ಮಳೆಯಲ್ಲೂ ನಿಲ್ಲದ ಮತ ಬೇಟ


Team Udayavani, Aug 28, 2018, 3:37 PM IST

ray-1.jpg

ಮುದ್ದೇಬಿಹಾಳ: ಕನಿಷ್ಠ 18 ಸ್ಥಾನ ಗೆಲ್ಲುವ ಗುರಿ ಇಟ್ಟು ಬಿಜೆಪಿ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಸೋಮವಾರವೂ ಬಿರುಸಿನ ಪ್ರಚಾರ ಮುಂದುವರಿಸಿದರು. ಈ ವೇಳೆ ಮಳೆ ಸುರಿಯುತ್ತಿದ್ದರೂ ಲೆಕ್ಕಿಸದೆ ಮಳೆಯಲ್ಲಿ ನೆನೆದೇ ಬೆಂಬಲಿಗರೊಂದಿಗೆ ಪ್ರಚಾರ ನಡೆಸಿ ಗಮನ ಸೆಳೆದರು.

ಮಹಾಂತೇಶ ನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 4ನೇ ವಾರ್ಡ್‌ ಅಭ್ಯರ್ಥಿ ಬಸವರಾಜ ಮುರಾಳ, ವಾಲ್ಮೀಕಿ ಸರ್ಕಲ್‌ನಿಂದ 5ನೇ ವಾರ್ಡ್‌ ಅಭ್ಯರ್ಥಿ ಹುಲಗಪ್ಪ ನಾಯಕಮಕ್ಕಳ, ರಾಘವೇಂದ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ 6ನೇ ವಾರ್ಡ್‌ ಅಭ್ಯರ್ಥಿ ಲಕ್ಷ್ಮೀಬಾಯಿ ವಾಲೀಕಾರ, ಯಮನೂರಪ್ಪ ಕಟ್ಟೆಯ ಬಳಿಯಿಂದ 16ನೇ ವಾರ್ಡ್‌ ಅಭ್ಯರ್ಥಿ ಬೀಬಿಜಾನ ಬೀಳಗಿ ಪರ ರೋಡ್‌ಶೋ ನಡೆಸಿ, ಮನೆಮನೆಗೆ ತೆರಳಿ ಕರಪತ್ರ ವಿತರಿಸಿ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸುವಂತೆ ಮನವಿ ಮಾಡಿದರು. ಸೋಮನಗೌಡ ಬಿರಾದಾರ ಕವಡಿಮಟ್ಟಿ, ಶರಣು ಬೂದಿಹಾಳಮಠ,
ಬಸವರಾಜ ಗುಳಬಾಳ, ಸಂಗಮೇಶ ವಾಲೀಕಾರ, ಮೋಹನ ಹಂಚಾಟೆ, ಸುಭಾಷ್‌ ಬಿದರಕುಂದಿ, ಹನುಮಂತ ನಲವಡೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

ಜೆಡಿಎಸ್‌ ಪ್ರಚಾರ: ಜೆಡಿಎಸ್‌ ಧುರೀಣೆ ಮಂಗಳಾದೇವಿ ಬಿರಾದಾರ ಸೋಮವಾರ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿ ಮನೆಮನೆಗೆ ತೆರಳಿ ಕರಪತ್ರ ಹಂಚಿ ಮತಯಾಚಿಸಿದರು.

ಈ ಹಿಂದಿನ ಪುರಸಭೆ ಆಡಳಿತದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಗೊಂಡಿದ್ದರು. ಅದೇ ಲೆಕ್ಕಾಚಾರದಲ್ಲಿ ಈ ಬಾರಿಯೂ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಆಯ್ಕೆಗೊಳ್ಳುತ್ತಾರೆ ಎನ್ನುವ ವಿಶ್ವಾಸ ಇದೆ. ರಾಜ್ಯದಲ್ಲಿ ನಮ್ಮದೇ ಪಕ್ಷದ ಆಡಳಿತ ಇದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜನಪರ ಆಡಳಿತ ನೀಡುತ್ತಿದ್ದಾರೆ. ಅವರ ಕೈ ಬಲಪಡಿಸಲು, ಪುರಸಭೆಗೆ ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಬಿಜೆಪಿಗೆ ಅಸಾಧ್ಯ. ಜೆಡಿಎಸ್‌ಗೆ ಅಧಿಕಾರ ಕೊಟ್ಟಲ್ಲಿ ಮಾತ್ರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಶರವೇಗದಲ್ಲಿ ನಡೆಯಲಿದೆ. ಇದಕ್ಕಾಗಿ ಜೆಡಿಎಸ್‌ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಬೇಕು ಎಂದು ಮಂಗಳಾದೇವಿ ಮನವಿ ಮಾಡಿಕೊಂಡರು.

ಧುರೀಣರಾದ ಶಾಂತಗೌಡ ಬಿರಾದಾರ, ಹಿರಿಯ ನ್ಯಾಯವಾದಿ ಜೆ.ಎ. ಚಿನಿವಾರ, ಅರವಿಂದ ಕಾಶಿನಕುಂಟಿ, ರಮೇಶ ಕಮತ, ರವಿ ಬಡಿಗೇರ, ಲಕ್ಷ್ಮಣ ದಾಸರ, ಬಿ.ಎಚ್‌.ಹಾಲಣ್ಣವರ್‌, ಜೆಡಿಎಸ್‌ ಅಭ್ಯರ್ಥಿ ಹರೀಶ ನಾಟೀಕಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
 
ಕಾಂಗ್ರೆಸ್‌ ಪ್ರಚಾರ: ಕಾಂಗ್ರೆಸ್‌ ಅಭ್ಯರ್ಥಿಗಳು ಕೂಡಾ ತಮ್ಮ ಮುಖಂಡರ ಸಮ್ಮುಖದಲ್ಲಿ ಆಯಾ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ್ದು ಅಲ್ಲಲ್ಲಿ ಕಂಡು ಬಂತು. ಕೆಲವು ಬಡಾವಣೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು
ಯಾವುದೇ ನಾಯಕರ ಉಪಸ್ಥಿತಿ ಇಲ್ಲದೆ ಸ್ವತಃ ತಾವೇ, ತಮ್ಮ ಬೆಂಬಲಿಗರೊಂದಿಗೆ ಸ್ವಂತ ಶಕ್ತಿಯ ಬಲದ ಮೇಲೆ ತಿರುಗಾಡಿ ಕರಪತ್ರ ಹಂಚಿ ಮತಯಾಚಿಸುತ್ತಿರುವುದು ಕಂಡುಬಂತು.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.