ಸೆ. 5ರಿಂದ ಕಾಂತಮಂಗಲ ಸೇತುವೆ ದುರಸ್ತಿ


Team Udayavani, Aug 30, 2018, 11:03 AM IST

30-agust-6.jpg

ಸುಳ್ಯ : ಕುಸಿದು ಬೀಳುವ ಹಂತದಲ್ಲಿರುವ ಅಂತಾರಾಜ್ಯ ಸಂಪರ್ಕ ರಸ್ತೆಯ ಕಾಂತಮಂಗಲ ಸೇತುವೆ ದುರಸ್ತಿಗೆ ಮುಹೂರ್ತ ಕೂಡಿ ಬಂದಿದೆ. ಮಂಜೂರಾತಿ 5 ಲಕ್ಷ ರೂ. ಅನುದಾನ ಸೇರಿ ಒಟ್ಟು 15 ಲಕ್ಷ ರೂ. ವೆಚ್ಚದಲ್ಲಿ ಸೆ. 5ರಿಂದ ಸೇತುವೆ ದುರಸ್ತಿ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಸುಳ್ಯ-ಅಜ್ಜಾವರ-ಮಂಡೆಕೋಲು ರಸ್ತೆಯ ಕಾಂತಮಂಗಲದಲ್ಲಿ ಪಯಸ್ವಿನಿ ನದಿಗೆ 35 ವರ್ಷಗಳ ಹಿಂದೆ ನಿರ್ಮಿಸಿರುವ ಸೇತುವೆ ಶಿಥಿಲಾವಸ್ಥೆಗೆ ತಲುಪಿತ್ತು. ಮೇಲ್ಪದರ ಶಿಥಿಲಗೊಂಡು, ದೊಡ್ಡದಾದ ಬಿರುಕು ಸೃಷ್ಟಿಯಾಗಿದೆ. ಸೇತುವೆ ಮೇಲೆ ನಿಂತರೆ ಬಿರುಕಿನಲ್ಲಿ ನದಿಯ ನೀರು ಕಾಣುತ್ತಿದೆ. ಕಬ್ಬಿಣದ ಪ್ಲೇಟುಗಳು ತುಕ್ಕು ಹಿಡಿದಿವೆ. ವಾಹನ ಸವಾರರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿತ್ತು.

15 ಲಕ್ಷ ರೂ. ಅಗತ್ಯ
ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ 10 ಲಕ್ಷ ರೂ. ಪ್ರಸ್ತಾವನೆಯಲ್ಲಿ 5 ಲಕ್ಷ ರೂ. ಬಿಡುಗಡೆಯಾಗಿದೆ. ಜಿ.ಪಂ. ಯೋಜನೆಯಡಿ 5 ಲಕ್ಷ ರೂ. ಮಂಜೂರಾತಿ ಹಂತದಲ್ಲಿದ್ದು, ಬಿಡುಗಡೆಗೊಳ್ಳಲು ಬಾಕಿ ಇದೆ. ಶಾಸಕರ ಮೂಲಕ 5 ಲಕ್ಷ ರೂ.ಗೆ ಬೇಡಿಕೆ ಇಡಲಾಗಿದೆ. ಒಟ್ಟು 15 ಲಕ್ಷ ರೂ. ಅನುದಾನದಲ್ಲಿ ಈಗ 5 ಲಕ್ಷ ರೂ. ಬಿಡುಗಡೆಯಾಗಿದ್ದು, ಉಳಿದ ಅನುದಾನ ಮಂಜೂರುಗೊಳ್ಳಬೇಕಷ್ಟೆ ಎಂದು ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಮಾಹಿತಿ ನೀಡಿದೆ.

