣೆ, ಬಟ್ಟೆ, ಬಿಸ್ಕತ್‌, ಪಿನಾಯಿಲ್‌, ಮಕ್ಕಳಿಗಾಗಿ ಡೈಫರ್‌ ಸಾಮಾಗ್ರಿಗಳನ್ನು ತಂದಿದ್ದೇವೆ.

ಗಂಜಿ ಕೇಂದ್ರಗಳಿಗೆ ಬರುವವರಿಗೆ ಸರಕಾರ ಊಟ ಮತ್ತು ವಸತಿ ಸೌಲಭ್ಯ ಮಾಡುತ್ತಿದೆ. ಗಂಜಿ ಕೇಂದ್ರಗಳಿಗೆ ಬಾರದೆ
ಮನೆಯಲ್ಲಿ ಉಳಿದವರನ್ನು ಗುರುತಿಸಿ ನಮ್ಮ ತಂಡ ಆಹಾರ ತಲುಪಿಸುತ್ತಿದೆ. ನಿರಾಶ್ರಿತರ ಸ್ಥಳಗಳಿಗೆ ತಲುಪಲು ಇಲ್ಲಿನ ಇಬ್ಬರು ಪತ್ರಕರ್ತರು ನಮಗೆ ಸಹಾಯ ಮಾಡುತ್ತಿದ್ದಾರೆ. ನಾವು ಬುಧವಾರ ಕರ್ನಾಟಕಕ್ಕೆ ಮರಳುವ ಸಾಧ್ಯತೆಯಿದೆ ಎಂದುವಾಡಿ ಟೀಂ ಪ್ರಿಯಾಂಕ್‌ ಖರ್ಗೆ ಅಧ್ಯಕ್ಷ ಶಮಶೀರ್‌ ಅಹ್ಮದ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.