ಕಸ್ತೂರಿರಂಗನ್‌ ವರದಿ: ಕೇಂದ್ರ ಸರಕಾರದ ನಿಲುವಿನೆಡೆ ಚಿತ್ತ


Team Udayavani, Aug 30, 2018, 6:00 AM IST

kasturi-rangan-report.jpg

ಬೆಂಗಳೂರು: ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂಬುದಾಗಿ ಪರಿಗಣಿಸುವ ಕಸ್ತೂರಿ ರಂಗನ್‌ ವರದಿ ಕುರಿತಂತೆ ಮೂರನೇ ಬಾರಿ ಹೊರಡಿಸಿದ ಕರಡು ಅಧಿಸೂಚನೆಯ ಅವಧಿಯೂ ಮುಗಿದು ಅದು ರದ್ದುಗೊಂಡಿರುವುದರಿಂದ ಪ್ರಕರಣದಲ್ಲಿ ಕೇಂದ್ರ ಸರಕಾರ ಕೈಗೊಳ್ಳಬಹುದಾದ ತೀರ್ಮಾನ ಕುತೂಹಲ ಕೆರಳಿಸಿದೆ.

ನಿಯಮದಂತೆ ಈಗ ಮತ್ತೆ ಹೊಸದಾಗಿ ಕರಡು ಅಧಿಸೂಚನೆ ಹೊರಡಿಸಬೇಕು. ಆದರೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರು ವುದರಿಂದ ಏನೇ ನಿರ್ಧಾರ ಕೈಗೊಳ್ಳುವುದಿದ್ದರೂ ಕೋರ್ಟ್‌ನ ಗಮನಕ್ಕೆ ತರಬೇಕಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ನ ಮುಂದೆ ಕಸ್ತೂರಿರಂಗನ್‌ ವರದಿ ಜಾರಿ ಕುರಿತು ಯಾವ ರೀತಿಯ ಅಭಿಪ್ರಾಯ ತಿಳಿಸಲಿದೆ ಎಂಬುದರ ಆಧಾರದ ಮೇಲೆ ಮುಂದಿನ ಬೆಳವಣಿಗೆ ಅವಲಂಬಿಸಿರುತ್ತದೆ.

ಕಸ್ತೂರಿರಂಗನ್‌ ವರದಿ ಜಾರಿಗೊಳಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶ  ನೀಡುವಂತೆ ಕೋರಿ ಕೆಲವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಈ ವೇಳೆ ಪಶ್ಚಿಮಘಟ್ಟ ವ್ಯಾಪ್ತಿಗೆ ಬರುವ ರಾಜ್ಯಗಳ ಅಭಿಪ್ರಾಯ ಪಡೆದು ಕಸ್ತೂರಿರಂಗನ್‌ ವರದಿ ಜಾರಿಗೊಳಿಸುವ ಬಗ್ಗೆ ಕೇಂದ್ರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ವರದಿಯ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿ 2014ರಲ್ಲಿ ಮೊದಲ ಕರಡು ಅಧಿಸೂಚನೆ ಹೊರಡಿಸಿತ್ತು. ಈ ವೇಳೆ ಎಲ್ಲ ರಾಜ್ಯಗಳು ವರದಿ ಜಾರಿಯನ್ನು ಸಾರಾಸಗಟಾಗಿ ವಿರೋಧಿಸಿದ್ದರಿಂದ 2015ರ ಸೆಪ್ಟಂಬರ್‌ನಲ್ಲಿ ಎರಡನೇ ಬಾರಿ ಅಧಿಸೂಚನೆ ಹೊರಡಿಸಲಾಗಿತ್ತು. 

ಈ ಬಾರಿ ಕೆಲ ಸರಕಾರಗಳು ಮಾರ್ಪಾಡುಗಳೊಂದಿಗೆ ವರದಿ ಜಾರಿಗೆ ಒಪ್ಪಿಗೆ ಸೂಚಿಸಿ ಆಕ್ಷೇಪಣೆ ಸಲ್ಲಿಸಿದ್ದವು. ಈ ವೇಳೆ ಕರ್ನಾಟಕ ಮತ್ತು ತಮಿಳುನಾಡಿನ ಆಕ್ಷೇಪಣೆಗಳು ತಿರಸ್ಕೃತಗೊಂಡಿದ್ದವು.

