ಮಲೆನಾಡಲ್ಲಿ ಮತ್ತೆ ಮಳೆ
Team Udayavani, Aug 30, 2018, 6:40 AM IST
ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಮುಂದುವರಿದಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಬ್ರಹ್ಮಣ್ಯದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ. ಮಳೆ ಸುರಿಯಿತು.
ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಪುನ: ಆರಂಭಗೊಂಡಿದ್ದು, ಮಂಗಳವಾರ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾ, ಶರಾವತಿ,ನೇತ್ರಾವತಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತರೀಕೆರೆ ತಾಲೂಕು ಸೀತಾಪುರ ಕಾವಲ್ನಲ್ಲಿ ಮಳೆಯಿಂದಾಗಿ 5 ಮನೆಗಳಿಗೆ ಹಾನಿಯಾಗಿದೆ. ನಾರಾಯಣಪುರ
ಜಲಾಶಯದಿಂದ ಏಕಾಏಕಿ ಕೃಷ್ಣಾ ನದಿಗೆ ನೀರು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆ ಚಿಂಚೋಡಿ ಬಳಿ ನದಿಯ ನಡುಗಡ್ಡೆಯಲ್ಲಿ ಸುಮಾರು 15 ಜನ ಸಿಲುಕಿಕೊಂಡರು. ಈ ಪೈಕಿ 12 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಮೂವರು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಮಧ್ಯೆ, ಜಲಾನಯನ ಪ್ರದೇಶವ್ಯಾಪ್ತಿಯಲ್ಲಿ ಮಳೆಯಾದ ಕಾರಣ ಸೂಫಾ ಅಣೆಕಟ್ಟಿನಿಂದ 3 ಕ್ರಸ್ಟ್ಗೇಟ್ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
ಈ ಮಧ್ಯೆ, ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ
ಸುರಿಯುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