ಯುವಕರು ಕೃಷಿ ವಿಮುಖರಾಗಿದ್ದು ದೇಶಕ್ಕೆ ಸಮಸ್ಯೆ: ಬಾಲಗೊಂಡ


Team Udayavani, Aug 28, 2018, 3:24 PM IST

vij-2.jpg

ವಿಜಯಪುರ: ಪ್ರಸಕ್ತ ಸಂದರ್ಭದಲ್ಲಿ ದೇಶದ ಯುವ ಸಮೂಹ ಕೃಷಿ ವ್ಯವಸ್ಥೆಯಿಂದ ವಿಮುಖರಾಗುತ್ತಿದ್ದು ಭವಿಷ್ಯದ ಭಾರತಕ್ಕೆ ಸಮಸ್ಯೆ ತಂದೊಡ್ಡಲಿದೆ ಪ್ರಗತಿಪರ ರೈತ ಸಿದ್ದು ಬಾಲಗೊಂಡ ಆತಂಕ ವ್ಯಕ್ತಪಡಿಸಿದರು.

ಕೊಲ್ಹಾರ ತಾಲೂಕು ಕೇಂದ್ರದಲ್ಲಿ ಉಪ್ಪಾಶೆಪ್ಪ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ರೈತ ಜಾಗೃತಿ ಜಾತ್ರೆ ಸಾವಯವ ಕೃಷಿ ಸಮಾರಂಭದಲ್ಲಿ ಮಾತನಾಡಿದ ಅವರು, ಆಧುನಿಕ ಜೀವನ ಶೈಲಿಗೆ ಆದ್ಯತೆ ನೀಡುತ್ತಿರುವ ಕಾರಣ ಭಾರತೀಯ ಮೂಲ ಕೃಷಿ ಅಪಾಯಕ್ಕೆ ಸಿಲುಕಿದೆ ಎಂದರು. 

ರೈತ ಜಾಗೃತಿ ಜಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಹರ್ಷಗೌಡ ಪಾಟೀಲ, ಸರ್ಕಾರ ಮಾಡುವಂತಹ ಕೃಷಿ ಮೇಳ, ಅರಣ್ಯ ಕೃಷಿ, ಅರಣ್ಯ ಸಂರಕ್ಷಣೆಯಂತಹ ಕಾರ್ಯಕ್ರಮಗಳನ್ನು ರೈತರು ತಮ್ಮ ಸ್ವಂತ ಖರ್ಚಿನಿಂದ ಹಮ್ಮಿಕೊಂಡಿದ್ದು ಸಂತೋಷದಾಯಕ ವಿಷಯ ಎಂದರು.

ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ಮಾತನಾಡಿ, ಕೃಷಿ ಜಾತ್ರೆಯನ್ನು ಶ್ರಾವಣ ಮಾಸದಲ್ಲಿ ನಡೆಸಿದರೆ ಈ ರೀತಿ ಮಳೆ ಸುರಿಯುವ ಕಾರಣ ರೈತರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಮಸ್ಯೆ ಉಂಟಾಗುತ್ತದೆ. ಹೀಗಾಗಿ ಜನವರಿ ತಿಂಗಳಲ್ಲಿ ನಡೆಸಿದರೆ ರೈತರಿಗೆ ಕೃಷಿ ತಜ್ಞರಿಂದ ಅನುಕೂಲ ಮಾಹಿತಿ ಸಿಗುತ್ತದೆ ಎಂದು ಸಲಹೆ ನೀಡಿದರು.

