ಕಾರ್ಕಳ ಪುರಸಭಾ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ ಫೈಟ್‌


Team Udayavani, Aug 28, 2018, 6:00 AM IST

karakala-election.jpg

ಕಾರ್ಕಳ: ಪುರಸಭೆಯ ಚುನಾವಣೆಗೆ ಸಂಬಂಧಿಸಿದಂತೆ ಕಾರ್ಕಳ ಪುರಸಭೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ಬಿಗುವಿನ ಸ್ಪರ್ಧೆ ಏರ್ಪಟ್ಟಿದೆ. ಜತೆಗೆ ಮೂರ್‍ನಾಲ್ಕು ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳೂ ಪ್ರಬಲರಾಗಿದ್ದು, ರಾಷ್ಟ್ರೀಯ ಪಕ್ಷಗಳಿಗೆ ತೀವ್ರ ಸ್ಪರ್ಧೆ ನೀಡುವ ಉತ್ಸಾಹದಲ್ಲಿದ್ದಾರೆ. 
 
ಕಾರ್ಕಳ ಪುರಸಭೆಯ ಇತಿಹಾಸದಲ್ಲಿಯೇ ಸ್ಪಷ್ಟ ಬಹುಮತದಿಂದ ಬಿಜೆಪಿ ಆಡಳಿತಕ್ಕೆ ಬಂದಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಒಟ್ಟು 23 ವಾರ್ಡ್‌ನಲ್ಲಿ 12 ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ, 11 ವಾರ್ಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಪ್ರಾರಂಭದ ಎರಡೂವರೆ ವರ್ಷ ಕಾಂಗ್ರೆಸ್‌ ಅಡಳಿತ ನಡೆಸಿದೆ. ಆದರೆ ಅನಂತರ ಶಾಸಕರು ಹಾಗೂ ಸಂಸದರ ಗೆಲುವಿನ ಬೆಂಬಲದೊಂದಿಗೆ ಬಿಜೆಪಿ ಆಡಳಿತ ನಡೆಸುವಂತಾಗಿತ್ತು.

ಬಿಜೆಪಿಗೆ ಹಲವು ಬಲ
ಒಂದು ಕಾಲದಲ್ಲಿ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕಾರ್ಕಳದಲ್ಲಿ ಸದ್ಯ ಬಿಜೆಪಿಯ ಪಾರುಪತ್ಯವಿದೆ.  ಶಾಸಕರಿಂದ ಹಿಡಿದು ಜಿ.ಪಂ., ತಾ.ಪಂ., ಗ್ರಾ.ಪಂ.ನಲ್ಲೂ ಬಿಜೆಪಿ ಮುಂದಿದೆ. ಹೀಗಾಗಿ ಅದೇ ರೀತಿ ಈ ಬಾರಿಯ ಪುರಸಭೆಯ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿ ತನ್ನ ಆಡಳಿತದ ತೆಕ್ಕೆಗೆ ತರುವ ಹುಮ್ಮಸ್ಸಿಲ್ಲಿದೆ. ಪೂರಕವಾಗಿ ವಿಧಾನಸಭಾ ಚುನಾವಣೆಯಲ್ಲಿ ನಗರ ಭಾಗದಿಂದ ಹಿಂದಿನ ಚುನಾವಣೆಗಿಂತ ಹೆಚ್ಚು ಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಆದರೆ ಪುರಸಭೆಯ ಚುನಾವಣೆಯಲ್ಲಿ ಅದು ಎಷ್ಟರಮಟ್ಟಿಗೆ ಯಶಸ್ಸು ಸಾಧಿಸಲಿದೆ ಎಂದು ಕಾದು ನೋಡಬೇಕಿದೆ.