ಈ ಕರಡು ಆಧರಿಸಿ ಅಂತಿಮ ಅಧಿಸೂಚನೆ ಹೊರಡಿಸಲು ಸಾಧ್ಯವಿಲ್ಲ. ಆದ್ದರಿಂದ ಕೇಂದ್ರ ಮತ್ತೂಮ್ಮೆ ಕರಡು ಅಧಿಸೂಚನೆ ಹೊರಡಿಸಿ ರಾಜ್ಯಗಳ ಅಭಿಪ್ರಾಯ ಆಲಿಸಬೇಕಾಗುತ್ತದೆ. ಆದರೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಕೋರ್ಟ್‌ ನಿರ್ಧಾರವನ್ನು  ಅದು ಅವಲಂಬಿಸಿರುತ್ತದೆ. ಒಂದೊಮ್ಮೆ ಈಗಾಗಲೇ ಹೊರಡಿಸಿರುವ ಕರಡು ಅಧಿಸೂಚನೆ ಆಧರಿಸಿ ಅಂತಿಮ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಿದರೆ ಕೇಂದ್ರ ಅದನ್ನು ಪಾಲಿಸಬೇಕಾಗುತ್ತದೆ. ಇಲ್ಲವೇ ಮುಂದಿನ ಕ್ರಮ ಕೈಗೊಳ್ಳಲು ಅವಕಾಶ ನೀಡಿದರೆ ಆಗ ಕೇಂದ್ರ ಸರಕಾರ ಯಾವುದೇ ತೀರ್ಮಾನ ಕೈಗೊಳ್ಳಲು ಮುಕ್ತ ಮಾರ್ಗ ಸೃಷ್ಟಿಯಾದಂತಾಗುತ್ತದೆ ಎನ್ನುತ್ತಾರೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು.

ನಿಲುವು ಬದಲಿಲ್ಲ: ರಾಜ್ಯ
ಭಾರೀ ಮಳೆಗೆ ಕೊಡಗು ಸಹಿತ ಮಲೆನಾಡು ಭಾಗದಲ್ಲಿ ಸಾಕಷ್ಟು ಅನಾಹುತ ಸಂಭವಿಸಿದರೂ ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳಲ್ಲಿ ಕಸ್ತೂರಿರಂಗನ್‌ ಜಾರಿ ಬೇಡ ಎಂಬ ತನ್ನ ನಿರ್ಧಾರದಿಂದ ಹಿಂದೆ ಸರಿಯದಿರಲು  ರಾಜ್ಯ ಸರಕಾರ ತೀರ್ಮಾನಿಸಿದೆ. ಕೇಂದ್ರ ಸರಕಾರದ ಅರಣ್ಯ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅರಣ್ಯ ಕಾಯ್ದೆಗಳು ಜಾರಿಯಲ್ಲಿವೆ. ಅವುಗಳ ಆಧಾರದ ಮೇಲೆ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ರಾಜ್ಯ ಸರಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ವರದಿ ಜಾರಿಯಾದರೆ ಜನವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತದೆ. ವರದಿ ಜಾರಿಗೊಳಿಸುವುದಿದ್ದರೂ ಪಶ್ಚಿಮಘಟ್ಟ ವ್ಯಾಪ್ತಿಗೆ ಬರುವ ರಾಜ್ಯದ 20,688 ಚದರ ಕಿ.ಮೀ. ಪೈಕಿ ಜನವಸತಿ ಇರುವ 1571 ಚದರ ಕಿ.ಮೀ. ಪ್ರದೇಶವನ್ನು ಅಧಿಸೂಚನೆಯಿಂದ ಕೈಬಿಡಬೇಕೆಂಬುದು ಸರಕಾರದ ನಿಲುವಾಗಿದೆ.

ಯಾವ ರಾಜ್ಯದಲ್ಲಿ ಎಷ್ಟು?
ಒಟ್ಟು ಚದರ ಕಿ.ಮೀ.ಗಳಲ್ಲಿ 56824
ಗುಜರಾತ್‌:448
ಮಹಾರಾಷ್ಟ್ರ:17,340
ಕರ್ನಾಟಕ :20,668
ಗೋವಾ :1,461
ತಮಿಳುನಾಡು:6,914
ಕೇರಳ: 9,993

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.