ಕೊಲ್ಕತ್ತಾ ಕಲಾವಿದರ ಕೈಚಳಕದಲ್ಲಿ ವಿನಾಯಕ


Team Udayavani, Aug 30, 2018, 12:55 PM IST

dvg-1.jpg

ದಾವಣಗೆರೆ: ವಿಘ್ನ ನಿವಾರಕ ವಿನಾಯಕನ ಹಬ್ಬಕ್ಕೆ ಇನ್ನು ಕೆಲವೇ ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ದೇವನಗರಿಯಲ್ಲಿ ವೈವಿಧ್ಯಮಯ ಗಣೇಶಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪಿ.ಬಿ. ರಸ್ತೆಯ ಬೀರಲಿಂಗೇಶ್ವರ ದೇವಸ್ಥಾನ
ಆವರಣ, ಹೊಳೆಹೊನ್ನೂರು ತೋಟದ ಉಮಾಮಹೇಶ್ವರಿ ದೇವಸ್ಥಾನದ ಬಳಿ ಸೇರಿದಂತೆ ನಾಲ್ಕಾರು ಕಡೆ ಕೊಲ್ಕತ್ತಾ ಮೂಲದ ಕಲಾವಿದರು 5ರಿಂದ 12 ಅಡಿಗಿಂತ ದೊಡ್ಡ ದೊಡ್ಡ ಪರಿಸರ ಸ್ನೇಹಿ ಗಣೇಶಮೂರ್ತಿಗಳ ತಯಾರಿಕೆಯಲ್ಲಿ
ನಿರತರಾಗಿದ್ದಾರೆ.

ಅಂಬಾರಿಯಲ್ಲಿ ಆಸೀನ, ಶ್ರೀಕೃಷ್ಣ ಅರ್ಜುನನ ಸಾರಥಿಯಾಗಿ, ಛತ್ರಪತಿ ಶಿವಾಜಿ, ಆಕಳು ಮೇಲೆ ಈಶ್ವರ ಗಣಪ, ಡಮರು, ಶಂಕು, ತಬಲ, ಕಾಳಿಂಗ ಸರ್ಪದ ಮೇಲೆ ನೃತ್ಯ ಮಾಡುವ ಗಣಪ….ಹೀಗೆ ವಿವಿಧ ಅವತಾರದ ಗಣೇಶಮೂರ್ತಿಗಳು ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಕೊಲ್ಕತ್ತಾ ಮೂಲದ ರಂಜಿತ್‌ಪಾಲ್‌ ಅವರ ನೇತೃತ್ವದ ತಂಡದಿಂದ ರೂಪುಗೊಳ್ಳುತ್ತಿವೆ. ಮೂರ್ತಿ ತಯಾರಿ…. ಭತ್ತದ ಹುಲ್ಲು, ಬಿದಿರು, ಮಣ್ಣು ಹಾಗೂ ನೈಸರ್ಗಿಕ ಬಣ್ಣ ಬಳಸಿಕೊಂಡು 8 ಜನರ ತಂಡ ಮೂರ್‍ನಾಲ್ಕು ತಿಂಗಳಿನಿಂದಲೇ 5ರಿಂದ 14 ಅಡಿಗಳವರೆಗಿನ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದೆ.

5ರಿಂದ 8 ಅಡಿ ಎತ್ತರದ ಮೂರ್ತಿಗೆ 8 ರಿಂದ 10 ಸಾವಿರ ರೂ., 10ರಿಂದ 14 ಅಡಿ ಎತ್ತರದ ಗಣಪತಿಗಳಿಗೆ 10ರಿಂದ 30 ಸಾವಿರ ರೂ. ವರೆಗೂ ಬೆಲೆ ನಿಗದಿ ಮಾಡಲಾಗಿದೆ. ಗ್ರಾಹಕರು ಕೇಳುವ ಮಾದರಿಯ ಸುಂದರ ಗಣಪತಿ ಮೂರ್ತಿ ತಯಾರು ಮಾಡಿಕೊಡುತ್ತೇವೆ. ಈಗ ಪ್ಲಾಸ್ಟ್‌ರ್‌ ಆಫ್‌ ಪ್ಯಾರಿಸ್‌ ಗಣಪತಿಗಳ ನಿರ್ಮಾಣ ಸ್ವಲ್ಪ ಕಡಿಮೆಯಾಗಿರುವ
ಬೆನ್ನಲ್ಲೇ ಮಣ್ಣಿನ ಗಣೇಶ ಮೂರ್ತಿಗಳಿಗೆ ಡಿಮ್ಯಾಂಡ್‌ ಇದೆ. ಹಾಗಾಗಿ ಮಣ್ಣಿನ ಗಣೇಶ ಮೂರ್ತಿ ನಿರ್ಮಾಣದಲ್ಲಿ ತೊಡಗಿರುವ ಬಹುತೇಕ ಕಲಾವಿದರು ನಿಟ್ಟುಸಿರು ಬಿಡುವಂತಾಗಿದೆ ಎನ್ನುತ್ತಾರೆ ಮೂರ್ತಿ ತಯಾರಕರು.