ಕಾಂಗ್ರೆಸ್‌ ಸಮರ್ಥ ಅಭ್ಯರ್ಥಿಗಳು
ಕಾರ್ಕಳ ನಗರ ಕಾಂಗ್ರೆಸ್‌ ಪುರಸಭೆಯ ಚುನಾವಣೆಗೆ ಸಂಬಂಧಿಸಿದಂತೆ ಅಧಿಕ ವಾರ್ಡ್‌ಗಳಲ್ಲಿ ಪ್ರಬಲ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್‌ಗೆ ಫ‌ಲ ನೀಡುವ ಸಾಧ್ಯತೆ ಇದೆ. ಜತೆಗೆ ಇತರ ಚುನಾವಣೆಯಲ್ಲಿ ಕಾಂಗ್ರೆಸ್‌ ಹಿಂದೇಟು ಹಾಕಿದ್ದರೂ ಪುರಸಭೆಯನ್ನು ಬಿಜೆಪಿಗೆ ಬಿಟ್ಟುಕೊಟ್ಟಿಲ್ಲ. ಈ ಬಾರಿಯೂ ಬಹುಮತದ ಮೇಲೆ ಕಣ್ಣಿಟ್ಟಿದೆ. ಅದಕ್ಕಾಗಿ ಹಲವು ವಾರ್ಡ್‌ಗಳಲ್ಲಿ ಸಮರ್ಥ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿದ್ದು, ಆ ಮೂಲಕ ತನ್ನ ಇತಿಹಾಸ ಮುಂದುವರಿ ಸುವ ಯೋಜನೆ ರೂಪಿಸಿಕೊಂಡಿದೆ.

ಕುತೂಹಲ ಮೂಡಿಸಿದ ಪಕ್ಷೇತರರರು
ರಾಷ್ಟ್ರೀಯ ಪಕ್ಷಗಳಿಗೆ ತೀವ್ರ ಸ್ಪರ್ಧೆ ನೀಡಲು ಪಕ್ಷೇತರ ಅಭ್ಯರ್ಥಿಗಳೂ ತುದಿಗಾಲಲ್ಲಿ ನಿಂತಿದ್ದಾರೆ. ಬಂಗ್ಲೆಗುಡ್ಡೆ ಕಜೆ ವಾರ್ಡ್‌ನಲ್ಲಿ ಮೊಹಮ್ಮದ್‌ ಶರೀಫ್ ಪಕ್ಷೇತರರಾಗಿ ಕಣದಲ್ಲಿದ್ದರೆ, ಬಿಜೆಪಿಯಿಂದ ವಿಘ್ನೇಶ್‌ ಪ್ರಸಾದ್‌, ಕಾಂಗ್ರೆಸ್‌ನಿಂದ ಅಶºಕ್‌ ಅಹ್ಮದ್‌ ಅಭ್ಯರ್ಥಿಗಳಾಗಿದ್ದಾರೆ. ಶ್ರೀನಿವಾಸನಗರ ಪೆರ್ವಾಜೆ ವಾರ್ಡ್‌ನಲ್ಲಿ ಲಕ್ಷ್ಮೀಕಾಂತ್‌ ಮಲ್ಯ ಪಕ್ಷೇತರರಾಗಿದ್ದರೆ ಬಿಜೆಪಿಯಿಂದ ಯೋಗೀಶ್‌ ನಾಯಕ್‌, ಕಾಂಗ್ರೆಸ್‌ನಿಂದ ರಾಜೇಂದ್ರ ಕುಮಾರ್‌ ಉಮೇದುವಾರಿಕೆ ಸಲ್ಲಿಸಿದ್ದಾರೆ. ಅನಂತಶಯನ ಕಾಲೇಜು ವಾರ್ಡ್‌ನಲ್ಲಿ ಪಕ್ಷೇತರರಾಗಿ ಕೆ. ರಾಘವ ಅಭ್ಯರ್ಥಿಯಾಗಿದ್ದು ಬಿಜೆಪಿಯಿಂದ ವಿಜಯ ಸಫ‌ಳಿಗ, ಕಾಂಗ್ರೆಸ್‌ನಿಂದ ಹರೀಶ್‌ ಕಣದಲ್ಲಿದ್ದಾರೆ. 

ತಾಲೂಕು ಕಚೇರಿ ಕಾಬೆಟ್ಟು ವಾರ್ಡ್‌
ನಲ್ಲಿ ಪಕ್ಷೇತರರಾಗಿ ಸಂಪತ್‌ ನಾಯಕ್‌ ಬಿ. ಇದ್ದರೆ, ಬಿಜೆಪಿಯಿಂದ ಕೆಎಸ್‌ ಹರೀಶ್‌ ಶೆಣೈ, ಕಾಂಗ್ರೆಸ್‌ನಿಂದ ಪ್ರಭಾ ಕಣದಲ್ಲಿದ್ದಾರೆ. ಈ ನಾಲ್ಕೂ ವಾರ್ಡ್‌ಗಳಲ್ಲಿ ಪಕ್ಷೇತರರು ರಾಷ್ಟ್ರೀಯ ಪಕ್ಷಗಳಿಗೆ ಪ್ರಬಲ ಸ್ಪರ್ಧೆ ನೀಡುವುದು ಖಚಿತ ಎನಿಸಿಕೊಂಡಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.