ಸಂಗೀತ ವಿದ್ಯಾಲಯದಲ್ಲಿ ಪ್ರತಿಭೆಗಳು ಉದಯಿಸಲಿ: ರಾಜುಗೌಡ


Team Udayavani, Aug 27, 2018, 4:29 PM IST

yad-2.jpg

ಸುರಪುರ: ಜಾತಿ, ಮತ, ಪಂಥ, ವರ್ಗ, ವರ್ಣಗಳನ್ನು ಮೀರಿ ಯಾರಿಗೂ ಊಹಿಸಲಾಗದ, ಮನುಷ್ಯನ ಮನಸ್ಸನ್ನು
ಕೇಂದ್ರಿಸಬಲ್ಲ ಅದ್ಭುತ್‌ ಶಕ್ತಿ ಸಂಗೀತಕ್ಕಿದೆ ಎಂದು ದೇವಾಪುರ ಜಡಿಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠದ ಶಿವಮೂರ್ತಿ ಶಿವಾಚಾರ್ಯರು ಹೇಳಿದರು.

ಇಲ್ಲಿಯ ಜೈರಾಮ ಕಟ್ಟಿಮನಿ ನಿವಾಸದ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿವಶರಣರ ರೇಣುಕಾ ಜ್ಞಾನ ಸಿಂಚನ ಪ್ರಶಸ್ತಿ-2018, ಗ್ರಂಥ ಬಿಡುಗಡೆ ಹಾಗೂ ಶಿವಶರಣೆ ರೇಣುಕಾ ಮಾತೆ ಸಂಗೀತ ವಿದ್ಯಾಲಯ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಸಂದೇಶ ನೀಡಿದರು.

ಸಂಗೀತ ಕೆಲಸ ದೇವರ ಕೆಲಸ. ಅರಮನೆ, ಆಶ್ರಮ, ಮಠ, ಮಂದಿರ, ಶಾಲೆ ಸೇರಿ ಎಲ್ಲಾ ಕಡೆಗಳಲ್ಲಿಯೂ ಪ್ರಾರಂಭಕ್ಕೂ ಮತ್ತು ಅಂತ್ಯಕ್ಕೂ ಸಂಗೀತ ಬೇಕು. ಸಾಹಿತ್ಯ, ಸಂಗೀತ ಹಾಗೂ ಸಂಸ್ಕೃತಿ ಪ್ರೀತಿಸದಿದ್ದರೆ ಮನುಷ್ಯ ಸಮಾಜದಲ್ಲಿ ಸಾಮರಸ್ಯ ಕಾಣಲು ಸಾಧ್ಯವಿಲ್ಲ. ಸಜ್ಜನ್‌, ಪ್ರಾಮಾಣಿಕತೆಯ ಕಟ್ಟಿಮನಿ ಕುಟಂಬ ಇಲ್ಲಿ ಸಂಗೀತ ವಿದ್ಯಾಲಯ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.
 
ಶಾಸಕ ರಾಜುಗೌಡ ಮಾತನಾಡಿ, ಜ್ಞಾನ ಸಿಂಚನ ಪ್ರಶಸ್ತಿ ಪ್ರದಾನ, ಸಂಗೀತ ವಿದ್ಯಾಲಯ ಉದ್ಘಾಟನೆ ಇದೊಂದು ಹೃದಯಸ್ಪರ್ಶಿ ಸಮಾರಂಭ. ಹೆಣ್ಣು ಮನೆ ಬೆಳಗುವ ಜ್ಯೋತಿ. ಮಹಿಳೆಯ ಸೇವೆ, ಪ್ರೀತಿ, ತಾಳ್ಮೆ ಶಕ್ತಿ ವರ್ಣನಾತೀತ. ಮಗಳ ಸವಿ ನೆನಪಿಗಾಗಿ ದೇವಸ್ಥಾನ ಕಟ್ಟಿಸಿ, ಪ್ರಶಸ್ತಿ ಪ್ರದಾನ, ಸಂಗೀತ ಕಾಲೇಜು ಆರಂಭಿಸುತ್ತಿರುವುದು ಪ್ರಶಂಸನೀಯ. 