ಜೆಡಿಎಸ್‌ ಧುರೀಣ ಅಪ್ಪುಗೌಡ ಪಾಟೀಲ ಮಾತನಾಡಿ, ಇಂದಿನ ಯುವಕರು ದುಶ್ಚಟಗಳಿಂದ ತಮ್ಮ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಅನೇಕ ರೈತರು ಅಧಿಕ ಇಳುವರಿ ಪಡೆಯಲು ಅತಿಯಾದ ರಾಸಾಯನಿಕ ಗೊಬ್ಬರಗಳನ್ನು ಬಳಸಿ ವಿಷಯುಕ್ತ ಆಹಾರವನ್ನು ಬೆಳೆಯುತ್ತಿದ್ದಾರೆ. ಆದ್ದರಿಂದ ರೈತರು ಸಾವಯವ ಕೃಷಿಯತ್ತ ಗಮನ ಹರಿಸಿ ವಿಷಮುಕ್ತ ಬೆಳೆಯನ್ನು ಬೆಳೆಯಬೇಕು
ಎಂದರು.

ಅಖೀಲ ಭಾರತ ಸಾವಯವ ಕೃಷಿ ದೃಢೀಕರಣ ಮತ್ತು ಮಾರುಕಟ್ಟೆ ಸಲಹೆಗಾರ ಯೋಗೇಶ ಅಪ್ಪಯ್ಯಜ್ಜ ಮಾತನಾಡಿ, ರೈತರು ಸಾವಯವ ಕೃಷಿ ಬೆಳೆ ಬೆಳೆದರೆ ಸಾಲದು. ಸಾವಯವ ಬೆಳೆಗಳಿಗೆ ಹೆಚ್ಚಿನ ಬೆಲೆ ಸಿಗಬೇಕಾದರೆ ಸಾವಯವ ದೃಢೀಕರಣ ಅಗತ್ಯ ಎಂದರು.
 
ರೋಹಿಣಿ ಬಯೋಟೆಕ್‌ ಕಂಪನಿ ವ್ಯವಸ್ಥಾಪಕ ಎಂ.ವೈ. ಕಟ್ಟಿ ಮಾತನಾಡಿ, ರೈತರು ಮಣ್ಣನ್ನು ಪರೀಕ್ಷಿಸಿಕೊಳ್ಳಿ, ಆಮಣ್ಣಿನಲ್ಲಿ ಹೆಚ್ಚಿನ ಫಲವತ್ತತೆ ಕಾಯ್ದುಕೊಳ್ಳಲು ರೈತರು ಯಾವ ಬೆಳೆ, ಭೂಮಿಗೆ ಎಷ್ಟೆಷ್ಟು ಪ್ರಮಾಣದಲ್ಲಿ ರಾಸಾಯನಿಕ ಬಳಸಬೇಕು ಎಂದು ತಜ್ಞರ ಸಲಹೆ ಮೇರೆಗೆ ಬಳಸಬೇಕು ಎಂದು ಸಲಹೆ ನೀಡಿದರು; ನಾಗಲದಿನ್ನಿಯ ಸದ್ಗುರು ಸದಾನಂದ ಶಿವಯೋಗಿಗಳ ಆಶ್ರಮ ಮಲ್ಲಿಕಾರ್ಜುನ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಈರಪ್ಪ ಬಾಲಗೊಂಡ ಅಧ್ಯಕ್ಷತೆ ವಹಿಸಿದ್ದರು. ಕೃಷಿ ವಿಸ್ತರಣಾಧಿಕಾರಿ ಡಾ| ಆರ್‌.ಬಿ.ಬೆಳ್ಳಿ, ಶಿವಾನಂದ ಮಂಗಾನವರ ಇದ್ದರು.

ಕಾವ್ಯಾ ದೇಸಾಯಿ ಮತ್ತು ಸಂಗಡಿಗರು ರೈತ ಗೀತೆ ಹಾಡಿದರು. ಶಿಕ್ಷಕಿ ಆರ್‌.ಎಸ್‌. ಗಿಡ್ಡಪ್ಪಗೋಳ ನಿರೂಪಿಸಿದರು. ಕೆ.ಎಸ್‌. ಬಾಲಗೊಂಡ ವಂದಿಸಿದರು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.