ನಗರದಲ್ಲಿ ವೈದ್ಯಕೀಯ ಸೀಟು ಕೊಡಿಸುವ ವಂಚಕ ಟೀಂ ಸಕ್ರಿಯ


Team Udayavani, Aug 29, 2018, 12:33 PM IST

nagaradalli.jpg

ಬೆಂಗಳೂರು: ಪ್ರತಿಷ್ಠಿತ ಮೆಡಿಕಲ್‌ ಕಾಲೇಜುಗಳಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ಪಡೆದು ವಂಚಿಸುವ ತಂಡ ರಾಜಧಾನಿಯಲ್ಲಿ ಪುನಃ ಸಕ್ರಿಯಗೊಂಡಿದೆ. ಪಶ್ಚಿಮ ಬಂಗಾಳದ ಇಬ್ಬರು ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ ನಂಬಿಸಿ 49ಲಕ್ಷ ರೂ. ಪಡೆದು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೇಂದ್ರ ವಿಭಾಗದಲ್ಲಿ ಕಳೆದ 20 ದಿನಗಳ ಅಂತರದಲ್ಲಿ ನಡೆದ ಮೂರನೇ ವಂಚನೆ ಪ್ರಕರಣ ಇದಾಗಿದೆ.

ವಂಚಕರಿಗೆ 49. 97ಲಕ್ಷ ರೂ. ನೀಡಿ ಮೋಸಹೋಗಿರುವ ರಾಯ್‌ಗಂಜ್‌ನ ಉದ್ಯಮಿ ರಿಯಾಝುರ್‌ ರೆಹಮಾನ್‌, ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿಗಳಾದ ಸಾಜೀದ್‌ ಖಾನ್‌, ಸಂದೀಪ್‌ ಅಗರ್‌ವಾಲ್‌ ಬಂಧನಕ್ಕೆ ಬಲೆ ಬೀಸಿದ್ದಾರೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಬಿಎಸ್‌ ವಿದ್ಯಾಭ್ಯಾಸ ಮಾಡುವ ಕನಸು ಹೊಂದಿದ ನೆರೆರಾಜ್ಯದ ವಿದ್ಯಾರ್ಥಿಗಳನ್ನೇ ಟಾರ್ಗೆಟ್‌ ಮಾಡಿಕೊಂಡಿರುವ ವಂಚಕರ ತಂಡ, ಮೊದಲು ಮೊಬೈಲ್‌ಗೆ ಸಂದೇಶ ಕಳುಹಿಸಿ ಕಡಿಮೆ ಮೊತ್ತಕ್ಕೆ ಸೀಟು ಕೊಡಿಸುವ ನೆಪವೊಡ್ಡಿ ಬಲೆಗೆ ಕೆಡುವುತ್ತಿದ್ದಾರೆ. ಬಳಿಕ ಬೆಂಗಳೂರಿಗೆ ಕರೆಸಿಕೊಂಡು ಸ್ಟಾರ್‌ ಹೋಟೆಲ್‌ಗ‌ಳಲ್ಲಿಯೇ ಹಣ ಪಡೆದು ವಂಚಿಸಿ ಪರಾರಿಯಾಗುತ್ತಿದ್ದಾರೆ.

ಕೊಲ್ಕತ್ತಾದಲ್ಲಿ ಕಚೇರಿ: ದೂರುದಾರ ರಿಯಾಝುರ್‌ ರೆಹಮಾನ್‌ ಮೊಬೈಲ್‌ಗೆ ಜುಲೈ 6ರಂದು ಮಿನರ್ವ ನಾಲೆಡ್ಜ್ ಅಂಡ್‌ ಸರ್ವೀಸ್‌ ಹೆಸರಿನಲ್ಲಿ ಮೆಸೇಜ್‌ ಬಂದಿದ್ದು, 48 ಲಕ್ಷ ರೂ.ಗಳಿಗೆ ಪ್ರತಿಷ್ಠಿತ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಕೊಡಿಸುವ ವಿವರಣೆಯಿತ್ತು. ಹೀಗಾಗಿ, ರೆಹಮಾನ್‌, ಮೆಸೇಜ್‌ ಕಳುಹಿಸಿದ್ದ ಸಾಜೀದ್‌ ಖಾನ್‌ಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಸೀಟು ಕೊಡಿಸುವ ಬಗ್ಗೆ ಅಗ್ರಿಮೆಂಟ್‌ ಮಾಡಿಕೊಳ್ಳುವ ಸಲುವಾಗಿ ಕಲ್ಕತ್ತಾ ನ್ಯೂಟೌನ್‌ನಲ್ಲಿರುವ ಕಚೇರಿಗೆ ಬರುವಂತೆ ತಿಳಿಸಿದ್ದಾನೆ.

 ತಮ್ಮ ಮಗನಿಗೆ ಸೀಟು ಸಿಗುವ ಭರವಸೆಯಿಂದ ರೆಹಮಾನ್‌, ಮಗನ ವೈದ್ಯಕೀಯ ಸೀಟಿಗೆ ಪರದಾಡುತ್ತಿದ್ದ ಸ್ನೇಹಿತ ಅಖೆ¤àರ್‌ ತಾಲೂಕ್‌ಧರ್‌ಗೂ ಮಾಹಿತಿ ನೀಡಿದ್ದಾರೆ. ಬಳಿಕ ಇಬ್ಬರೂ ಆರೋಪಿ ಹೇಳಿದ್ದ ವಿಳಾಸಕ್ಕೆ ಜುಲೈ 17ರಂದು ತೆರಳಿದ್ದು ಎರಡು ಸೀಟುಗಳಿಗೆ ಆರಂಭಿಕವಾಗಿ 4.32ಲಕ್ಷ ರೂ.ಗಳ ಚೆಕ್‌ ನೀಡಿದ್ದಾರೆ. ಈ ವೇಳೆ ಆರೋಪಿ ರಾಜೀವ್‌ಗಾಂಧಿ ಆರೋಗ್ಯ ವಿ.ವಿಯಲ್ಲಿ ಸೀಟು ಕೊಡಿಸುವ ಭರವಸೆ ನೀಡಿದ್ದಾರೆ.