ಕೆಲವರಿಗೆ ಮೂರ್ತಿ ತಯಾರಿಯೇ ಕಾಯಕ… ನಗರದ ಹೊಂಡದ ಸರ್ಕಲ್‌ ಬಳಿಯ ಚಿತ್ರಗಾರಗಲ್ಲಿ, ಜಾಲಿನಗರ, ಅಶೋಕನಗರ, ವಿನೋಬನಗರ ಸೇರಿದಂತೆ ಹಲವೆಡೆ ಮನೆಗಳಲ್ಲಿ ಮಣ್ಣಿನ ಗಣೇಶ ಮೂರ್ತಿ ತಯಾರಿಸಿ, ಮಾರಾಟ ಮಾಡುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ 35ಕ್ಕಿಂತ ಹೆಚ್ಚು ಕುಟುಂಬಗಳು ಹಬ್ಬಕ್ಕೂ ಆರು ತಿಂಗಳ ಮುಂಚಿತವಾಗಿ ಮೂರ್ತಿಗಳ ತಯಾರಿಸುತ್ತಾ ತಮ್ಮ ಬದುಕು ರೂಪಿಸಿಕೊಳ್ಳುವ ಕಾಯಕದಲ್ಲಿ ತೊಡಗಿವೆ.

ಜೇಡಿಮಣ್ಣು ದುಬಾರಿ…. ಗಣೇಶ ಮೂರ್ತಿಗಳ ತಯಾರಿಕೆಗೆ ಬೇಕಾದ ಜೇಡಿಮಣ್ಣು ಎಲ್ಲೆಡೆ ಸಿಗದು. ನದಿ ಪಾತ್ರದ ತಟಗಳಲ್ಲಿ ದೊರೆಯುವ ಜೇಡಿಮಣ್ಣಿನ ಟ್ರ್ಯಾಕ್ಟರ್‌ ಲೋಡ್‌ ಒಂದಕ್ಕೆ 7 ಸಾವಿರ ರೂ. ನೀಡಬೇಕಿದೆ. ಈ ಮೊತ್ತ ಸಣ್ಣ ಸಣ್ಣ ಮೂರ್ತಿ ತಯಾರಕರಿಗೆ ಹೊರೆ ಎನಿಸುತ್ತದೆ. ಆದರೆ ದೊಡ್ಡ ಮೂರ್ತಿಗಳ ತಯಾರಕರ ಮೇಲೆ ಈ ಬೆಲೆ ಹೆಚ್ಚಳದ ಪರಿಣಾಮ ಕಡಿಮೆ ಎನ್ನುತ್ತಾರೆ ಚಿತ್ರಗಾರ ಗಲ್ಲಿಯ ಗಣೇಶ ಮೂರ್ತಿ ತಯಾರಕ ವಿಜಯ್‌.

ಪಿಒಪಿ ಹಾವಳಿ ನಿಂತಿಲ್ಲ… ಮಣ್ಣು , ಹತ್ತಿ, ನಾರು, ಬಣ್ಣ ಸೇರಿದಂತೆ ಇತರೆ ಪರಿಕರಗಳ ಬೆಲೆ ದುಬಾರಿ ಆಗಿವೆ. ಆದ್ದರಿಂದ ಸಣ್ಣ ಸಣ್ಣ ಮೂರ್ತಿಗಳಿಗೆ 100ರಿಂದ 300 ರೂ. ವರೆಗೆ ಹಾಗೂ ನಾಲ್ಕೈದು ಅಡಿಗಿಂತ ದೊಡ್ಡ ಮೂರ್ತಿಗಳನ್ನು 5ರಿಂದ 8 ಸಾವಿರ ರೂ.ವರೆಗೆ ಮಾರಾಟ ಮಾಡಲಾಗುವುದು ಎನ್ನುತ್ತಾರೆ ಅವರು.  ಇದೀಗ ಮಾರುಕಟ್ಟೆಯಲ್ಲಿ ಪಿಒಪಿ ಗಣಪತಿಗಳು ಹೆಚ್ಚು ಕಂಡು ಬರದೇ ಇದ್ದರೂ ಹಬ್ಬ ಎರಡು ದಿನ ಇರುವಾಗ ಮಹಾರಾಷ್ಟ್ರ, ಕೊಲ್ಲಾಪುರ ಮುಂತಾದ ಕಡೆಗಳಿಂದ ಮಾರುಕಟ್ಟೆಗೆ ಪಿಒಪಿ ಗಣೇಶ ಮೂರ್ತಿಗಳು ಲಗ್ಗೆ ಇಡುತ್ತವೆ. ಹೀಗಾಗಿ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಸ್ಥಳೀಯ ಮೂರ್ತಿ ತಯಾರಕರು.

