ಚರಂಡಿ ವ್ಯವಸ್ಥೆ : ದುರ್ವಾಸನೆಗೆ ಹೈರಾಣಾದ ಗೋಧಿಹಿತ್ಲು ನಿವಾಸಿಗರು


Team Udayavani, Aug 30, 2018, 6:00 AM IST

2808kdpp5.jpg

ಗಂಗೊಳ್ಳಿ: ಚರಂಡಿಯಿದೆ. ಆದರೆ ಮಳೆ ನೀರು ಮಾತ್ರ ಹರಿದು ಹೋಗುತ್ತಿಲ್ಲ. ಚರಂಡಿಯಲ್ಲೇ ಕಸ, ಕಡ್ಡಿ, ಪ್ಲಾಸ್ಟಿಕ್‌ ತ್ಯಾಜ್ಯ ಶೇಖರಣೆಗೊಂಡು ಕೊಳಚೆ ನೀರು ಸಂಗ್ರಹವಾಗಿದೆ. ಇದರಿಂದ ನಿತ್ಯ ಅನೇಕ ದಿನಗಳಿಂದ ಗಂಗೊಳ್ಳಿಯ ಮ್ಯಾಂಗನೀಸ್‌ ರಸ್ತೆಯಲ್ಲಿರುವ ಗೋಧಿಹಿತ್ಲು ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. 

ಮ್ಯಾಂಗನೀಸ್‌ ರಸ್ತೆಯಲ್ಲಿರುವ ಗೋಧಿಹಿತ್ಲುವಿನಲ್ಲಿ ಸುಮಾರು 25ರಿಂದ 30 ಮನೆಗಳಿವೆ. ಮಳೆ ನೀರು ಹೋಗಲು ಚರಂಡಿಯಿದೆ. ಆದರೆ ಈ ಚರಂಡಿಯನ್ನು ಸರಿಯಾಗಿ ನಿರ್ವಹಿಸದ ಹಿನ್ನೆಲೆಯಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಸ್ವತ್ಛ ಮಾಡದ ಹಿನ್ನೆಲೆಯಲ್ಲಿ ನೀರು ಹರಿದು ಹೋಗುತ್ತಿಲ್ಲ. ಗೋಧಿಹಿತ್ಲು ಪರಿಸರದಲ್ಲಿಯೇ ಶೇಖರಣೆಯಾಗಿ ಕೊಳಚೆಯಾಗಿದೆ. 

ದುರ್ವಾಸನೆಗೆಂದು ಮುಕ್ತಿ
ಚರಂಡಿಯಲ್ಲಿ ಕೊಳಚೆ ನೀರು ನಿಂತು ಈ ಗೋಧಿಹಿತ್ಲು ಪರಿಸರವಿಡೀ ದುರ್ವಾಸನೆ ಬರುತ್ತದೆ. ಇದರಿಂದ ದಿನವಿಡೀ ಇಲ್ಲಿನ ನಿವಾಸಿಗಳು ಮನೆ, ಕಿಟಕಿ ಬಾಗಿಲು ಮುಚ್ಚಿಕೊಂಡೇ ಇರಬೇಕಾದ ದುಃಸ್ಥಿತಿಯಿದೆ. ಬಾಗಿಲು ಮುಚ್ಚಿದರೂ ಈ ದುರ್ವಾಸನೆ ಮಾತ್ರ ಹೋಗುವುದಿಲ್ಲ ಎನ್ನುವುದು ಸ್ಥಳೀಯರ ಅಳಲು. 

ಈ ಸಂಬಂಧ ಹಿಂದೆ ಆಗಿನ ಶಾಸಕರಿಗೂ ಮನವಿ ಕೊಟ್ಟಿದ್ದರು. ಆ ಬಳಿಕ ಚುನಾವಣೆ ಬಂದಿದ್ದರಿಂದ ಇದಕ್ಕೆ ಪರಿಹಾರ ಕಂಡಿಲ್ಲ. ಈಗಿನ ಶಾಸಕರಾದರೂ ನಮ್ಮ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಲಿ ಎಂಬುದು ಇಲ್ಲಿನ ನಿವಾಸಿಗಳ ಆಗ್ರಹವಾಗಿದೆ.

ಸಾಂಕ್ರಾಮಿಕ ರೋಗ ಭೀತಿ
ಚರಂಡಿಯಲ್ಲಿ ಕೊಳಚೆ ನೀರು ನಿಂತು ಈ ಗೋಧಿಹಿತ್ಲು ಪ್ರದೇಶ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಡಾಗುತ್ತಿದೆ. ಇದರಿಂದ ಇಲ್ಲಿನ ವಾಸಿಗರಲ್ಲಿ ಸಾಂಕ್ರಾಮಿಕ ರೋಗ ಭೀತಿ ಆವರಿಸಿದೆ. 

ಪರಿಶೀಲಿಸಿ ಕ್ರಮ
ಈ ಸಂಬಂಧ ಸ್ಥಳೀಯರು ಕೊಟ್ಟ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಅಲ್ಲಿಗೆ ತೆರಳಿ ಪರಿಶೀಲನೆ ನಡೆಸುತ್ತೇನೆ. ತತ್‌ಕ್ಷಣ ಅಲ್ಲಿನ ಜನರ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. 
– ಮಾಧವ,ಗಂಗೊಳ್ಳಿ ಪಿಡಿಒ

ನಿತ್ಯ ಸಂಕಷ್ಟ
ಊಟ ಮಾಡಲು ಕುಳಿತರೆ ಹೊರಗಿನಿಂದ ಕೆಟ್ಟ ವಾಸನೆ ಬರುತ್ತದೆ. ಊಟವು ಸರಿಯಾಗಿ ಮಾಡುವುದಕ್ಕೆ ಆಗುವುದಿಲ್ಲ. 1 ವರ್ಷದ ಮಗುವಿಗೆ ಹುಷಾರಿಲ್ಲದೆ ರಾತೋರಾತ್ರಿ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಾಯಿತು. ಮನೆಯಲ್ಲಿರುವ ಎಲ್ಲ ಮಕ್ಕಳಿಗೂ ಹುಷಾರಿಲ್ಲ. ದಿನಾ ಈ ದುರ್ವಾಸನೆಯಿಂದ ಸಂಕಷ್ಟ ಅನುಭವಿಸುತ್ತಿದ್ದೇವೆ. 
– ಸಾವಿತ್ರಿ, ಅರ್ಚನಾ,ಸುಧಾ,ಸ್ಥಳೀಯರು 

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.