ಒಟ್ಟು 15 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ ಆರಂಭಿಸಲಾಗುತ್ತದೆ. ಸೇತುವೆಯಲ್ಲಿ ತುಕ್ಕು ಹಿಡಿದ ಕಬ್ಬಿಣದ ಪ್ಲೇಟ್‌ ಬದಲಾವಣೆ, ಎರಡು ಕಡೆಗಳಲ್ಲಿ ಕಾಂಕ್ರೀಟ್‌ ಮೊದಲಾದ ದುರಸ್ತಿ ಕಾಮಗಾರಿ ನಡೆಯಲಿದೆ. ದುರಸ್ತಿ ಸಂದರ್ಭ ಬೇರೆ ಅವಶ್ಯಕತೆ ಕಂಡು ಬಂದಲ್ಲಿ ಆ ಕೆಲಸವನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಒಂದು ತಿಂಗಳು ಬಂದ್‌
ಸುಳ್ಯದಿಂದ ಕಾಂತಮಂಗಲ-ಅಜ್ಜಾವರ, ಮಂಡೆಕೋಲು ಮೂಲಕ ಕಾಸರಗೋಡು ಸಂಪರ್ಕಿಸುವ ಅಂತಾರಾಜ್ಯ ಸಂಪರ್ಕ ರಸ್ತೆ ಸೆ. 5ರಿಂದ ಅ. 5ರ ತನಕ ಬಂದ್‌ ಆಗಲಿದೆ. ಇಲ್ಲಿ ಘನ ಮತ್ತು ಲಘು ವಾಹನ ಓಡಾಟ ನಿರ್ಬಂಧಿಸಲಾಗುತ್ತದೆ.

ಪರ್ಯಾಯ ರಸ್ತೆಗಳು
ಕಾಂತಮಂಗಲ ಸೇತುವೆ ಮೂಲಕ ಸಂಚರಿಸುವ ವಾಹನಗಳಿಗೆ ನಾಲ್ಕು ಪರ್ಯಾಯ ರಸ್ತೆಯನ್ನು ಗುರುತಿಸಲಾಗಿದೆ. ಜಿ.ಪಂ. ಎಂಜಿನಿಯರಿಂಗ್‌ ವಿಭಾಗ ಈ ಕುರಿತು ಮಾಹಿತಿ ನೀಡಿದೆ. ದುರಸ್ತಿ ವೇಳೆಸಂಚರಿಸಲು ಬಳಸಬಹುದಾದ ರಸ್ತೆಗಳು ಈ ಕೆಳಗಿನಂತಿವೆ.

1. ಮಂಡೆಕೋಲು-ಮುರೂರು- ಜಾಲ್ಸೂರು-ಸುಳ್ಯ
2. ಅಡ್ಪಂಗಾಯ – ಪೇರಾಲು- ಬೈತಡ್ಕ- ಸುಳ್ಯ
3. ಅಜ್ಜಾವರ-ಪೇರಾಲು-ಬೈತಡ್ಕ- ಸುಳ್ಯ
4. ಅಜ್ಜಾವರ-ನಾರ್ಕೋಡು- ಸುಳ್ಯ

ಸಹಕಾರ ಅಗತ್ಯ
ಕಾಂತಮಂಗಲ ಸೇತುವೆ ದುರಸ್ತಿ ಸೆ. 5ರಿಂದ ಆರಂಭಗೊಳ್ಳುತ್ತದೆ. ಮುಂದಿನ ಒಂದು ತಿಂಗಳು ವಾಹನ ಸಂಚಾರ ಬಂದ್‌ ಮಾಡಲಾಗಿದೆ. ಪರ್ಯಾಯ ರಸ್ತೆ ವ್ಯವಸ್ಥೆ ಮಾಡಲಾಗಿದೆ. ವಾಹನ ಸವಾರರು ಆ ರಸ್ತೆ ಬಳಸಿಕೊಳ್ಳಬಹುದು. ದುರಸ್ತಿ ಸಂದರ್ಭದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ.
– ಮಣಿಕಂಠ,
ಜಿ.ಪಂ. ಎಂಜಿನಿಯರ್‌

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.