ಸಾಗರ ಉಪ ಕಾರಾಗೃಹ ಸ್ಥಳಾಂತರಕ್ಕೆ ವಿರೋಧ


Team Udayavani, Aug 28, 2018, 5:12 PM IST

shiv-1.jpg

ಸಾಗರ: ನಗರದ ಉಪ ಕಾರಾಗೃಹವನ್ನು ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಿರುವುದನ್ನು ಖಂಡಿಸಿ
ನಗರದ ಉಪವಿಭಾಗೀಯ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಕರ್ನಾಟಕ ಸೋಷಿಯಲ್‌ ಫ್ರಂಟ್‌ ಸಂಘಟನೆ ಸಹಾಯಕ ಆಯುಕ್ತರ ಮೂಲಕ ರಾಜ್ಯ ಬಂದೀಖಾನೆ ಸಚಿವರಿಗೆ ಪುನಃ ಸಾಗರಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ಮಾತನಾಡಿ, ಉಪ ಕಾರಾಗೃಹವನ್ನು ಸಾಗರದಿಂದ ಶಿವಮೊಗ್ಗಕ್ಕೆ ವರ್ಗಾಯಿಸಿ ಐದು ತಿಂಗಳು ಕಳೆದಿದೆ. ಕಾರಾಗೃಹ ರಿಪೇರಿ ಹೆಸರಿನಲ್ಲಿ ಇಲ್ಲಿದ್ದ ಬಂದಿಗಳನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗಿದೆ. ಜೈಲು ರಿಪೇರಿಯಾಗಿದ್ದರೂ ಈತನಕ ಕೈದಿಗಳನ್ನು ಸಾಗರ ಉಪ ಕಾರಾಗೃಹಕ್ಕೆ ಸ್ಥಳಾಂತರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಹಿಂದೆ ಸಾಗರದಲ್ಲಿದ್ದ ವಾರ್ತಾ ಇಲಾಖೆ, ಸಣ್ಣ ನೀರಾವರಿ ಇಲಾಖೆಯನ್ನು ಅಧಿಕಾರಸ್ಥರ ಒತ್ತಡದಿಂದ
ಬೇರೆಬೇರೆ ಊರುಗಳಿಗೆ ಸ್ಥಳಾಂತರಿಸಲಾಗಿತ್ತು. ಸಾಗರ ಉಪ ವಿಭಾಗದಲ್ಲಿರುವ ಕಾರಾಗೃಹವನ್ನು ಸಹ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಉದ್ದೇಶ ಇದರ ಹಿಂದೆ ಅಡಗಿದೆ ಎನ್ನುವ ಅನುಮಾನ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದು, ತಕ್ಷಣ ಉಪ ಕಾರಾಗೃಹವನ್ನು ಸಾಗರಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸೋಶಿಯಲ್‌ ಫ್ರೆಂಟ್‌ ನಗರ ಘಟಕದ ಅಧ್ಯಕ್ಷ ಇಮ್ರಾನ್‌ ಸಾಗರ್‌ ಮಾತನಾಡಿ, ಸಾಗರದ ಉಪ ಕಾರಾಗೃಹಕ್ಕೆ ಐತಿಹಾಸಿಕ ಹಿನ್ನೆಲೆಯಿದೆ. ಬ್ರಿಟಿಷರ ಕಾಲದಿಂದಲೂ ಈ ಕಾರಾಗೃಹ ತನ್ನದೇ ಆದ ವಿಶೇಷತೆಯನ್ನು ಕಾಯ್ದುಕೊಂಡು ಬಂದಿದೆ. ಇಂತಹ ಉಪ ಕಾರಾಗೃಹವನ್ನು ರಿಪೇರಿ ಹೆಸರಿನಲ್ಲಿ ಶಾಶ್ವತವಾಗಿ ಮುಚ್ಚುವ ಪ್ರಯತ್ನ
ನಡೆಯುತ್ತಿದೆ. ಸಾಗರ ಉಪ ಕಾರಾಗೃಹದಲ್ಲಿದ್ದ ಬಂದಿಗಳನ್ನು ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವುದರಿಂದ ಬಂದಿಗಳ ಸಂಬಂಧಿಗಳು ತಮ್ಮವರನ್ನು ಭೇಟಿಯಾಗಲು ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದರು.

ಶಿವಮೊಗ್ಗ ಬಸ್‌ ನಿಲ್ದಾಣದಿಂದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಹೋಗಲು ಆಟೋ ಚಾರ್ಜ್‌ 200ರಿಂದ 300 ರೂ. ತೆತ್ತಬೇಕಾಗಿದೆ. ಬಡಬಗ್ಗರು ಕೈದಿಗಳನ್ನು ನೋಡಲು ಹೋಗಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.
ಸಾಗರ ಉಪ ಕಾರಾಗೃಹಕ್ಕೆ ಸಾಗರ ಸೇರಿದಂತೆ ಹೊಸನಗರ, ಸೊರಬ ತಾಲೂಕುಗಳು ಸೇರುತ್ತಿದ್ದು, ಹತ್ತಕ್ಕೂ ಹೆಚ್ಚು ನ್ಯಾಯಾಲಯ, ಪೊಲೀಸ್‌ ಠಾಣೆ ಬರುತ್ತದೆ. ಈ ಎಲ್ಲ ತಾಲೂಕಿನ ಕೈದಿಗಳ ಸಂಬಂಧಿಕರಿಗೂ ಇದರಿಂದ ತೊಂದರೆಯಾಗುತ್ತಿದೆ. ತಕ್ಷಣ ಸಾಗರ ಉಪ ಕಾರಾಗೃಹದಲ್ಲಿದ್ದ ಕೈದಿಗಳನ್ನು ಇಲ್ಲಿಗೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಪ್ರಜಾವಿಮೋಚನಾ ಮಾನವತಾವಾದ ಸಂಸ್ಥೆಯ ನಾಗರಾಜ ಸ್ವಾಮಿ, ಕರ್ನಾಟಕ ಸೋಶಿಯಲ್‌ ಫ್ರೆಂಟ್‌ನ ಗೌರವಾಧ್ಯಕ್ಷ ಆರೀಫ್‌, ಉಪಾಧ್ಯಕ್ಷ ರಫಿಕ್‌ ಕೊಪ್ಪ, ನಸುರುಲ್ಲಾ, ಪ್ರಧಾನ ಕಾರ್ಯದರ್ಶಿ ಅಂಕರವಳ್ಳಿ ಹನೀಫ್‌, ಇಲಿಯಾಸ್‌, ಸಫಾನ್‌, ಪ್ರಮುಖರಾದ ಪ್ರಕಾಶ್‌ ಗೌಡ, ರವಿ ಲಿಂಗನಮಕ್ಕಿ, ಸದ್ದಾಂ, ವಸೀಂ ಇತರರು ಇದ್ದರು

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.