ಪರಿಸರದ ಬಗ್ಗೆ ಇತ್ತೀಚೆಗೆ ಜನರಲ್ಲಿ ಜಾಗೃತಿ ಮೂಡುತ್ತಿದೆ. ಹಾಗಾಗಿ ಮನೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಪೂಜಿಸುವ ಬಹುತೇಕ ಜನರು ಮಣ್ಣಿನ ಗಣೇಶ ಮೂರ್ತಿ ಖರೀದಿಸಲು ಮುಂಗಡವಾಗಿ ಹೆಸರು ಬರೆಸುತ್ತಾರೆ. ಇನ್ನೂ ಕೆಲವರು ಯಾವುದೇ ರೀತಿ ಬಣ್ಣ ಲೇಪನ ಮಾಡದೇ ಇರುವ ಮೂರ್ತಿಗಳನ್ನು ಖರೀದಿಸಲು ಉತ್ಸಾಹ ತೋರಿಸುತ್ತಿದ್ದಾರೆ ಎನ್ನುತ್ತಾರೆ ಮೂರ್ತಿ ತಯಾರಕ ಸಂತೋಷ್‌.

ಸಾರ್ವಜನಿಕರ ಸಹಕಾರ ಬೇಕು ಪಿಒಪಿ ಮೂರ್ತಿಗಳ ಮಾರಾಟದ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣಪತಿ ತಯಾರಕರು ಎಲ್ಲಿಯಾದರೂ ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಸ್ಥಳೀಯ ಸಂಸ್ಥೆಗಳ ಗಮನಕ್ಕೆ ತರಬೇಕು. ಆಗ ಸಂಸ್ಥೆಗಳು ಪರಿಶೀಲನೆ ನಡೆಸಿ, ವಶಕ್ಕೆ ಪಡೆಯಲಿವೆ. ಇನ್ನು ಸಾರ್ವಜನಿಕರು ಪರಿಸರಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸಬೇಕು. ಇದರಿಂದ ಹಬ್ಬದ ಆಚರಣೆ ಕಳೆಗಟ್ಟುವ ಜೊತೆಗೆ ಪರಿಸರ ಮಾಲಿನ್ಯ ತಡೆಗೆ ಕೈಜೋಡಿಸಿದಂತಾಗಲಿದೆ.
 ಕೆ.ಬಿ. ಕೊಟ್ರೇಶ್‌, ಜಿಲ್ಲಾ ಪರಿಸರ ಅಧಿಕಾರಿ

ಬಿಗಿ ಕ್ರಮ ಬೇಕಿದೆ
ಜಿಲ್ಲಾ ಗುರುಭವನದಲ್ಲಿ ಜಿಲ್ಲಾ ಮಣ್ಣಿನ ಗಣಪತಿಗಳ ತಯಾರಕರ ಸಂಘ ಹಾಗೂ ಪರಿಸರ ವೇದಿಕೆ ಸಹಯೋಗದಲ್ಲಿ ಈ ಬಾರಿ ಪರಿಸರ ಸ್ನೇಹಿ ಗಣಪತಿಗಳ ಮಾರಾಟ ಮಳಿಗೆ ತೆರೆಯುವ ಚಿಂತ ನೆ ಇದೆ. ವಿವಿಧ ಜಿಲ್ಲೆ, ತಾಲೂಕುಗಳಿಂದ ಮಾರಾಟಗಾರರು ಬರಲಿದ್ದಾರೆ. ಅಲ್ಲದೇ ಬ್ಯಾನ್‌ ಆದರೂ ಸಹ ನೆರೆ ರಾಜ್ಯಗಳಿಂದ ಬರುವ ಪಿಒಪಿ ಗಣೇಶಮೂರ್ತಿ ನಿಯಂತ್ರಿಸಲು ಹಬ್ಬದ ಒಂದು ವಾರಕ್ಕೂ ಮುನ್ನ ನಗರ ಪ್ರವೇಶಿಸುವ ಮಾರ್ಗ ಗಳಲ್ಲಿ ಸೂಕ್ತ ಪೊಲೀಸ್‌
ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. 
 ಗಿರೀಶ್‌ ದೇವರಮನೆ, ಪರಿಸರ ಸಂರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ

„ವಿಜಯ ಸಿ. ಕೆಂಗಲಹಳ್ಳಿ

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.