ಹಣ ಪಡೆದು ಪರಾರಿ!: ಇದಾದ ಕೆಲವೇ ದಿನಗಳಲ್ಲಿ ರೆಹಮಾನ್‌ಗೆ ಕರೆ ಮಾಡಿದ ಸಾಜೀದ್‌ಖಾನ್‌ ಆ. 12ರಂದು ಬಿಜಿಎಸ್‌ ಕಾಲೇಜಿನಲ್ಲಿ ಕೌನ್ಸಿಲಿಂಗ್‌ ನಡೆಯುತ್ತಿದ್ದು, ಹಣ ತೆಗೆದುಕೊಂಡು ಬೆಂಗಳೂರಿಗೆ ಬನ್ನಿ ಎಂದಿದ್ದಾನೆ. ಹೀಗಾಗಿ ರೆಹಮಾನ್‌ ಸ್ನೇಹಿತನನ್ನು ಕರೆದುಕೊಂಡು ಸ್ಯಾಂಕಿ ರಸ್ತೆಯಲ್ಲಿರುವ ಪಂಚತಾರಾ ಹೋಟೆಲ್‌ನ ರೂಂ. 153ಗೆ ತೆರಳಿದ್ದಾರೆ. ಅಲ್ಲಿದ್ದ ಆರೋಪಿಗಳು ವಿದ್ಯಾರ್ಥಿಗಳಿಬ್ಬರ ದಾಖಲೆಗಳನ್ನು ಪಡೆದುಕೊಂಡು 44.97ಲಕ್ಷ ರೂ ಹಣ ಪಡೆದು ಕಾಲೇಜು ಬಳಿ ಹೋಗಿ ಬರುತ್ತೇವೆ ಎಂದು ಹೇಳಿ ಪರಾರಿಯಾಗಿದ್ದಾರೆ.

ಅನುಮಾನಗೊಂಡು ಕರೆ ಮಾಡಿದಾಗ ಕರೆ ಮಾಡಿದಾಗ ಆರೋಪಿಗಳು ನೀಡಿದ್ದ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಬಂದಿದೆ. ಹೀಗಾಗಿ, ಹೋಟೆಲ್‌ ತೊರೆಯಲು ಹೋದಾಗ ಅವರ ಹೆಸರಿನಲ್ಲಿಯೇ ರೂಂ ಬುಕ್‌ ಮಾಡಿರುವುದು ಗೊತ್ತಾಗಿದೆ. ರೂಂ ಬಾಡಿಗೆ ಸಹ ಪಾವತಿಸಿ ಬಿಜಿಎಸ್‌ ಕಾಲೇಜು ಬಳಿ ತೆರಳಿದಾಗ ಯಾವುದೇ ಸೀಟು ಇಲ್ಲ ಎಂದಿದ್ದಾರೆ. ಒಬ್ಬರು ಪಶ್ಚಿಮ ಬಂಗಾಳಕ್ಕೆ ತೆರಳಿ ಆರೋಪಿಗಳ ಕಚೇರಿ ಪರಿಶೀಲಿಸಿದಾಗ ಬೀಗ ಹಾಕಿತ್ತು. ಹೀಗಾಗಿ ವಾಪಾಸ್‌ ಬಂದು ದೂರು ನೀಡಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ವಿವರಿಸಿದರು.

ಆಗಸ್ಟ್‌ 13ರಂದು ಇಬ್ಬರು ವಂಚಕರು ಹರ್ಯಾಣ ಮೂಲದ ವ್ಯಕ್ತಿಯೊಬ್ಬರಿಂದ ಕಿಮ್ಸ್‌ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಕೊಡಿಸುವುದಾಗಿ 21.50 ಲಕ್ಷ ರೂ. ಪಡೆದು ವಂಚಿಸಿದ್ದಾರೆ. ಅದೇ ರೀತಿ ಆಗಸ್ಟ್‌ 18ರಂದು ತಮಿಳುನಾಡು ಮೂಲದ ವಿದ್ಯಾರ್ಥಿ ಕಡಲೇಶ್ವರ್‌ ಎಂಬ ವಿದ್ಯಾರ್ಥಿ ಕೂಡ ಅಪರಿಚಿತ ವಂಚಕರ ಮಾತು ನಂಬಿ 9.4 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಎರಡೂ ಪ್ರತ್ಯೇಕ ಪ್ರಕರಣಗಳನ್ನು ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಗರದಲ್ಲಿ ಒಂದೇ ತಂಡ ಮೆಡಿಕಲ್‌ ಸೀಟು ಕೊಡಿಸುವ ನೆಪದಲ್ಲಿ ಹಣ ಪಡೆದು ವಂಚಿಸುತ್ತಿರುವ ಸಾಧ್ಯತೆಯಿದ್ದು, ತನಿಖೆ ಮುಂದುವರಿಸಲಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ.
-ಡಿ.ದೇವರಾಜು, ಕೇಂದ್ರ ವಿಭಾಗ ಡಿಸಿಪಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.