ಜೈರಾಮ ಕಟ್ಟಮನಿ ಅವರಿಗೆ ಮಗಳ ಮೇಲಿದ್ದ ಪ್ರೀತಿ ನಿಜಕ್ಕೂ ಮೆಚ್ಚುವಂತದ್ದು. ಸಂಗೀತ ವಿದ್ಯಾಲಯದಲ್ಲಿ ಪ್ರತಿಭೆಗಳು ಉದಯಿಸಲಿ ಎಂದ ಅವರು, ಸಂಗೀತಕ್ಕೆ ಮಾನಸಿಕ ನೆಮ್ಮದಿ ಕೊಡುವ ಶಕ್ತಿಯಿದೆ ಎಂದರು.
 
ಕಸಾಪ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಮಾತನಾಡಿ, ಸಂಗೀತ, ಸಾಹಿತ್ಯ ಉಸಿರಾಡಿದ ನೆಲ ಇದು. ಸಂಗೀತ ದೊಡ್ಡ ತಪಸ್ಸು, ಸಂಗೀತ ಪ್ರೀತಿಸುವ ಅನೇಕರು ಇಂದಿಗೂ ಇದ್ದಾರೆ. ಇಲ್ಲಿ ಸಂಗೀತ ಶಾಲೆಯ ಅವಶ್ಯಕತೆ ಇತ್ತು. ರೇಣುಕಾ  ಮಾತೆ ಸಂಗೀತ ವಿದ್ಯಾಲಯದಿಂದ ಒಳ್ಳೆಯ ಪ್ರತಿಭೆಗಳು ಹೊರ ಹೊಮ್ಮಲಿ ಎಂದರು. 

ಶ್ರೀಪ್ರಭು ಪದವಿ ಕಾಲೇಜಿನ ಉಪ ಪ್ರಾಚಾರ್ಯ ವೇಣುಗೋಪಾಲ ಜೇವರ್ಗಿ ಮಾತನಾಡಿದರು. ಹಿರಿಯ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರು ಶ್ರೀರೇಣುಕಾ ಕಾವ್ಯ ಮಂಜರಿ, ತಾಲಾ ತರಂಗ ಗ್ರಂಥಗಳನ್ನು ಜನಾರ್ಪಣೆ ಮಾಡಿ
ಮಾತನಾಡಿದರು. ಅಂಬಣ್ಣ ಜಮಾದಾರ್‌ ಉಪನ್ಯಾಸ ನೀಡಿದರು. ನಿಷ್ಠಿ ಕಡ್ಲಪ್ಪನವರ ವಿರಕ್ತ ಮಠದ ಪ್ರಭುಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದರು. ಜಿಪಂ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪನಾಯಕ (ತಾತಾ), ತಾಳಿಕೋಟೆ ಖಾಸಗತ ಶಿವಯೋಗಿಗಳ ಮಠದ ಸಿದ್ದಲಿಂಗ ದೇವರು, ಜೈರಾಮ ಕಟ್ಟಿಮನಿ, ನಗರಸಭೆ ಸದಸ್ಯ ಪಾರಪ್ಪ ಗುತ್ತೇದಾರ್‌ ವೇದಿಕೆಯಲ್ಲಿದ್ದರು.

ಇದೇ ವೇಳೆ ಶ್ರೀರೇಣುಕಾ ಕಾವ್ಯ ಮಂಜರಿ, ತಾಲಾ ತರಂಗ ಕೃತಿಗಳ ಬಿಡುಗಡೆ ಜರುಗಿತು. ಡಾ| ಎ.ಎಲ್‌. ದೇಸಾಯಿ ಅವರಿಗೆ ಶಿವಶರಣೆ ಶ್ರೀರೇಣುಕಾಮಾತೆ ಜ್ಞಾನ ಸಿಂಚನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಹಿತಿಗಳು, ಸಂಗೀತ ಕಲಾ ಪ್ರೇಮಿಗಳು ಇದ್ದರು. ನಾಡಿನ ಹೆಸರಾಂತ ಸಂಗೀತ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಅಹೋರಾತ್ರಿ ಜರುಗಿತು. ಧಾರವಾಡದ ಸಹನಾ ತಮನಕರ್‌ ಸ್ವಾಗತಿಸಿದರು. ಡಾ| ಮಲ್ಲಿಕಾರ್ಜುನ ಕಮತಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.