ಸಮಾಜಕ್ಕೆ ಮುರುಘಾಮಠ ಶ್ರೀಗಳ ಕೊಡುಗೆ ಅಪಾರ


Team Udayavani, Aug 30, 2018, 10:13 AM IST

shiv-2.jpg

ಆನಂದಪುರ: ಮಲೆನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳ ಕೊಡುಗೆ ಅವಿಸ್ಮರಣೀಯವಾದುದು. ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭೂಮಿಕೆ ಶ್ರೀಗಳದ್ದಾಗಿದೆ ಎಂದು ಮೂಲೆಗದ್ದೆಯ ಶಿವಯೋಗಾನಂದ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಅವರು ಪಟ್ಟಣದ ಮುರುಘರಾಜೇಂದ್ರಮಠಕ್ಕೆ ಪೀಠಾಧ್ಯಕ್ಷ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಲು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದರು. ವಸತಿ ನಿಲಯ, ಪ್ರಸಾದ ನಿಲಯ,
ಸಂಸ್ಕೃತ ಪಾಠಶಾಲೆ, ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ, ಊಟದ ವ್ಯವಸ್ಥೆ, ಇತಿಹಾಸ ಪರಂಪರೆಯ ಸಂರಕ್ಷಣೆಗೆ ಶಿವಪ್ಪನಾಯಕ ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಪ್ರತಿಷ್ಠಾನ, ಗುರುಬಸವ ಅಧ್ಯಯನ ಪೀಠದಿಂದ ಹಲವಾರು ಪುಸ್ತಕ ಪ್ರಕಟಣೆ, ಕ್ರೀಡಾ ಕ್ಷೇತ್ರದಲ್ಲಿ ಸಹ್ಯಾದ್ರಿ ಜೂಡೋ ಅಕಾಡೆಮಿ, ಕೃಷಿ ಮತ್ತು ಆರೋಗ್ಯ ಶಿಬಿರಗಳ ಆಯೋಜನೆ ಇತ್ಯಾದಿ ಕ್ಷೇತ್ರಗಳ ಮೂಲಕ ಸಾಮಾಜಿಕ ಕಳಕಳಿಯನ್ನು ಹೊಂದಿ ಯೋಜನಾಬದ್ಧವಾಗಿ
ಕಾರ್ಯನಿರ್ವಹಿಸುತ್ತಿರುವುದು ಮಲೆನಾಡ ಸೃಷ್ಟಿ ಸೊಬಗಿನ ಮಧ್ಯೆ ಮಠದ ಮೆರುಗನ್ನು ವೃದ್ಧಿಸಿದಂತಾಗಿದೆ ಎಂದರು.

ಶ್ರೀ ಗುರುಬಸವಸ್ವಾಮೀಜಿ ಅವರ ಕಾಲದಲ್ಲಿ ಶಿವಮೊಗ್ಗದಲ್ಲಿ ಮಠದ ಶಾಖೆಯನ್ನು ಪ್ರಾರಂಭಿಸಲಾಯಿತು. ಕಳೆದ
ಹಲವಾರು ವರ್ಷಗಳಿಂದ ನಿರಂತರವಾಗಿ ಧರ್ಮ ಜಾಗೃತಿಗಾಗಿ ಪ್ರತಿ ತಿಂಗಳ ಅಮಾವಾಸ್ಯೆಯಂದು ಮಾಸಿಕ ಶಿವಾನುಭವ ಗೋಷ್ಠಿ, ನಿತ್ಯ ದಾಸೋಹ, ಶಿಕ್ಷಣ ಕ್ಷೇತ್ರದಲ್ಲಿ ಗುರು ಬಸವೇಶ್ವರ ವಿದ್ಯಾಪೀಠದ ಪ್ರಾಥಮಿಕ, ಪ್ರೌಢಶಾಲೆ, ಬಿಇಡಿ ಕಾಲೇಜು ಸೇರಿದಂತೆ 17 ಶಾಲಾ ಕಾಲೇಜುಗಳು, ಸಂಸ್ಕೃತ ಪಾಠಶಾಲೆ, ಶಿಶುವಿಹಾರ, ಪ್ರಸಾದ ನಿಲಯ,
ಅನಾಥಾಲಯ, ವಿದ್ಯಾರ್ಥಿ ನಿಲಯ, ಮಠದ ಪ್ರಾಂಗಣದಲ್ಲಿ ವಿವಿಧ ಕ್ರೀಡಾ ಸ್ಪರ್ಧೆ, ಸಾಂಸ್ಕೃತಿಕ ಪ್ರದರ್ಶನ, ಧಾರ್ಮಿಕ ಗೋಷ್ಠಿ, ಶರಣ ಸಾಹಿತ್ಯ ಸಮ್ಮೇಳನ ಮತ್ತು ಭಾವೈಕ್ಯ ಸಮ್ಮೇಳನ ಹಾಗೂ ಕಂಚಿನ ದೀಪ ರಥೋತ್ಸವ ಇತ್ಯಾದಿ ವೈವಿಧ್ಯಮಯ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರುತ್ತಿರುವುದು ಶ್ರೀಗಳ ಆಡಳಿತದ ಶ್ರೇಷ್ಠತೆಯನ್ನು ಬಿಂಬಿಸುತ್ತದೆ ಎಂದರು. ಜೈಶೀಲಪ್ಪ ಗೌಡ, ಜಗನ್ನಾಥ್‌, ರವಿಕುಮಾರ್‌, ಮಲ್ಲಿಕಾರ್ಜುನ್‌, ಚಂದ್ರಶೇಖರ್‌ ಮತ್ತಿತರರು ಇದ್ದರು.

ಆಯಸ್ಸು ಸಾಗುತ್ತಾ ಹೋಗುತ್ತದೆ. ಎಷ್ಟು ಕಾಲ ಬದುಕಿದ್ದೇವೆ ಎಂಬುದಕ್ಕಿಂತ ಸಾಧನೆಗಳು ಪ್ರಧಾನವಾದುದು. ಬದುಕಿನ ಸಾರ್ಥಕತೆ ಮುಖ್ಯ. ಹುಟ್ಟು ಹಬ್ಬ ಎನ್ನುವುದು ನಮ್ಮ ಪೂರ್ವಾಶ್ರಮದ್ದಾಗಿದೆ. ನಾವುಗಳು ಪೀಠಾಧ್ಯಕ್ಷರಾದ ದಿನ ನಮ್ಮ ನಿಜವಾದ ಜನ್ಮದಿನವಾಗಿದೆ.
 ಡಾ| ಶ್ರೀಮಲ್ಲಿಕಾರ್ಜುನ ಮಹಾಸ್ವಾಮೀಜಿ

ಟಾಪ್ ನ್ಯೂಸ್

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.