ಮೈತ್ರಿಗೆ 100:ರಾಜ್ಯದ ಜನರಿಗೆ ಕೃತಜ್ಞತೆ; ರಾಹುಲ್ ಭೇಟಿ ಬಳಿಕ ಸಿಎಂ
Team Udayavani, Aug 30, 2018, 11:21 AM IST
ಹೊಸದಿಲ್ಲಿ: ಮೈತ್ರಿ ಸರ್ಕಾರ ಯಶಸ್ವಿಯಾಗಿ ನೂರು ದಿನ ಪೂರ್ಣಗೊಳಿಸಿದ್ದು , ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಸಿಎಂ ಎಚ್ಡಿಕೆ ಅವರು ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ 15 ನಿಮಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ನಮ್ಮ ಸರಕಾರ ಎರಡೂ ಪಕ್ಷಗಳ ಸಹಕಾರದೊಂದಿಗೆ ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ. ರೈತ ಸಮುದಾಯ ಬಯಸಿದ್ದನ್ನು ನಾವು ಈಡೇರಿಸಿದ್ದೇವೆ. ರಾಜ್ಯದ ಜನತೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ನಿರೀಕ್ಷೆಗಳನ್ನು ಸಂಪೂರ್ಣಗೊಳಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುವುದು ಮೊದಲ ಗುರಿ’ ಎಂದರು.
‘ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ನನ್ನ ಮೊದ ಆಧ್ಯತೆಯಾಗಿತ್ತು. ಆ ನಿಟ್ಟಿನಲ್ಲಿ ನಾನು ಯಶಸ್ವಿಯಾಗಿದ್ದೇನೆ. ಅಧಿಕಾರಿಗಳು ಜೊತೆಯಾಗಿ ಕೆಲಸ ಮಾಡಬೇಕು ನನ್ನ ಮತ್ತು ಸರ್ಕಾರದ ನಡವಳಿಕೆಯಿಂದ ಅಧಿಕಾರಿಗಳ ವಿಶ್ವಾಸವನ್ನು ಪಡೆದುಕೊಂಡಿದ್ದೇವೆ’.
‘ಮೈತ್ರಿ ಸರ್ಕಾರದಲ್ಲಿ ಆದಾಯ ಸಂಗ್ರಹಣೆಯಲ್ಲಿ ನಾವು ಹಿಂದೆ ಬಿದ್ದಿಲ್ಲ . ಆದಾಯ ಏರಿಕೆಯಾಗಿದ್ದು , ದಾಖಲೆಯ ಆದಾಯ ಸಂಗ್ರಹಿಸುವುದಲ್ಲಿ ನಾವು ಮುಂದಾಗಿದ್ದೇವೆ’.
‘ಕೊಡಗು ಪ್ರಕೃತಿ ವಿಕೋಪ ಮತ್ತು ಇತರ ಕಡೆಗಳಲ್ಲಿ ಆದ ವಿಕೋಪಗಳ ವೇಳೆ ಸರ್ಕಾರ ಸಮಯ ವ್ಯರ್ಥ ಮಾಡದೆ ತಕ್ಷಣ ಕ್ರಮ ಕೈಗೊಂಡಿದ್ದು ಇದು ಜನತೆಯಲ್ಲಿ ವಿಶ್ವಾಸ ಮೂಡಿಸಿದೆ’ ಎಂದರು.
‘ಸರ್ಕಾರಕ್ಕೆ ಸಂಪೂರ್ಣ ರಕ್ಷಣೆ ಇದೆ. ಯಾರ ವಿರುದ್ಧವೂ ನಾನು ದೂರು ನೀಡಿಲ್ಲ.ನನಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದೆ’ ಎಂದರು.
ಸಂಪುಟ ವಿಸ್ತರಣೆ,ನಿಗಮ ಮಂಡಳಿಗೆ ನೇಮಕ ಮಾಡುವ ಕುರಿತು ಮನವಿ ಮಾಡಿರುವುದಾಗಿ ಸಿಎಂ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