ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧ ಕೈಬಿಡುವಂತೆ ಒತ್ತಾಯ


Team Udayavani, Aug 30, 2018, 12:35 PM IST

plastic-bag.jpg

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಬಗೆಯ ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧಿಸಿರುವ ಸರ್ಕಾರದ ಕ್ರಮದಿಂದ ಪ್ಲಾಸ್ಟಿಕ್‌ ಉದ್ಯಮಕ್ಕೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿರುವ ರಾಜ್ಯ ಪ್ಲಾಸ್ಟಿಕ್‌ ಸಂಘವು ಕೂಡಲೇ ನಿಷೇಧವನ್ನು ಕೈಬಿಡಬೇಕು ಎಂದು ಒತ್ತಾಯಿಸಿದೆ.

ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸಂಘವು ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ದಿನವಿಡೀ ಪ್ರತಿಭಟನೆ ನಡೆಸಲು ಮುಂದಾಗಿದೆ. ಇನ್ನೊಂದೆಡೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯು (ಎಫ್ಕೆಸಿಸಿಐ) ಸರ್ಕಾರ ನಿಷೇಧ ನಿರ್ಧಾರದ ಬಗ್ಗೆ ಪುನರ್‌ ಪರಿಶೀಲಿಸುವಂತೆ ಮನವಿ ಮಾಡಿದೆ.

ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಸರ್ಕಾರವು ಎಲ್ಲ ಬಗೆಯ ಪ್ಲಾಸ್ಟಿಕ್‌ ಬ್ಯಾಗ್‌ಗಳ ಉತ್ಪಾದನೆ, ಬಳಕೆಯನ್ನು ನಿಷೇಧಿಸಿದೆ. ಇದರಿಂದ ಹೋಟೆಲ್‌, ಆಟೊಮೊಬೈಲ್‌, ಗಾರ್ಮೆಂಟ್ಸ್‌, ರಫ್ತು ವ್ಯವಹಾರ ಸೇರಿದಂತೆ 17 ಉದ್ಯಮ ವಲಯಗಳಲ್ಲಿ ವಹಿವಾಟು ಏರುಪೇರು ಉಂಟಾಗಿದ್ದು, ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಪರ್ಯಾಯಗಳನ್ನು ಕಲ್ಪಿಸದೆ, ಸಾಧಕ- ಬಾಧಕ ಪರಿಶೀಲಿಸದೆ ನಿಷೇಧಿಸಿರುವುದರಿಂದ ಉದ್ಯಮಿಗಳು, ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ರಾಜ್ಯ ಪ್ಲಾಸ್ಟಿಕ್‌ ಸಂಘದ ಅಧ್ಯಕ್ಷ ವಿ. ವಿಜಯಕುಮಾರ್‌ ಹೇಳಿದರು.

ನಿಷೇಧ ಎಷ್ಟು ಸರಿ?: ರಾಜ್ಯದಲ್ಲಿ ಪ್ಲಾಸ್ಟಿಕ್‌ ಉತ್ಪನ್ನಗಳ ತಯಾರಿಕೆಗೆ ಅಗತ್ಯವಾದ ಯಂತ್ರೋಪಕರಣಗಳ ಮೇಲೆ 600 ಕೋಟಿ ರೂ. ಹೂಡಿಕೆಯಾಗಿದೆ. 75,000ಕ್ಕೂ ಹೆಚ್ಚು ನೌಕರರು ಈ ಉದ್ಯಮಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಉದ್ಯಮದಿಂದ ವಾರ್ಷಿಕವಾಗಿ 350 ಕೋಟಿ ರೂ.ನಷ್ಟು ತೆರಿಗೆ ಕೂಡ ಸರ್ಕಾರಕ್ಕೆ ಸಂಗ್ರಹವಾಗುತ್ತಿದೆ. ಹೀಗಿರುವಾಗ ಏಕಾಏಕಿ ನಿಷೇಧ ಹೇರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕಸದ ವಿಂಗಡನೆಯಲ್ಲಿ ಆಗುವ ತೊಡಕನ್ನು ಸರಿಪಡಿಸಿ ವೈಜ್ಞಾನಿಕ ವಿಲೇವಾರಿಗೆ ಒತ್ತು ನೀಡುವ ಬದಲಿಗೆ ಪ್ಲಾಸ್ಟಿಕ್‌ ಬ್ಯಾಗ್‌ಗಳನ್ನೇ ನಿಷೇಧಿಸುವುದು ಪರಿಹಾರವಲ್ಲ. ಈ ನಿಟ್ಟಿನಲ್ಲಿ ಸರ್ಕಾರ ನಿಷೇಧ ನಿರ್ಧಾರವನ್ನು ಪುನರ್‌ ಪರಿಶೀಲಿಸಬೇಕು. 2016ರ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣಾ ನಿಯಮಾವಳಿಯಲ್ಲಿ 50 ಮೈಕ್ರಾನ್‌ಗಿಂತ ಹೆಚ್ಚು ಗುಣಮಟ್ಟದ ಪ್ಲಾಸ್ಟಿಕ್‌ ಬಳಕೆಗೆ ಅವಕಾಶವಿದ್ದು, ಅದರಂತೆ ರಾಜ್ಯದಲ್ಲೂ ಇದಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು.

ಶುಕ್ರವಾರ ಪ್ರತಿಭಟನೆ: ರಾಜ್ಯದಲ್ಲಿ 7,500ಕ್ಕೂ ಹೆಚ್ಚು ಪ್ಲಾಸ್ಟಿಕ್‌ ಹಾಗೂ ಸಂಬಂಧಿತ ವಸ್ತುಗಳ ಉತ್ಪಾದನಾ ಘಟಕಗಳಿವೆ. ಇದರಲ್ಲಿ ಮೂರನೇ ಎರಡರಷ್ಟು ಘಟಕಗಳು ಬೆಂಗಳೂರಿನಲ್ಲಿವೆ. ಆಯ್ದ ಪ್ಲಾಸ್ಟಿಕ್‌ ಸೇರಿದಂತೆ ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧದಿಂದ ಈಗಾಗಲೇ ಸಾವಿರಕ್ಕೂ ಹೆಚ್ಚು ಉದ್ಯಮಗಳು ಬಂದ್‌ ಆಗಿವೆ. ಉಳಿದ ಉದ್ಯಮಗಳು ಸಂಕಷ್ಟದಲ್ಲಿವೆ. ಆ ಹಿನ್ನೆಲೆಯಲ್ಲಿ ಶುಕ್ರವಾರ ಉದ್ಯಮಗಳ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯ ಕುಮಾರ್‌ ಹೇಳಿದರು.

ಎಫ್ಕೆಸಿಸಿಐ ಮನವಿ: ಉದ್ಯಮಿಗಳು ಪ್ಲಾಸ್ಟಿಕ್‌ ಕೈಗಾರಿಕಾ ವಲಯದಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದು, ಪ್ಲಾಸ್ಟಿಕ್‌ ಬ್ಯಾಗ್‌ಗಳ ನಿಷೇಧದಿಂದ ಉದ್ಯಮಗಳಿಗೆ ತೀವ್ರ ಹೊಡೆತ ಬಿದ್ದಿದೆ. ರಾಜ್ಯದಲ್ಲಿ ವಾರ್ಷಿಕವಾಗಿ ಸಾವಿರಾರು ಕೋಟಿ ರೂ. ಮೊತ್ತದ ಪ್ಲಾಸ್ಟಿಕ್‌ ಉತ್ಪನ್ನಗಳು ತಯಾರಾಗುತ್ತಿದ್ದು, ಇದರಲ್ಲಿ ಬಹುಪಾಲು ಪ್ಲಾಸ್ಟಿಕ್‌ ಮರುಬಳಕೆಗೆ ಸೂಕ್ತವಾಗಿದೆ. ಹೀಗಿರುವಾಗ ಏಕಾಏಕಿ ನಿಷೇಧ ಸರಿಯಲ್ಲ ಎಂದು ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಎಸ್‌. ಶೆಟ್ಟಿ ಹೇಳಿದ್ದಾರೆ.

ಇನ್ನೊಂದೆಡೆ ರಫ್ತು ಉದ್ಯಮಕ್ಕೂ ಹೊಡೆತ ಬಿದ್ದಿದೆ. ಪ್ಯಾಕೇಜಿಂಗ್‌ಗಾಗಿ ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧಿಸಿರುವುದರಿಂದ ಸರಕು- ಸೇವೆಗಳ ರಫ್ತು ವಹಿವಾಟಿಗೂ ಅಡ್ಡಿ ಉಂಟಾಗಿದೆ. ಜತೆಗೆ ಕಿರಾಣಿ ಅಂಗಡಿಗಳ ವ್ಯಾಪಾರ ಮೇಲೂ ಪರಿಣಾಮ ಬೀರಿದೆ. ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳು ವೈಜ್ಞಾನಿಕವಾಗಿ ಪ್ಲಾಸ್ಟಿಕ್‌ ವಿಲೇವಾರಿಗೆ ಕ್ರಮ ಕೈಗೊಂಡರೆ ಸಮಸ್ಯೆ ನಿವಾರಣೆಯಾಗಲಿದೆ.

ಆ ಹಿನ್ನೆಲೆಯಲ್ಲಿ ಸರ್ಕಾರ ಪ್ಲಾಸ್ಟಿಕ್‌ ಬ್ಯಾಗ್‌ ನಿಷೇಧದ ಬಗ್ಗೆ ಪುನರ್‌ಪರಿಶೀಲಿಸಬೇಕು. ಪರ್ಯಾಯ ಸಾಧನಗಳು ರೂಪುಗೊಳ್ಳುವವರೆಗೆ ಪ್ಲಾಸ್ಟಿಕ್‌ ಉದ್ಯಮಗಳ ರಕ್ಷಣೆಗೆ ಧಾವಿಸಬೇಕು. ಜತೆಗೆ ಪ್ಲಾಸ್ಟಿಕ್‌ ಉತ್ಪಾದಕರು, ವ್ಯಾಪಾರಿಗಳಿಗೆ ಅಧಿಕಾರಿಗಳು ಕಿರುಕುಳ ನೀಡದಂತೆ ಕ್ರಮ ವಹಿಸಬೇಕು ಎಂದು ಕೋರಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.